Homeಮುಖಪುಟಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ರಿಲಾಯನ್ಸ್‌ನ ಅಂಬಾನಿಗಳು ಹೇಳುತ್ತಿರುವುದು ನಿಜವೆ?

ಪ್ರತಿಭಟನಾ ನಿರತ ರೈತರು ರಿಲಾಯನ್ಸ್ ಆಸ್ತಿಪಾಸ್ತಿಗಳಿಗೆ ಹಾನಿಮಾಡಿದ್ದ ಹಿನ್ನಲೆಯಲ್ಲಿ ಕಂಪೆನಿಯು ತನಗೆ ಗುತ್ತಿಗೆ ಕೃಷಿಯಲ್ಲಿ ಆಸಕ್ತಿಯಿಲ್ಲ ಎಂದು ಹೇಳಿತ್ತು

- Advertisement -
- Advertisement -

ಇಂದು ರಿಲಾಯನ್ಸ್ ಸಂಸ್ಥೆ ಮುದ್ದಾಂ ಆಗಿ ಬಹಳ ಎಚ್ಚರಿಕೆಯಿಂದ ಡ್ರಾಫ್ಟ್ ಮಾಡಿದ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ, ತಾನು ಈ ಹಿಂದೆಯಾಗಲೀ ಇನ್ನು ಮುಂದೆಯಾಗಲೀ “ಕಾಂಟ್ರಾಕ್ಟ್” ಮತ್ತು “ಕಾರ್ಪೋರೇಟ್” ಫಾರ್ಮಿಂಗ್ ನಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿಲ್ಲ ಎಂದು ಹೇಳಿದೆ. ಪತ್ರಿಕಾ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

6700 ಕ್ಕೂ ಹೆಚ್ಚು ನಗರಗಳಲ್ಲಿ ವರ್ಷಕ್ಕೆ 1,30,566 ಕೋಟಿ ರೂ.ಗಳ ವ್ಯವಹಾರ (2018-19) ನಡೆಸುವ ರಿಲಾಯನ್ಸ್ ರಿಟೇಲ್ ಲಿಮಿಟೆಡ್ ತನ್ನ ಕಚ್ಛಾಮಾಲುಗಳನ್ನು ಹೇಗೆ ಸಂಗ್ರಹಿಸುತ್ತದೆ, ಅದರ ಗುಣಮಟ್ಟವನ್ನು ಹೇಗೆ ಪರಿಶೀಲಿಸಿ ನಿಯಂತ್ರಿಸುತ್ತದೆ ಎಂಬ ಕುತೂಹಲದಿಂದ, ಅವರ ವೆಬ್ ಸೈಟ್ ಗಳನ್ನು ತಡಕಾಡಿದಾಗ ಸಿಕ್ಕಿದ ಮಾಹಿತಿಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ.

  • ರಿಲಾಯನ್ಸ್ ಫ್ರೆಶ್ ತನ್ನ ವೆಬ್ ಸೈಟಿನಲ್ಲಿ Continuing Reliance’s hallowed tradition of backward integration, Reliance Retail directly partners with a large number of farmers and small vendors in a farm-to-fork model ಎಂದು ಹೇಳುತ್ತದೆ. ಇಲ್ಲಿ ಫಾರ್ಮ್ ಟು ಫೋರ್ಕ್ (ಗದ್ದೆಯಿಂದ ಊಟದ ಬಟ್ಟಲ ತನಕ) ರೈತರ ಜೊತೆ ಪಾಲುದಾರಿಕೆ ಎಂಬ ಬಹಳ ಅಸ್ಪಷ್ಟವಾದ ಮಾಹಿತಿ ಸಿಗುತ್ತದೆ.
  • ಗಮನಾರ್ಹವಾದ ಮಾಹಿತಿ ಸಿಕ್ಕಿದ್ದು, ರಿಲಾಯನ್ಸ್‌ನ ಸ್ವಯಂಸೇವಾ ವಿಂಗ್ ಆಗಿರುವ ರಿಲಾಯನ್ಸ್ ಫೌಂಡೇಷನ್ ವೆಬ್ ಸೈಟಿನಲ್ಲಿ. ಅಲ್ಲಿ, ಅವರ “Reliance Foundation Bharat India Jodo (RF BIJ) ಕಾರ್ಯಕ್ರಮದಡಿ, ಅವರು ಬಹಳ ಸ್ಪಷ್ಟವಾಗಿ ತಮ್ಮ ಸಂಸ್ಥೆಯು ಸೆಪ್ಟಂಬರ್ 2020ರ ಹೊತ್ತಿಗೆ ದೇಶದ 12 ರಾಜ್ಯಗಳಲ್ಲಿ 26 FPO (ರೈತ ಉತ್ಪಾದಕ ಸಂಸ್ಥೆಯ)ಗಳಿಗೆ MENTOR ಆಗಿ ಕೆಲಸ ಮಾಡಿರುವ ಬಗ್ಗೆ ಮತ್ತು ಅವು ಒಟ್ಟಾಗಿ 50 ಕೋಟಿ ರೂಗಳ ವ್ಯವಹಾರ ಮಾಡಿರುವ ಬಗ್ಗೆ ಹೇಳುತ್ತಾರೆ. (ಅದರ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲಿ ನೀಡಲಾಗಿರುವ ವಿವರಗಳೆಲ್ಲ, ಈಗ ಸರ್ಕಾರ ತಂದಿರುವ ಹೊಸ ಕೃಷಿ ನೀತಿಗೆ ಅನುಗುಣವಾಗಿಯೇ ಇರುವುದು ಬಹಳ ಸ್ಪಷ್ಟವಾಗಿ ಕಾಣಿಸುತ್ತದೆ.

ಇದನ್ನೂ ಓದಿ: ಇತ್ತ ಮಾತುಕತೆ; ಅತ್ತ ರೈತರ ಮೇಲೆ ಅಶ್ರುವಾಯು ದಾಳಿ – ಪ್ರಭುತ್ವದ ದಬ್ಬಾಳಿಕೆ ನೋಡಿ!

  • ಈ ನಡುವೆ, ಒರಿಸ್ಸಾದಲ್ಲಿ ರಿಲಾಯನ್ಸ್ ಫ್ರೆಷ್ ವ್ಯವಹಾರಗಳ ಮಾಡೆಲ್ ಬಗ್ಗೆ ಅಧ್ಯಯನ ನಡೆಸಿರುವ ಉತ್ಕಲ ವಿವಿಯ ವ್ಯವಹಾರ ಆಡಳಿತ ವಿಭಾಗದ ಅಧ್ಯಯನ ತಂಡದ ಅಂತಾರಾಷ್ಟ್ರೀಯ ಸೆಮಿನಾರ್ ಪೇಪರ್ ಒಂದು, ರಿಲಾಯನ್ಸ್ ಫ್ರೆಷ್‌ನ SWOT ವಿಶ್ಲೇಷಣೆ ಮಾಡಿದೆ. ಅದರಲ್ಲಿ “ಕಾಂಟ್ರಾಕ್ಟ್ ಫಾರ್ಮಿಂಗ್” ಸಂಸ್ಥೆಯ ತಾಕತ್ತುಗಳಲ್ಲಿ ಒಂದು ಎಂದು ದಾಖಲಿಸಲಾಗಿದೆ. (ಆ ಸೆಮಿನಾರ್ ಪೇಪರ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ರಿಲಾಯನ್ಸ್ ಅಂಬಾನಿ ಬಳಗ ಈ ತನಕ ಕಾಂಟ್ರಾಕ್ಟ್/ಕಾರ್ಪೋರೇಟ್ ಫಾರ್ಮಿಂಗಿಗೆ ಇಳಿದಿದೆಯೋ ಇಲ್ಲವೇ ಎಂಬುದಕ್ಕಿಂತಲೂ, ಸರ್ಕಾರದ ಈಗಷ್ಟೇ ಹೊರಬರುತ್ತಿರುವ “ಹೊಸ ಕೃಷಿ” ನೀತಿಗೆ ಈ ಸಂಸ್ಥೆಯ ಬಹಳ ಹಿಂದೆಯೇ ಸೂಕ್ತ ತಯಾರಿ ನಡೆಸಿದೆ, ರಂಗ ಸಜ್ಜುಮಾಡಿಟ್ಟುಕೊಂಡಿದೆ ಎಂಬುದು ಸ್ಪಷ್ಟ. ಇಲ್ಲಿ ಕಾನೂನು ಬಾಹಿರ ಏನೂ ಇಲ್ಲದಿರಬಹುದು. ಆದರೆ, ಅನೈತಿಕ ಅನ್ನಿಸಬಹುದಾದದ್ದು ಬಹಳ ಇದೆ ಎಂಬುದರಲ್ಲಿ ಏನೂ ಸಂಶಯ ಇಲ್ಲ.

ಈಗ ದಿಲ್ಲಿಯಲ್ಲಿ ಸೇರಿರುವ ರೈತರು ಚೆನ್ನಾಗಿಯೇ ಬಿಸಿ ಮುಟ್ಟಿಸಿರುವುದರಿಂದ, ಮೂಗು ಒತ್ತಿಹೋಗಿರುವುದರಿಂದ ಅಂಬಾನಿ ಬಳಗಕ್ಕೆ ಬಾಯಿ ಕಳೆಯದೇ ಬೇರೆ ದಾರಿ ಇಲ್ಲವಾಗಿದೆ.

ಇದನ್ನೂ ಓದಿ: ಬ್ರಾಂಡ್ ವಾಷ್ಡ್ ಬಿರಿಯಾನಿ; ಬಿತ್ತದೆ ಬೆಳೆಯದೆ ಕಂಪನಿಗಳಿಗೆ ಏಕಸ್ವಾಮ್ಯ ಹೊಂದಲು ಅವಕಾಶ ಕೊಡುವ ಕೃಷಿ ಕಾನೂನುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...