Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...