Homeಮುಖಪುಟಸಾರ್ವಜನಿಕವಾಗಿ ಆರೋಪಿಗಳನ್ನು ಥಳಿಸಲು ಅವಕಾಶ ಇದೆಯೇ?: ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಪ್ರಶ್ನೆ

ಸಾರ್ವಜನಿಕವಾಗಿ ಆರೋಪಿಗಳನ್ನು ಥಳಿಸಲು ಅವಕಾಶ ಇದೆಯೇ?: ಪೊಲೀಸರಿಗೆ ಗುಜರಾತ್ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

”ಆರೋಪಿಗಳಿಗೆ ಸಾರ್ವಜನಿಕವಾಗಿ ಥಳಿಸುವುದಕ್ಕೆ ಅವಕಾಶ ನೀಡುವ ಯಾವುದೇ ನಿಬಂಧನೆ ಅಸ್ತಿತ್ವದಲ್ಲಿದೆಯೇ?” ಎಂದು ಗುಜರಾತ್ ಹೈಕೋರ್ಟ್ ಸೋಮವಾರ ರಾಜ್ಯ ಪೊಲೀಸರನ್ನು ಪ್ರಶ್ನಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಅಕ್ಟೋಬರ್‌ನಲ್ಲಿ ಖೇಡಾ ಜಿಲ್ಲೆಯ ಐವರು ಮುಸ್ಲಿಂ ಪುರುಷರನ್ನು ಪೊಲೀಸರು ಸಾರ್ವಜನಿಕವಾಗಿ ಥಳಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಅಕ್ಟೋಬರ್ 3 ರ ರಾತ್ರಿ, ಖೇಡಾದ ಉಂಧೇಲಾ ಗ್ರಾಮದಲ್ಲಿ, ಮುಸ್ಲಿಂ ಪುರುಷರ ಗುಂಪೊಂದು ಮಸೀದಿಯ ಸಮೀಪವಿರುವ ಗಾರ್ಬಾ ಸೈಟ್‌ಗೆ ಕಲ್ಲು ಎಸೆದಿದೆ ಎಂದು ಆರೋಪಿಸಲಾಗಿದೆ. ಮರುದಿನ, ಘಟನೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಐವರು ಮುಸ್ಲಿ ಸಮುದಾಯದ ಆರೋಪಿಗಳಾದ ಜಾಹಿರ್ಮಿಯಾ ಮಾಲೆಕ್, ಮಕ್ಸುದಾಬಾನು ಮಾಲೆಕ್, ಸಹದ್ಮಿಯಾ ಮಾಲೆಕ್, ಸಕಿಲ್ಮಿಯಾ ಮಾಲೆಕ್ ಮತ್ತು ಶಾಹಿದ್ರಾಜ ಮಾಲೆಕ್ ಅವರನ್ನು ಪೊಲೀಸರು ಹೊರಗೆಳೆದು, ಕಂಬಕ್ಕೆ ಕಟ್ಟಿಹಾಕಿ ಮತ್ತು ದೊಣ್ಣೆಯಿಂದ ಥಳಿಸಿದರು.

ಥಳಿಸುವಿಕೆಯ ವೀಡಿಯೊಗಳು ಸಾರ್ವಜನಿಕರಲ್ಲಿ ಕ್ಷಮೆಯಾಚಿಸಲು ಪುರುಷರನ್ನು ಕೇಳಿದವು ಎಂದು ತೋರಿಸಿದೆ. ನಂತರ ಐವರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸ್ ಹಿಂಸಾಚಾರಕ್ಕೆ ಬಲಿಯಾದವರಲ್ಲಿ ನಾವೂ ಸೇರಿದ್ದೇವೆ ಮತ್ತು 15 ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸೋಮವಾರದ ವಿಚಾರಣೆಯಲ್ಲಿ, ಮುಸ್ಲಿಂ ಪುರುಷರನ್ನು ನಿಜವಾಗಿಯೂ ಥಳಿಸಲಾಗಿದೆಯೇ ಎಂದು ಕೇಳಿದಾಗ ಪೊಲೀಸರು ಸ್ಪಷ್ಟವಾದ ಹೇಳಿಕೆಯನ್ನು ನೀಡಲಿಲ್ಲ ಎಂದು ನ್ಯಾಯಾಲಯ ಹೇಳಿದೆ.

”ಇದು ನಿಮ್ಮ ಅಧಿಕಾರಿಯ ಕರ್ತವ್ಯ ಎಂದು ನೀವು ಹೇಳಬಹುದು ಮತ್ತು ಅವರು ಇದನ್ನು ಮಾಡದಿದ್ದರೆ, ಪರಿಸ್ಥಿತಿ ಬೇರೆ ಮಟ್ಟಕ್ಕೆ ಹೋಗುತ್ತಿತ್ತು ಅಥವಾ ಈಗ ನೀವು ಥಳಿಸಿಲ್ಲ ಎಂದು ಹೇಳಬಹುದು,  ದಾಖಲೆಯಲ್ಲಿರುವ ಪುರಾವೆಗಳನ್ನು ಪರಿಗಣಿಸಬಾರದು ಎಂದು ನೀವು ಹೇಳಬಹುದು” ಎಂದು ನ್ಯಾಯಾಲಯವು ಪಬ್ಲಿಕ್ ಪ್ರಾಸಿಕ್ಯೂಟರ್ ಮಿಥೇಶ್ ಅಮೀನ್ ಅವರಿಗೆ ಹೇಳಿತು.

ಆದರೆ, ಈ ವೇಳೆ ಪಬ್ಲಿಕ್ ಪ್ರಾಸಿಕ್ಯೂಟರ್ ಸ್ಪಷ್ಟ ಹೇಳಿಕೆ ನೀಡಲು ನಿರಾಕರಿಸಿದರು ಮತ್ತು ಪ್ರಕರಣದಲ್ಲಿ ಮುಸ್ಲಿಂ ಅರ್ಜಿದಾರರು ಸುಳ್ಳು ಮನವಿ ಮಾಡಿದ್ದಾರೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಹಿಂದೂಗಳನ್ನು ಬೆದರಿಸಲು ಮುಸ್ಲಿಮರು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

”ಹೋಳಿ ಹಬ್ಬದ ಸಂದರ್ಭದಲ್ಲಿಯೂ ಆ ಪ್ರದೇಶದಲ್ಲಿ ಕೆಲವು ಘಟನೆಗಳು ನಡೆದಿವೆ ಎಂದು ಅವರು ಹೇಳಿದರು. ”ಈ ಸ್ಥಳವು ಸೂಕ್ಷ್ಮವಾಗಿದೆ ಮತ್ತು ಹಲವಾರು ಸಂದರ್ಭಗಳಲ್ಲಿ ಸೂಕ್ಷ್ಮತೆಯು ಅಲ್ಲಿ ಭುಗಿಲೆದ್ದಿದೆ. ಅವರ ಷಡ್ಯಂತ್ರದ ಭಾಗವಾಗಿ, ಅವರು ಹಿಂದೂಗಳ ಹಬ್ಬವನ್ನು ಹಳಿತಪ್ಪಿಸಲು ಕಲ್ಲು ತೂರಾಟ ನಡೆಸಲಾಸಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು.

ವಾಗ್ವಾದದ ಸಮಯ, ಮುಸ್ಲಿಂ ಪುರುಷರ ಬಂಧನ ಮತ್ತು ಅರ್ಜಿಯಲ್ಲಿ ತಿಳಿಸಲಾದ ಸಮಯದಲ್ಲೂ ವ್ಯತ್ಯಾಸಗಳಿವೆ ಎಂದು ಅವರು ವಾದಿಸಿದರು.

ಇದಕ್ಕೆ ನ್ಯಾಯಾಧೀಶರು ಹೇಳಿದರು, ”ಸಮಯದಲ್ಲಿನ ವ್ಯತ್ಯಾಸವನ್ನು ಮರೆತುಬಿಡಿ. ಇದನ್ನು [ಹೊಡೆಯುವುದು] ಮಾಡಬಹುದೇ? ಆರೋಪಿಯನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಲಾಠಿ ಪ್ರಹಾರ ಮಾಡಬಹುದಾದ ಯಾವುದೇ ನಿಬಂಧನೆಯನ್ನು ನೀವು ಸೂಚಿಸುವಿರಾ?” ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...