Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...