Homeಫ್ಯಾಕ್ಟ್‌ಚೆಕ್Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

- Advertisement -
- Advertisement -

ವ್ಯಕ್ತಿಯೊಬ್ಬರು ತಲೆ ಕೆಳಗೆ ಕಾಲು ಮೇಲೆ ಮಾಡಿ ಉಲ್ಟ ನಡಿಗೆಯ ಮೂಲಕ ಅಯೋಧ್ಯೆ ರಾಮನ ದರ್ಶನಕ್ಕೆ ತೆರಳಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಮುಖ ಮಾಧ್ಯಮಗಳಾದ ‘ಇಂಡಿಯಾ ಟಿವಿ, ಟಿವಿ9 ಭಾರತ್ ವರ್ಷ್’ ಕೂಡ ಈ ವಿಡಿಯೋವನ್ನು ಹಂಚಿಕೊಂಡು “ಅಯೋಧ್ಯೆಗೆ ತಲುಪುತ್ತಿರುವ ರಾಮ ಭಕ್ತರಲ್ಲಿ ಇವರೂ ಒಬ್ಬರು” ಎಂದು ಬರೆದುಕೊಂಡಿದೆ.

ಹಲವು ಮಂದಿ ಸಾಮಾಜಿಕ ಜಾಲತಾಣ, ಯೂಟ್ಯೂಬ್ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು “ಕಾಲಿನ ಬದಲಾಗಿ ಕೈಯ್ಯಿಂದ ಅಯೋಧ್ಯೆಗೆ ತೆರಳುತ್ತಿರುವ ರಾಮಭಕ್ತ ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲಿನ ವೈರಲ್‌ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಮೊದಲಿಗೆ ನಾವು ಗೂಗಲ್‌ನಲ್ಲಿ “Devotee walking on hand”ಎಂದು ಹುಡುಕಾಡಿದ್ದೇವೆ. ಈ ವೇಳೆ 15 ಜುಲೈ 2023ರಂದು ಅಮರ್ ಉಜಾಲಾ ವೆಬ್‌ಸೈಟ್‌ ಈ ಕುರಿತು ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ. ವರದಿಯ ಪ್ರಕಾರ, ಉಲ್ಟ ನಡಿಗೆ ಕೈಗೊಂಡ ವ್ಯಕ್ತಿ ಬಿಹಾರದ ಸಹರ್ಸಾ ಜಿಲ್ಲೆಯ ನಿವಾಸಿ ನಿಹಾಲ್‌ ಸಿಂಗ್. ಈತ ಜಾರ್ಖಂಡ್‌ನ ಬಸುಕಿನಾಥ್‌ನ ಬಾಬಾದಾಮ್‌ಗೆ ಉಲ್ಟ ನಡಿಗೆಯ ಮೂಲಕ ತೆರಳಿದ್ದಾರೆ. ನಿಹಾಲ್ ಸಿಂಗ್ ಸುಮಾರು 6 ವರ್ಷಗಳಿಂದ ಇದೇ ರೀತಿ ಉಲ್ಟ ನಡಿಗೆಯ ಮೂಲಕ ಬಾಬಾದಾಮ್‌ಗೆ ತೆರಳುತ್ತಿದ್ದಾರೆ. ಈ ಮೂಲಕ ಇದು ಅಯೋಧ್ಯೆಗೆ ತೆರಳಿದ ರಾಮ ಭಕ್ತನ ವಿಡಿಯೋ ಅಲ್ಲ ಎಂದು ತಿಳಿದು ಬಂದಿದೆ.

ಅಮರ್ ಉಜಾಲ ವರದಿಯ ಲಿಂಕ್ 

“ನಾವು ನಿಹಾಲ್ ಸಿಂಗ್ ಅವರನ್ನು ಫೋನ್‌ನಲ್ಲಿ ಸಂಪರ್ಕಿಸಿದ್ದೇವೆ. ಈ ವೇಳೆ ಅವರು ಬಿಹಾರದ ಸುಲ್ತಾನ್‌ಗಂಜ್‌ನಿಂದ 160 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸುವ ಮೂಲಕ ಜಾರ್ಖಂಡ್‌ನ ಬಸುಕಿನಾಥ್‌ಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ. ನಿಹಾಲ್‌ ಸಿಂಗ್ ಜುಲೈ 4 ರಂದು ಸಾವನ್‌ನ (ಶ್ರಾವಣ) ಮೊದಲ ದಿನದಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದು, ಇನ್ನೂ ಜಾರ್ಖಂಡ್‌ ಹಾದಿಯಲ್ಲಿದ್ದಾರೆ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ನ್ಯೂಸ್‌ಚೆಕ್ಕರ್ ತಿಳಿಸಿದೆ.

ನ್ಯೂಸ್‌ಚೆಕ್ಕರ್ ವರದಿ ಲಿಂಕ್ 

ಬಿಹಾರದ ನಿಹಾಲ್ ಸಿಂಗ್ ಸುಲ್ತಾನ್‌ಗಂಜ್‌ನಿಂದ ಜಾರ್ಖಂಡ್‌ನ ದಿಯೋಘರ್‌ಗೆ 110 ಕಿಲೋಮೀಟರ್ ಪ್ರಯಾಣಿಸುತ್ತಿದ್ದಾರೆ. ಅಲ್ಲಿನ ಶಿವ ದೇವಸ್ಥಾನಕ್ಕೆ ಅವರು ತೆರಳುತ್ತಿದ್ದಾರೆ. ನಿಹಾಲ್ ಸಿಂಗ್‌ ಜೊತೆಗಿರುವ ವ್ಯಕ್ತಿಯ ಕೈಯ್ಯಲ್ಲಿರುವ ಬಾವುಟದಲ್ಲಿ ರಾಮನ ಬದಲು ಶಿವನ ಪೋಟೋ ಇರುವುದನ್ನು ಗಮನಿಸಬಹುದು ಎಂದು ದಿ ಕ್ವಿಂಟ್ ಹೇಳಿದೆ.

ಧ್ವಜದಲ್ಲಿ ಶಿವನ ಚಿತ್ರ 

ದಿ ಕ್ವಿಂಟ್ ಫ್ಯಾಕ್ಟ್‌ಚೆಕ್ ಲಿಂಕ್ 

ಇದನ್ನೂ ಓದಿ: Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...