Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...