Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...