Homeಫ್ಯಾಕ್ಟ್‌ಚೆಕ್Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

- Advertisement -
- Advertisement -

ವ್ಯಕ್ತಿಯೊಬ್ಬರು ತಲೆ ಕೆಳಗೆ ಕಾಲು ಮೇಲೆ ಮಾಡಿ ಉಲ್ಟ ನಡಿಗೆಯ ಮೂಲಕ ಅಯೋಧ್ಯೆ ರಾಮನ ದರ್ಶನಕ್ಕೆ ತೆರಳಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಮುಖ ಮಾಧ್ಯಮಗಳಾದ ‘ಇಂಡಿಯಾ ಟಿವಿ, ಟಿವಿ9 ಭಾರತ್ ವರ್ಷ್’ ಕೂಡ ಈ ವಿಡಿಯೋವನ್ನು ಹಂಚಿಕೊಂಡು “ಅಯೋಧ್ಯೆಗೆ ತಲುಪುತ್ತಿರುವ ರಾಮ ಭಕ್ತರಲ್ಲಿ ಇವರೂ ಒಬ್ಬರು” ಎಂದು ಬರೆದುಕೊಂಡಿದೆ.

ಹಲವು ಮಂದಿ ಸಾಮಾಜಿಕ ಜಾಲತಾಣ, ಯೂಟ್ಯೂಬ್ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು “ಕಾಲಿನ ಬದಲಾಗಿ ಕೈಯ್ಯಿಂದ ಅಯೋಧ್ಯೆಗೆ ತೆರಳುತ್ತಿರುವ ರಾಮಭಕ್ತ ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲಿನ ವೈರಲ್‌ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಮೊದಲಿಗೆ ನಾವು ಗೂಗಲ್‌ನಲ್ಲಿ “Devotee walking on hand”ಎಂದು ಹುಡುಕಾಡಿದ್ದೇವೆ. ಈ ವೇಳೆ 15 ಜುಲೈ 2023ರಂದು ಅಮರ್ ಉಜಾಲಾ ವೆಬ್‌ಸೈಟ್‌ ಈ ಕುರಿತು ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ. ವರದಿಯ ಪ್ರಕಾರ, ಉಲ್ಟ ನಡಿಗೆ ಕೈಗೊಂಡ ವ್ಯಕ್ತಿ ಬಿಹಾರದ ಸಹರ್ಸಾ ಜಿಲ್ಲೆಯ ನಿವಾಸಿ ನಿಹಾಲ್‌ ಸಿಂಗ್. ಈತ ಜಾರ್ಖಂಡ್‌ನ ಬಸುಕಿನಾಥ್‌ನ ಬಾಬಾದಾಮ್‌ಗೆ ಉಲ್ಟ ನಡಿಗೆಯ ಮೂಲಕ ತೆರಳಿದ್ದಾರೆ. ನಿಹಾಲ್ ಸಿಂಗ್ ಸುಮಾರು 6 ವರ್ಷಗಳಿಂದ ಇದೇ ರೀತಿ ಉಲ್ಟ ನಡಿಗೆಯ ಮೂಲಕ ಬಾಬಾದಾಮ್‌ಗೆ ತೆರಳುತ್ತಿದ್ದಾರೆ. ಈ ಮೂಲಕ ಇದು ಅಯೋಧ್ಯೆಗೆ ತೆರಳಿದ ರಾಮ ಭಕ್ತನ ವಿಡಿಯೋ ಅಲ್ಲ ಎಂದು ತಿಳಿದು ಬಂದಿದೆ.

ಅಮರ್ ಉಜಾಲ ವರದಿಯ ಲಿಂಕ್ 

“ನಾವು ನಿಹಾಲ್ ಸಿಂಗ್ ಅವರನ್ನು ಫೋನ್‌ನಲ್ಲಿ ಸಂಪರ್ಕಿಸಿದ್ದೇವೆ. ಈ ವೇಳೆ ಅವರು ಬಿಹಾರದ ಸುಲ್ತಾನ್‌ಗಂಜ್‌ನಿಂದ 160 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸುವ ಮೂಲಕ ಜಾರ್ಖಂಡ್‌ನ ಬಸುಕಿನಾಥ್‌ಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ. ನಿಹಾಲ್‌ ಸಿಂಗ್ ಜುಲೈ 4 ರಂದು ಸಾವನ್‌ನ (ಶ್ರಾವಣ) ಮೊದಲ ದಿನದಂದು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದು, ಇನ್ನೂ ಜಾರ್ಖಂಡ್‌ ಹಾದಿಯಲ್ಲಿದ್ದಾರೆ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ನ್ಯೂಸ್‌ಚೆಕ್ಕರ್ ತಿಳಿಸಿದೆ.

ನ್ಯೂಸ್‌ಚೆಕ್ಕರ್ ವರದಿ ಲಿಂಕ್ 

ಬಿಹಾರದ ನಿಹಾಲ್ ಸಿಂಗ್ ಸುಲ್ತಾನ್‌ಗಂಜ್‌ನಿಂದ ಜಾರ್ಖಂಡ್‌ನ ದಿಯೋಘರ್‌ಗೆ 110 ಕಿಲೋಮೀಟರ್ ಪ್ರಯಾಣಿಸುತ್ತಿದ್ದಾರೆ. ಅಲ್ಲಿನ ಶಿವ ದೇವಸ್ಥಾನಕ್ಕೆ ಅವರು ತೆರಳುತ್ತಿದ್ದಾರೆ. ನಿಹಾಲ್ ಸಿಂಗ್‌ ಜೊತೆಗಿರುವ ವ್ಯಕ್ತಿಯ ಕೈಯ್ಯಲ್ಲಿರುವ ಬಾವುಟದಲ್ಲಿ ರಾಮನ ಬದಲು ಶಿವನ ಪೋಟೋ ಇರುವುದನ್ನು ಗಮನಿಸಬಹುದು ಎಂದು ದಿ ಕ್ವಿಂಟ್ ಹೇಳಿದೆ.

ಧ್ವಜದಲ್ಲಿ ಶಿವನ ಚಿತ್ರ 

ದಿ ಕ್ವಿಂಟ್ ಫ್ಯಾಕ್ಟ್‌ಚೆಕ್ ಲಿಂಕ್ 

ಇದನ್ನೂ ಓದಿ: Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...