Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...