Homeಫ್ಯಾಕ್ಟ್‌ಚೆಕ್85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ನಿಜವೇ?

- Advertisement -
- Advertisement -

ಮಹಾರಾಷ್ಟ್ರದ ನಾಗ್ಪುರದ ಮುನಿಸಿಪಲ್ ಕಾರ್ಪೋರೇಷನ್ ನಡೆಸುವ ಇಂದಿರಾಗಾಂಧಿ ರುಗ್ನಾಲಯ ಆಸ್ಪತ್ರೆಯಲ್ಲಿ 85 ವರ್ಷದ RSS ಕಾರ್ಯಕರ್ತರಾಗಿರುವ ನಾರಾಯಣರಾವ್ ದಾಭಾಡ್ಕರ್ ಎಂಬ ವೃದ್ದರೊಬ್ಬರು ತನಗೆ ಕೋವಿಡ್ ಸೋಂಕು ತಗುಲಿದ್ದರೂ ಸಹ ಅಲ್ಲಿದ್ದ ಮತ್ತೊಬ್ಬ ಕೊರೋನ ಪೀಡಿತ ಯುವಕನಿಗೆ ತನ್ನ ಬೆಡ್ ಬಿಟ್ಟು ಕೊಟ್ಟು ಮನೆಗೆ ತೆರಳಿದ್ದರು. ಆದರೆ ಮೂರು ದಿನದ ನಂತರ ಮರಣ ಹೊಂದಿದ್ದರು. ಅವರ ಮಾನವೀಯತೆಯನ್ನು ಮರೆಯದಿರೋಣ ಎಂಬ ಸಂದೇಶವು ಕಳೆದ ನಾಲ್ಕೈದು ದಿನಗಳಿಂದ ವೈರಲ್ ಆಗುತ್ತಿದೆ.

ಬಿಜೆಪಿ ಪರ ವೆಬ್‌ಸೈಟ್ Opindia ಸೇರಿದಂತೆ ಹಲವು ಪತ್ರಿಕೆಗಳು ಈ ಸುದ್ದಿಯನ್ನು ಬಿತ್ತರಿಸಿದ್ದವು. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದರು. ಆರ್‌ಎಸ್‌ಎಸ್‌ ಹೇಳಿಕೆಯನ್ನು ಬಿಡುಗಡೆ ಮಾಡಿ ಆ ವೃದ್ದನನ್ನು ಹೊಗಳಿತ್ತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮಂಗಳವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. “ಹಲವು ಕಡೆ ಸುತ್ತಿದ ನಂತರ ನಾರಾಯಣರಾವ್ ದಾಭಾಡ್ಕರ್‌ಗೆ  ಇಂದಿರಾ ಗಾಂಧಿ ರುಗ್ನಾಲಯದಲ್ಲಿ ಬೆಡ್ ಸಿಕ್ಕಿತು. ಆಸ್ಪತ್ರೆಗೆ ಅವರನ್ನು ದಾಖಲಿಸಿದ ನಂತರ ಅಲ್ಲಿ ಒಬ್ಬ ಮಹಿಳೆ ತನ್ನ 40 ವರ್ಷದ ಗಂಡನಿಗೆ ಆಕ್ಸಿಜನ್ ಬೆಡ್ ನೀಡುವಂತೆ ಗೋಳಾಡುತ್ತಿದ್ದಳು. ಅವಳ ಮಕ್ಕಳೂ ಅಳುತ್ತಿದ್ದವು. ಆಗ ಅವರು ನಾನು 85 ವ‍ರ್ಷ ಬದುಕಿದ್ದು ಸಾಕು, ನನ್ನ ಬೆಡ್‌ ಅನ್ನು ಆ ವ್ಯಕ್ತಿಗೆ ನೀಡಿ, ನನ್ನನ್ನು ಇಲ್ಲಿಂದ ಡಿಸ್‌ಚಾರ್ಜ್ ಮಾಡಿ ಎಂದು ಸಿಬ್ಬಂದಿಗೆ ಹೇಳಿದರು. ಆದರೆ ಆ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ ಮತ್ತು ಅವರ ಸೊಸೆ ನಿಮಗೆ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಲು ಪ್ರಯತ್ನಿಸಿದರೂ ಕೇಳದೆ ಅವರು ಡಿಸ್ಜಾರ್ಜ್ ಮಾಡಿಸಿಕೊಂಡು ತನ್ನ ಮಗಳೊಂದಿಗೆ ಮನೆಗೆ ಹೋದರು. ಅಲ್ಲಿ ಅವರು ಮೂರು ದಿನಗಳ ನಂತರ ನಿಧನರಾದರು” ಎಂದು ಆರ್‌ಎಸ್‌ಎಸ್‌ ತಿಳಿಸಿದೆ.

ಶಿವರಾಜ್ ಸಿಂಗ್ ಚೌಹಾಣ್ ರವರು ನಾರಾಯಣರಾವ್ ದಾಭಾಡ್ಕರ್ ರವರ ಫೋಟೊದೊಂದಿಗೆ “ನಾನೀಗ 85 ವರ್ಷದವನಾಗಿದ್ದೇನೆ. ಆದರೆ ಆ ಮಹಿಳೆಯ ಪತಿ ಸಾವನಪ್ಪಿದರೆ, ಅವನ ಮಕ್ಕಳು ಅನಾಥರಾಗುವರು. ಹಾಗಾಗಿ ಆ ವ್ಯಕ್ತಿಯ ಪ್ರಾಣ ಉಳಿಸುವುದು ನನ್ನ ಕರ್ತವ್ಯವಾಗಿದೆ ಎಂದು ಹೇಳಿ ಸ್ವತಃ ಕೊರೊನಾ ಪೀಡಿತರಾಗಿದ್ದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದ ಶ್ರೀ ನಾರಾಯಣಜಿಯವರು ತನ್ನ ಬೆಡ್ ಅನ್ನು ಆ ರೋಗಿಗೆ ಕೊಟ್ಟಿದ್ದರು.. ಇನ್ನೊಬ್ಬರ ಜೀವ ಉಳಿಸುತ್ತಾ ಮೂರು ದಿನದ ನಂತರ ನಾರಾಯಣ್ ಜಿ ಯವರು ಇಹಲೋಕ ತ್ಯಜಿಸಿದರು. ಸಮಾಜದ ಮತ್ತು ರಾಷ್ಟ್ರದ ನೈಜ ಸೇವಕರೇ ಇಂತಹ ತ್ಯಾಗ ಮಾಡಬಲ್ಲರು. ನಿಮ್ಮ ಪವಿತ್ರ ಸೇವಾಭಾವಕ್ಕೆ ಪ್ರಣಾಮಗಳು. ತಾವು ಈ ಸಮಾಜಕ್ಕೆ ಪ್ರೇರಣೆಯಾಗಿದ್ದೀರಿ. ದಿವ್ಯಾತ್ಮಕ್ಕೆ ವಿನಮ್ರ ಶೃದ್ಧಾಂಜಲಿ. ಓಂ ಶಾಂತಿ” ಎಂದು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಆಸ್ಪತ್ರೆ ಸಿಬ್ಬಂದಿ ಏನು ಹೇಳುತ್ತಾರೆ?

85 ವರ್ಷದ ನಾರಾಯಣರಾವ್ ದಾಭಡ್ಕರ್ ಅವರು ವೈದ್ಯಕೀಯ ಸಲಹೆಯ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿಕೊಂಡಿದ್ದು ನಿಜ, ಆದರೆ ಅವರು ಬೇರೊಬ್ಬರಿಗಾಗಿ ಹಾಸಿಗೆಯನ್ನು ಬಿಟ್ಟುಕೊಟ್ಟಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಯಾವುದೇ ಸಾಕ್ಷಿ ಮತ್ತು ಸ್ಪಷ್ಟತೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್, “ಏಪ್ರಿಲ್ 22 ರಂದು ಸಂಜೆ 5.55 ಕ್ಕೆ ದಾಭಡ್ಕರ್ ಅವರನ್ನು ದಾಖಲಿಸಲಾಯಿತು ಮತ್ತು ತುರ್ತುಚಿಕಿತ್ಸೆಯ ವಾರ್ಡ್‌ನಲ್ಲಿ ಬೆಡ್ ಸಿಕ್ಕಿತು. ಅವರ ಸ್ಥಿತಿ ಹದಗೆಟ್ಟರೆ ಅವರನ್ನು ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ನಾವು ಅವರ ಸಂಬಂಧಿಕರಿಗೆ ತಿಳಿಸಿದ್ದೆವು. ಆದರೆ ಅವರು ಸಂಜೆ 7.55 ಕ್ಕೆ ಡಿಸ್ಚಾರ್ಜ್ ಮಾಡಲು ಕೋರಿದರು. ಆದರೆ ಅವರನ್ನು ಉನ್ನತ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಅವರಿಗೆ ಸಲಹೆ ನೀಡಿದೆವು. ಅವರ ಅಳಿಯ ಅಮೋಲ್ ಪಚ್ಪೋರ್ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ ನಂತರ, ನಾವು ಅವರಿಗೆ ವೈದ್ಯಕೀಯ ಸಲಹೆಯ ವಿರುದ್ಧ ಡಿಸ್ಚಾರ್ಜ್ ಮಾಡಿದೆವು” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅವರು ಬೇರೊಬ್ಬರಿಗೆ ಬೆಡ್ ನೀಡಲು ಡಿಸ್ಚಾರ್ಜ್ ಆದರೆ ಎಂದು ಕೇಳಿದಾಗ “ಆ ದಿನ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿ ಅಂತಹ ಯಾವುದೇ ಘಟನೆಗೆ ಸಾಕ್ಷಿಯಾಗಿಲ್ಲ” ಎಂದು ಚಿಮುರ್ಕರ್ ಹೇಳಿದ್ದಾರೆ.

110 ಕೋವಿಡ್ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ 92 ಸಕ್ರಿಯ ಹಾಸಿಗೆಗಳಿದ್ದು, ಉಳಿದವುಗಳನ್ನು ಉದ್ದೇಶಿತ ತೀವ್ರ ನಿಗಾ ಘಟಕಕ್ಕೆ ಇಡಲಾಗಿದೆ. ಆ ದಿನ ಆಸ್ಪತ್ರೆಯಲ್ಲಿ ಬೇರೆ ಹಾಸಿಗೆ ಲಭ್ಯವಿರಲಿಲ್ಲವೇ ಎಂದು ಕೇಳಿದಾಗ, “ನಾವು ಪ್ರತಿದಿನ ಕನಿಷ್ಠ ನಾಲ್ಕೈದು ಖಾಲಿ ಹಾಸಿಗೆಗಳನ್ನು ಹೊಂದಿದ್ದೆವು” ಎಂದು ಚಿಮುರ್ಕರ್ ಹೇಳಿದ್ದಾರೆ.

ಆ ನಂತರ ದಿ ಇಂಡಿಯನ್ ಎಕ್ಸ್ ಪ್ರೆಸ್ ವತಿಯಿಂದ ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ಗೆ ಕರೆ ಮಾಡಿದಾಗ, “ನಾನೀಗ ಮಾತನಾಡುವ ಸ್ಥಿತಿಯಲ್ಲಿಲ್ಲ, ಏಕೆಂದರೆ ನಾನು ಸಹ ಕೋವಿಡ್ ಪಾಸಿಟಿವ್ ಆಗಿದ್ದೇನೆ. ಅಂದು ನಡೆದಿದ್ದು ಸರಿಯಾಗಿದೆ. ಅವರು ಇನ್ನೊಬ್ಬರಿಗೆ ಸಹಾಯ ಮಾಡುವ ವ್ಯಕ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈಗ ಮಾತನಾಡಲು ಏನಿದೆ? ಅವರ ಮರಣ ಹೊಂದಿ ನಾಲ್ಕು ದಿನಗಳು ಕಳೆದಿವೆ. ಏನಿದೆಯೋ ಅದು ಸತ್ಯ. ಇಷ್ಟು ಮಾತ್ರ ನಾನು ಹೇಳಬಲ್ಲೆ, ಇನ್ನು ಮುಂದೆ ನಾನು ಮಾತನಾಡಲಾರೆ” ಎಂದಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಅವರು ಬೇರೊಬ್ಬರಿಗಾಗ ಬೆಡ್ ಬಿಟ್ಟು ಕೊಟ್ಟರು ಎಂಬುದರಲ್ಲಿ ಹಲವು ಪ್ರಶ್ನೆಗಳು ಎದ್ದಿವೆ. ಅಲ್ಲದೇ ಪ್ರತಿದಿನ ನಾಲ್ಕೈದು ಬೆಡ್‌ಗಳು ಖಾಲಿ ಇದ್ದವು ಎಂದು ನಾಗ್ಪುರದ ಇಂದಿರಾ ಗಾಂಧಿ ಆಸ್ಪತ್ರೆಯ ಇನ್ಚಾರ್ಜ್ ವೈದ್ಯರಾದ ಶೀಲು ಚಿಮುರ್ಕರ್ ಹೇಳಿರುವುದು ಮೇಲಿನ ಆರ್‌ಎಸ್‌ಎಸ್‌ ಪ್ರತಿಪಾದನೆಗೆ ವಿರುದ್ಧವಾಗಿದೆ. ಈ ಕುರಿತು ದಾಭಡ್ಕರ್ ಅಳಿಯ ಅಮೋಲ್ ಪಚ್ಪೋರ್‌ ಸಹ ಸ್ಪಷ್ಟವಾಗಿ ಮಾತನಾಡಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿವೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಾಗ್ಪುರದ ಇಂದಿರಾ ಗಾಂಧಿ ಜಿಲ್ಲಾಸ್ಪತ್ರೆಯ ಅಧೀಕ್ಷಕರಾಗಿರುವ ಅಜಯ್ ಪ್ರಸಾದ್ ಎಂಬುವವರಿಗೆ ಸಾಮಾಜಿಕ ಕಾರ್ಯಕರ್ತನೊಬ್ಬ ಫೋನ್ ಮಾಡಿ ಮಾತಾಡಿದ್ದಾಗಿಯೂ ಹಲವೆಡೆ ವರದಿಯಾಗಿದೆ. ಅದರಲ್ಲಿ ಅವರು ಇನ್ನೊಬ್ಬರಿಗಾಗಿ ಬೆಡ್ ಬಿಟ್ಟುಕೊಡುವ ಪದ್ದತಿ ನಮ್ಮಲ್ಲಿ ಇಲ್ಲ ಮತ್ತು ಆ ಅಧಿಕಾರವೂ ರೋಗಿಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...