Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...