Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...