Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...

‘ಮಹಾತ್ಮ ಗಾಂಧಿ – ವಾಜಪೇಯಿ ಹಾಡಿದ್ದನ್ನೇ ನಾವು ಹಾಡಿದ್ದೇವೆ..’; ವಂದೇ ಮಾತರಂ ವಿವಾದದ ಕುರಿತು ಖರ್ಗೆ ಸ್ಪಷ್ಟನೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ವಂದೇ ಮಾತರಂ ಹಾಡಿದ ಬಗ್ಗೆ ನಡೆಯುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್...

ದೆಹಲಿ ಪೊಲೀಸರಿಂದ AAP ಶಾಸಕನ ಅಪಹರಣ?: ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ತುರ್ತು ವಿಚಾರಣೆಗೆ ಅಸ್ತು!

AAP ಶಾಸಕ ಕುಲ್ದೀಪ್ ಕುಮಾರ್ ಅವರನ್ನು ಅವರ ಮನೆಯಿಂದ ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಹೇಬಿಯಸ್ ಕಾರ್ಪಸ್ (Habeas Corpus) ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ಒಪ್ಪಿಗೆ...

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...