Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...