Homeನ್ಯಾಯ ಪಥಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

ಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

- Advertisement -
- Advertisement -

ಈ ವಿಷಮ ಸಮಯದಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸುದ್ದಿಗಳು ಶಾನೆ ಕುತೂಹಲಕರವಾಗಿವೆಯಲ್ಲಾ. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನವೇ ಮುನಿಸಿಪಾಲಿಟಿಯವರು ಬಿದಿರುದಬ್ಬೆ ಮತ್ತು ಖಾದಿಯಲ್ಲದ ನಿಗಿನಿಗಿ ಬಾವುಟ ಹಂಚಿದರು. ಜಿಲ್ಲಾ ಮೈದಾನವಲ್ಲದೆ ಶಾಲಾ ಕಾಲೇಜಿನ ದಿಕ್ಕಿನಿಂದ ದೇಶ ಘೋಷಣೆಗಳು ಮಕ್ಕಳ ಗಂಟಲಿಂದ ಮುಗಿಲು ಮುಟ್ಟಿದವು. ಅಷ್ಟರಲ್ಲಿ ಬಿಜೆಪಿಗಳ ಕಡೆಯವರು ಆಳೆತ್ತರದ ಸಾವರ್ಕರ್ ಪ್ಲೆಕ್ಸ್ ತಂದು ಅಮೀರ್ ಅಹಮದ್ ಸರ್ಕಲ್ಲಲ್ಲಿ ಇಟ್ಟರು. ಟಿಪ್ಪು ಅಭಿಮಾನಿಗಳು ಅದನ್ನ ಕಿತ್ತೆಸೆದರು. ಅವರ ದೃಷ್ಟಿಯಲ್ಲಿ ಟಿಪ್ಪು ಸ್ವಾತಂತ್ರ ಹೋರಾಟಗಾರನಲ್ಲದಿದ್ದರೆ ಸಾವರ್ಕರನು ಸ್ವಾತಂತ್ರ ಹೋರಾಟಗಾರನಲ್ಲ ಎಂಬುದು. ಇದಕ್ಕೂ ಮೊದಲೆ ಶಿವಮೊಗ್ಗದ ಮಾಲ್‌ನಲ್ಲಿ ಅಳವಡಿಸಿದ ಸಾವರಕರನ ಫೋಟೋ ವಿರುದ್ಧ ದೇಶಪ್ರೇಮಿಯೊಬ್ಬ ಪ್ರತಿಭಟಿಸಿದ್ದ. ಇದೇ ಪ್ರತಿಭಟನೆ ಅಮೀರ್ ಅಹಮದ್ ಸರ್ಕಲ್ಲಿಗೂ ಮರುದಿನ ವ್ಯಾಪಿಸಿದ್ದರಿಂದ ಸೆಕ್ಷನ್ 144 ಜಾರಿಯಾಗಿತ್ತು. ಇತ್ತ ಕುವೆಂಪು ರಂಗಮಂದಿರದಲ್ಲಿ ನಾಟಕ ಆಡಲು ಬಣ್ಣ ಬಳಿದುಕೊಂಡು ಕೂತಿದ್ದವರಿಗೆ ಸೆಕ್ಷನ್ 144 ಜಾರಿಯಾಗಿದೆ ಮನೆಗೆ ಹೋಗಿ ಎಂಬ ಅಪ್ಪಣೆ ಬಂತು. ನಾಟಕ ನೋಡಲು ಬಂದಿದ್ದವರೆಲ್ಲಾ, ಈಶ್ವರಪ್ಪ ಮನೆಗೆ ಹೋಗದ ಹೊರತು ಶಿವಮೊಗ್ಗಕ್ಕೆ ನೆಮ್ಮದಿಯಿಲ್ಲ ಎಂದು ಗೊಣಗಿಕೊಂಡು, ಮತಾಂಧ ಮೆದುಳಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಜಾಗವಿರುವುದಿಲ್ಲ ಎಂದು ಮಾತನಾಡಿಕೊಂಡು ಮನೆಸೇರಿದರಂತಲ್ಲಾ, ಥೂತ್ತೇರಿ.
****

ಶಿವಮೊಗ್ಗದ ಸ್ಥಿತಿ ಕುರಿತು ದೂರದೂರಿನ ಜನಗಳು ಅಲ್ಲಿ ಏನೋ ಆಗಬಾರದ್ದು ಆಗುತ್ತಿದೆ ಎಂದು ಆತಂಕಗೊಂಡಿರುವುದು ಸಹಜವಂತಲ್ಲಾ. ಏಕೆಂದರೆ ಟಿವಿ ಮಾಧ್ಯಮಗಳು ಶಿವಮೊಗ್ಗದ ನಿಗಿನಿಗಿ ಶಿವಮೊಗ್ಗ ಕೊತಕೊತ. ಬೂದಿ ಮುಚ್ಚಿದ ಕೆಂಡ ಶಿವಮೊಗ್ಗ, ಆತಂಕದಲ್ಲಿ ಶಿವಮೊಗ್ಗ ಎಂಬ ಅಬ್ಬರಿಸುತ್ತಿರುವುದನ್ನು ಕೇಳಿ ಹೊರಬಂದು ನೋಡಿದರೆ ಆ ಮಲೆನಾಡಿನ ಹೆಮ್ಮೆಯ ನಗರ ಕಾಡಿನಷ್ಟೇ ಪ್ರಶಾಂತವಾಗಿದ್ದು ಆ ಊರಿನ ಜನಗಳಿಗೆ ಅಚ್ಚರಿ ಮೂಡಿಸಿದೆಯಂತಲ್ಲಾ. ಹಾಗಾದರೆ ಟಿವಿಯವರು ಅರಚುತ್ತಿರುವ ನಿಗಿನಿಗಿ ಕೊತಕೊತ ಎಲ್ಲಿದೆ ಎಂದು ನೋಡಲಾಗಿ ಅದು ಟಿವಿಯವರ ಹೊಟ್ಟೆಪಾಡಿನ ಸದ್ದೆಂಬುದು ಅರಿವಾಗಿ ಶಿವಮೊಗ್ಗದ ಜನ ಬಿದ್ದುಬಿದ್ದು ನಕ್ಕರಂತಲ್ಲಾ. ಮುಖ್ಯವಾಗಿ ಟಿವಿಯವರು ಈವರೆಗೂ ತೋರುತ್ತಿರುವುದು ಅಮೀರ್ ಅಹಮದ್ ಸರ್ಕಲ್ಲಿನಲ್ಲಿ ಪ್ಲೆಕ್ಸ್ ಕಿತ್ತಾಕಿದ ಕಿತ್ತಾಟವನ್ನು. ಅದು ಬಿಟ್ಟರೆ ಎಲ್ಲ ಬಡಾವಣೆಗಳಲ್ಲೂ ಕೂಡ, ಅದೆಲ್ಲೊ ದೂರದಲ್ಲಿ ನಡೆದ ಈಶ್ವರಪ್ಪನ ಕಡೆಯವರು ಮತ್ತು ಕೆಲ ಕಿಡಿಗೇಡಿ ಮುಸ್ಲಿಮರ ಪುಂಡಾಟ ಎನ್ನುತ್ತ ಗೋಬಿ ಮಂಚೂರಿ, ಪಾನಿಪೂರಿ, ಇಡ್ಲಿ ಗಾಡಿಯವರೆಲ್ಲಾ ತಮ್ಮ ಜೀವನಾಧಾರದ ಆ ದಿನದ ಸಾಮಗ್ರಿಯನ್ನ ಚರಂಡಿಗೆ ಸುರಿಯುತ್ತ ಶಾಪ ಹಾಕುತ್ತಿದ್ದಾರಂತಲ್ಲಾ. ಪೊಲೀಸರಿಗೆ ಸಂಬಳ ಬರುತ್ತದೆ, ರಾಜಕಾರಣಿಗಳ ಖಜಾನೆಗೆ ರಾಜ ಕಾಲುವೆಗಳೆ ಇವೆ. ಇವರೆಲ್ಲಾ ಆ ದಿನ ದುಡಿದು ಅದರಲ್ಲಧ ಪಿಗ್ಮಿ ಕಟ್ಟಿ ಉಳಿದುದರಲ್ಲಿ ಜೀವನದ ಗಾಡಿ ಎಳೆಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂಬುದು ದುಡಿದು ತಿನ್ನುವವರ ಅಳಲಾಗಿದೆಯಂತಲ್ಲಾ, ಥೂತ್ತೇರಿ.


*****

ಶಿವಮೊಗ್ಗ ಜಿಲ್ಲೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿಯ ಚೂರಿ ಇರಿತದ ವಿಷಯದಲ್ಲಿ ಚೂರಿ ಹಾಕಿದವನು ಮತ್ತು ಹಾಕಿಸಿಕೊಂಡವನು ಜೊತೆಯಲ್ಲಿ ಕುಳಿತು ಜೂಜಾಡುತ್ತಿರುವ ಫೋಟೋ ತೋರಿಸಿದ ಶಾಸಕ ಸಂಗಮೇಶ್ ಇದು ಮತೀಯ ಗಲಭೆ ಎಂದಾದರೆ ನಾನು ಶಾಸಕ ಸ್ಥಾನ ಬಿಡುತ್ತೇನೆ ಎಂದರೂ ಬಿಜೆಪಿಗಳು ಬಿಡುತ್ತಿಲ್ಲವಂತಲ್ಲಾ. ಯಾವತ್ತೂ ಸತ್ಯ ಸಂಗತಿಗಳ ವಿರುದ್ಧವೇ ಹೋರಾಡುವ ಪ್ರವೃತ್ತಿ ಬೆಳೆಸಿಕೊಂಡ ಫಲವಾಗಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಳಲೆ ತಿಂದಿದ್ದು ಎಂದು ಗೊತ್ತಾಗಿದ್ದರು ಅದು ಕೋಳಿ ಎಂದು ಕೂಗುತ್ತಿವೆಯಂತಲ್ಲಾ. ಇದನ್ನ ಕೇಳಿಸಿಕೊಂಡ ಕೊಡಗಿನ ಜನ ಒಳಗೊಳಗೇ ನಗುತ್ತ ಆ ಸಿದ್ದರಾಮಯ್ಯ ಏನು ತಿಂದರೆ ನಮಗೇನು ನಮ್ಮ ಸಂಸ್ಕೃತಿಯಲ್ಲೇ ಮಾಂಸ ಮಡ್ಡಿ ಹಾಸುಹೊಕ್ಕಾಗಿದೆ, ಅದರಲ್ಲೂ ನಮ್ಮ ಪ್ರಿಯ ಆಹಾರವಾದ ವರಹ ಮಾಂಸ ಭಕ್ಷಣೆ ಮಾಡಿಲ್ಲವಲ್ಲಾ, ಅಷ್ಟಕ್ಕೂ ಈಗಿನ ಕೋಳಿ ಹಿಂದಿನ ಕೋಳಿಯಂತಲ್ಲಾ ಎಂದರಂತಲ್ಲಾ. ಸಿದ್ದರಾಮಯ್ಯ ತಿಂದ ಮಾಂಸದ ಬಗ್ಗೆ ತೀರಾ ತಲೆಕೆಡಿಸಿಕೊಂಡಿರುವ ಬಿಜೆಪಿಗಳು ಮತ್ತು ಟಿವಿ ಜನರನ್ನ ಕುರಿತೇ ನಮ್ಮ ಸರ್ವಜ್ಞ ಶತಮಾನದ ಹಿಂದೆಯೇ ವಚನ ಕಟ್ಟಿದ್ದಾನೆ. ಅದೇನೆಂದರೆ ಬಾಡ ತಿಂಬಾತಂಗೆ ಆವೇನು ಆಡೇನು ಕಾಡಬಡನರಿಯೇನು ಮನೆಯ ನಾಯೇನು ಸರ್ವಜ್ಞ. ಅದರಂತೆ ಸಿದ್ದು ಏನು ತಿಂದರೆ ಬಿಜೆಪಿಗಳಿಗೇನೋ ಬೋಪಯ್ಯ ಎನ್ನುವಂತಾಗಿದೆಯಲ್ಲಾ, ಥೂತ್ತೇರಿ॒

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...