Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...