Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...