Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...