Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...