Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...