Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...