Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...