Homeಮುಖಪುಟಸಾರ್ವಜನಿಕವಾಗಿ ಆರೋಪಿಗಳನ್ನು ಥಳಿಸಲು ಅವಕಾಶ ಇದೆಯೇ?: ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಪ್ರಶ್ನೆ

ಸಾರ್ವಜನಿಕವಾಗಿ ಆರೋಪಿಗಳನ್ನು ಥಳಿಸಲು ಅವಕಾಶ ಇದೆಯೇ?: ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

”ಆರೋಪಿಗಳಿಗೆ ಸಾರ್ವಜನಿಕವಾಗಿ ಥಳಿಸುವುದಕ್ಕೆ ಅವಕಾಶ ನೀಡುವ ಯಾವುದೇ ನಿಬಂಧನೆ ಅಸ್ತಿತ್ವದಲ್ಲಿದೆಯೇ?” ಎಂದು ಗುಜರಾತ್ ಹೈಕೋರ್ಟ್ ಸೋಮವಾರ ರಾಜ್ಯ ಪೊಲೀಸರನ್ನು ಪ್ರಶ್ನಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ಖೇಡಾ ಜಿಲ್ಲೆಯ ಐವರು ಮುಸ್ಲಿಂ ಪುರುಷರನ್ನು ಪೊಲೀಸರು ಸಾರ್ವಜನಿಕವಾಗಿ ಥಳಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಅಕ್ಟೋಬರ್ 3 ರ ರಾತ್ರಿ, ಖೇಡಾದ ಉಂಧೇಲಾ ಗ್ರಾಮದಲ್ಲಿ, ಮುಸ್ಲಿಂ ಪುರುಷರ ಗುಂಪೊಂದು ಮಸೀದಿಯ ಸಮೀಪವಿರುವ ಗಾರ್ಬಾ ಸೈಟ್‌ಗೆ ಕಲ್ಲು ಎಸೆದಿದೆ ಎಂದು ಆರೋಪಿಸಲಾಗಿದೆ. ಮರುದಿನ, ಘಟನೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಐವರು ಮುಸ್ಲಿ ಸಮುದಾಯದ ಆರೋಪಿಗಳಾದ ಜಾಹಿರ್ಮಿಯಾ ಮಾಲೆಕ್, ಮಕ್ಸುದಾಬಾನು ಮಾಲೆಕ್, ಸಹದ್ಮಿಯಾ ಮಾಲೆಕ್, ಸಕಿಲ್ಮಿಯಾ ಮಾಲೆಕ್ ಮತ್ತು ಶಾಹಿದ್ರಾಜ ಮಾಲೆಕ್ ಅವರನ್ನು ಪೊಲೀಸರು ಹೊರಗೆಳೆದು, ಕಂಬಕ್ಕೆ ಕಟ್ಟಿಹಾಕಿ ಮತ್ತು ದೊಣ್ಣೆಯಿಂದ ಥಳಿಸಿದರು.

ಥಳಿಸುವಿಕೆಯ ವೀಡಿಯೊಗಳು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಲು ಪುರುಷರನ್ನು ಕೇಳಿದವು ಎಂದು ತೋರಿಸಿದೆ. ನಂತರ ಐವರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸ್ ಹಿಂಸಾಚಾರಕ್ಕೆ ಬಲಿಯಾದವರಲ್ಲಿ ನಾವೂ ಸೇರಿದ್ದೇವೆ ಮತ್ತು 15 ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸೋಮವಾರದ ವಿಚಾರಣೆಯಲ್ಲಿ, ಮುಸ್ಲಿಂ ಪುರುಷರನ್ನು ನಿಜವಾಗಿಯೂ ಥಳಿಸಲಾಗಿದೆಯೇ ಎಂದು ಕೇಳಿದಾಗ ಪೊಲೀಸರು ಸ್ಪಷ್ಟವಾದ ಹೇಳಿಕೆಯನ್ನು ನೀಡಲಿಲ್ಲ ಎಂದು ನ್ಯಾಯಾಲಯ ಹೇಳಿದೆ.

”ಇದು ನಿಮ್ಮ ಅಧಿಕಾರಿಯ ಕರ್ತವ್ಯ ಎಂದು ನೀವು ಹೇಳಬಹುದು ಮತ್ತು ಅವರು ಇದನ್ನು ಮಾಡದಿದ್ದರೆ, ಪರಿಸ್ಥಿತಿ ಬೇರೆ ಮಟ್ಟಕ್ಕೆ ಹೋಗುತ್ತಿತ್ತು ಅಥವಾ ಈಗ ನೀವು ಥಳಿಸಿಲ್ಲ ಎಂದು ಹೇಳಬಹುದು,  ದಾಖಲೆಯಲ್ಲಿರುವ ಪುರಾವೆಗಳನ್ನು ಪರಿಗಣಿಸಬಾರದು ಎಂದು ನೀವು ಹೇಳಬಹುದು” ಎಂದು ನ್ಯಾಯಾಲಯವು ಪಬ್ಲಿಕ್ ಪ್ರಾಸಿಕ್ಯೂಟರ್ ಮಿಥೇಶ್ ಅಮೀನ್ ಅವರಿಗೆ ಹೇಳಿತು.

ಆದರೆ, ಈ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಪಷ್ಟ ಹೇಳಿಕೆ ನೀಡಲು ನಿರಾಕರಿಸಿದರು ಮತ್ತು ಪ್ರಕರಣದಲ್ಲಿ ಮುಸ್ಲಿಂ ಅರ್ಜಿದಾರರು ಸುಳ್ಳು ಮನವಿ ಮಾಡಿದ್ದಾರೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸಲು ಮುಸ್ಲಿಮರು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

”ಹೋಳಿ ಹಬ್ಬದ ಸಂದರ್ಭದಲ್ಲಿಯೂ ಆ ಪ್ರದೇಶದಲ್ಲಿ ಕೆಲವು ಘಟನೆಗಳು ನಡೆದಿವೆ ಎಂದು ಅವರು ಹೇಳಿದರು. ”ಈ ಸ್ಥಳವು ಸೂಕ್ಷ್ಮವಾಗಿದೆ ಮತ್ತು ಹಲವಾರು ಸಂದರ್ಭಗಳಲ್ಲಿ ಸೂಕ್ಷ್ಮತೆಯು ಅಲ್ಲಿ ಭುಗಿಲೆದ್ದಿದೆ. ಅವರ ಷಡ್ಯಂತ್ರದ ಭಾಗವಾಗಿ, ಅವರು ಹಿಂದೂಗಳ ಹಬ್ಬವನ್ನು ಹಳಿತಪ್ಪಿಸಲು ಕಲ್ಲು ತೂರಾಟ ನಡೆಸಲಾಸಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು.

ವಾಗ್ವಾದದ ಸಮಯ, ಮುಸ್ಲಿಂ ಪುರುಷರ ಬಂಧನ ಮತ್ತು ಅರ್ಜಿಯಲ್ಲಿ ತಿಳಿಸಲಾದ ಸಮಯದಲ್ಲೂ ವ್ಯತ್ಯಾಸಗಳಿವೆ ಎಂದು ಅವರು ವಾದಿಸಿದರು.

ಇದಕ್ಕೆ ನ್ಯಾಯಾಧೀಶರು ಹೇಳಿದರು, ”ಸಮಯದಲ್ಲಿನ ವ್ಯತ್ಯಾಸವನ್ನು ಮರೆತುಬಿಡಿ. ಇದನ್ನು [ಹೊಡೆಯುವುದು] ಮಾಡಬಹುದೇ? ಆರೋಪಿಯನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಲಾಠಿ ಪ್ರಹಾರ ಮಾಡಬಹುದಾದ ಯಾವುದೇ ನಿಬಂಧನೆಯನ್ನು ನೀವು ಸೂಚಿಸುವಿರಾ?” ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...