Homeನ್ಯಾಯ ಪಥಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

ಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

- Advertisement -
- Advertisement -

ಈ ವಿಷಮ ಸಮಯದಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸುದ್ದಿಗಳು ಶಾನೆ ಕುತೂಹಲಕರವಾಗಿವೆಯಲ್ಲಾ. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನವೇ ಮುನಿಸಿಪಾಲಿಟಿಯವರು ಬಿದಿರುದಬ್ಬೆ ಮತ್ತು ಖಾದಿಯಲ್ಲದ ನಿಗಿನಿಗಿ ಬಾವುಟ ಹಂಚಿದರು. ಜಿಲ್ಲಾ ಮೈದಾನವಲ್ಲದೆ ಶಾಲಾ ಕಾಲೇಜಿನ ದಿಕ್ಕಿನಿಂದ ದೇಶ ಘೋಷಣೆಗಳು ಮಕ್ಕಳ ಗಂಟಲಿಂದ ಮುಗಿಲು ಮುಟ್ಟಿದವು. ಅಷ್ಟರಲ್ಲಿ ಬಿಜೆಪಿಗಳ ಕಡೆಯವರು ಆಳೆತ್ತರದ ಸಾವರ್ಕರ್ ಪ್ಲೆಕ್ಸ್ ತಂದು ಅಮೀರ್ ಅಹಮದ್ ಸರ್ಕಲ್ಲಲ್ಲಿ ಇಟ್ಟರು. ಟಿಪ್ಪು ಅಭಿಮಾನಿಗಳು ಅದನ್ನ ಕಿತ್ತೆಸೆದರು. ಅವರ ದೃಷ್ಟಿಯಲ್ಲಿ ಟಿಪ್ಪು ಸ್ವಾತಂತ್ರ ಹೋರಾಟಗಾರನಲ್ಲದಿದ್ದರೆ ಸಾವರ್ಕರನು ಸ್ವಾತಂತ್ರ ಹೋರಾಟಗಾರನಲ್ಲ ಎಂಬುದು. ಇದಕ್ಕೂ ಮೊದಲೆ ಶಿವಮೊಗ್ಗದ ಮಾಲ್‌ನಲ್ಲಿ ಅಳವಡಿಸಿದ ಸಾವರಕರನ ಫೋಟೋ ವಿರುದ್ಧ ದೇಶಪ್ರೇಮಿಯೊಬ್ಬ ಪ್ರತಿಭಟಿಸಿದ್ದ. ಇದೇ ಪ್ರತಿಭಟನೆ ಅಮೀರ್ ಅಹಮದ್ ಸರ್ಕಲ್ಲಿಗೂ ಮರುದಿನ ವ್ಯಾಪಿಸಿದ್ದರಿಂದ ಸೆಕ್ಷನ್ 144 ಜಾರಿಯಾಗಿತ್ತು. ಇತ್ತ ಕುವೆಂಪು ರಂಗಮಂದಿರದಲ್ಲಿ ನಾಟಕ ಆಡಲು ಬಣ್ಣ ಬಳಿದುಕೊಂಡು ಕೂತಿದ್ದವರಿಗೆ ಸೆಕ್ಷನ್ 144 ಜಾರಿಯಾಗಿದೆ ಮನೆಗೆ ಹೋಗಿ ಎಂಬ ಅಪ್ಪಣೆ ಬಂತು. ನಾಟಕ ನೋಡಲು ಬಂದಿದ್ದವರೆಲ್ಲಾ, ಈಶ್ವರಪ್ಪ ಮನೆಗೆ ಹೋಗದ ಹೊರತು ಶಿವಮೊಗ್ಗಕ್ಕೆ ನೆಮ್ಮದಿಯಿಲ್ಲ ಎಂದು ಗೊಣಗಿಕೊಂಡು, ಮತಾಂಧ ಮೆದುಳಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಜಾಗವಿರುವುದಿಲ್ಲ ಎಂದು ಮಾತನಾಡಿಕೊಂಡು ಮನೆಸೇರಿದರಂತಲ್ಲಾ, ಥೂತ್ತೇರಿ.
****

ಶಿವಮೊಗ್ಗದ ಸ್ಥಿತಿ ಕುರಿತು ದೂರದೂರಿನ ಜನಗಳು ಅಲ್ಲಿ ಏನೋ ಆಗಬಾರದ್ದು ಆಗುತ್ತಿದೆ ಎಂದು ಆತಂಕಗೊಂಡಿರುವುದು ಸಹಜವಂತಲ್ಲಾ. ಏಕೆಂದರೆ ಟಿವಿ ಮಾಧ್ಯಮಗಳು ಶಿವಮೊಗ್ಗದ ನಿಗಿನಿಗಿ ಶಿವಮೊಗ್ಗ ಕೊತಕೊತ. ಬೂದಿ ಮುಚ್ಚಿದ ಕೆಂಡ ಶಿವಮೊಗ್ಗ, ಆತಂಕದಲ್ಲಿ ಶಿವಮೊಗ್ಗ ಎಂಬ ಅಬ್ಬರಿಸುತ್ತಿರುವುದನ್ನು ಕೇಳಿ ಹೊರಬಂದು ನೋಡಿದರೆ ಆ ಮಲೆನಾಡಿನ ಹೆಮ್ಮೆಯ ನಗರ ಕಾಡಿನಷ್ಟೇ ಪ್ರಶಾಂತವಾಗಿದ್ದು ಆ ಊರಿನ ಜನಗಳಿಗೆ ಅಚ್ಚರಿ ಮೂಡಿಸಿದೆಯಂತಲ್ಲಾ. ಹಾಗಾದರೆ ಟಿವಿಯವರು ಅರಚುತ್ತಿರುವ ನಿಗಿನಿಗಿ ಕೊತಕೊತ ಎಲ್ಲಿದೆ ಎಂದು ನೋಡಲಾಗಿ ಅದು ಟಿವಿಯವರ ಹೊಟ್ಟೆಪಾಡಿನ ಸದ್ದೆಂಬುದು ಅರಿವಾಗಿ ಶಿವಮೊಗ್ಗದ ಜನ ಬಿದ್ದುಬಿದ್ದು ನಕ್ಕರಂತಲ್ಲಾ. ಮುಖ್ಯವಾಗಿ ಟಿವಿಯವರು ಈವರೆಗೂ ತೋರುತ್ತಿರುವುದು ಅಮೀರ್ ಅಹಮದ್ ಸರ್ಕಲ್ಲಿನಲ್ಲಿ ಪ್ಲೆಕ್ಸ್ ಕಿತ್ತಾಕಿದ ಕಿತ್ತಾಟವನ್ನು. ಅದು ಬಿಟ್ಟರೆ ಎಲ್ಲ ಬಡಾವಣೆಗಳಲ್ಲೂ ಕೂಡ, ಅದೆಲ್ಲೊ ದೂರದಲ್ಲಿ ನಡೆದ ಈಶ್ವರಪ್ಪನ ಕಡೆಯವರು ಮತ್ತು ಕೆಲ ಕಿಡಿಗೇಡಿ ಮುಸ್ಲಿಮರ ಪುಂಡಾಟ ಎನ್ನುತ್ತ ಗೋಬಿ ಮಂಚೂರಿ, ಪಾನಿಪೂರಿ, ಇಡ್ಲಿ ಗಾಡಿಯವರೆಲ್ಲಾ ತಮ್ಮ ಜೀವನಾಧಾರದ ಆ ದಿನದ ಸಾಮಗ್ರಿಯನ್ನ ಚರಂಡಿಗೆ ಸುರಿಯುತ್ತ ಶಾಪ ಹಾಕುತ್ತಿದ್ದಾರಂತಲ್ಲಾ. ಪೊಲೀಸರಿಗೆ ಸಂಬಳ ಬರುತ್ತದೆ, ರಾಜಕಾರಣಿಗಳ ಖಜಾನೆಗೆ ರಾಜ ಕಾಲುವೆಗಳೆ ಇವೆ. ಇವರೆಲ್ಲಾ ಆ ದಿನ ದುಡಿದು ಅದರಲ್ಲಧ ಪಿಗ್ಮಿ ಕಟ್ಟಿ ಉಳಿದುದರಲ್ಲಿ ಜೀವನದ ಗಾಡಿ ಎಳೆಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂಬುದು ದುಡಿದು ತಿನ್ನುವವರ ಅಳಲಾಗಿದೆಯಂತಲ್ಲಾ, ಥೂತ್ತೇರಿ.


*****

ಶಿವಮೊಗ್ಗ ಜಿಲ್ಲೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿಯ ಚೂರಿ ಇರಿತದ ವಿಷಯದಲ್ಲಿ ಚೂರಿ ಹಾಕಿದವನು ಮತ್ತು ಹಾಕಿಸಿಕೊಂಡವನು ಜೊತೆಯಲ್ಲಿ ಕುಳಿತು ಜೂಜಾಡುತ್ತಿರುವ ಫೋಟೋ ತೋರಿಸಿದ ಶಾಸಕ ಸಂಗಮೇಶ್ ಇದು ಮತೀಯ ಗಲಭೆ ಎಂದಾದರೆ ನಾನು ಶಾಸಕ ಸ್ಥಾನ ಬಿಡುತ್ತೇನೆ ಎಂದರೂ ಬಿಜೆಪಿಗಳು ಬಿಡುತ್ತಿಲ್ಲವಂತಲ್ಲಾ. ಯಾವತ್ತೂ ಸತ್ಯ ಸಂಗತಿಗಳ ವಿರುದ್ಧವೇ ಹೋರಾಡುವ ಪ್ರವೃತ್ತಿ ಬೆಳೆಸಿಕೊಂಡ ಫಲವಾಗಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಳಲೆ ತಿಂದಿದ್ದು ಎಂದು ಗೊತ್ತಾಗಿದ್ದರು ಅದು ಕೋಳಿ ಎಂದು ಕೂಗುತ್ತಿವೆಯಂತಲ್ಲಾ. ಇದನ್ನ ಕೇಳಿಸಿಕೊಂಡ ಕೊಡಗಿನ ಜನ ಒಳಗೊಳಗೇ ನಗುತ್ತ ಆ ಸಿದ್ದರಾಮಯ್ಯ ಏನು ತಿಂದರೆ ನಮಗೇನು ನಮ್ಮ ಸಂಸ್ಕೃತಿಯಲ್ಲೇ ಮಾಂಸ ಮಡ್ಡಿ ಹಾಸುಹೊಕ್ಕಾಗಿದೆ, ಅದರಲ್ಲೂ ನಮ್ಮ ಪ್ರಿಯ ಆಹಾರವಾದ ವರಹ ಮಾಂಸ ಭಕ್ಷಣೆ ಮಾಡಿಲ್ಲವಲ್ಲಾ, ಅಷ್ಟಕ್ಕೂ ಈಗಿನ ಕೋಳಿ ಹಿಂದಿನ ಕೋಳಿಯಂತಲ್ಲಾ ಎಂದರಂತಲ್ಲಾ. ಸಿದ್ದರಾಮಯ್ಯ ತಿಂದ ಮಾಂಸದ ಬಗ್ಗೆ ತೀರಾ ತಲೆಕೆಡಿಸಿಕೊಂಡಿರುವ ಬಿಜೆಪಿಗಳು ಮತ್ತು ಟಿವಿ ಜನರನ್ನ ಕುರಿತೇ ನಮ್ಮ ಸರ್ವಜ್ಞ ಶತಮಾನದ ಹಿಂದೆಯೇ ವಚನ ಕಟ್ಟಿದ್ದಾನೆ. ಅದೇನೆಂದರೆ ಬಾಡ ತಿಂಬಾತಂಗೆ ಆವೇನು ಆಡೇನು ಕಾಡಬಡನರಿಯೇನು ಮನೆಯ ನಾಯೇನು ಸರ್ವಜ್ಞ. ಅದರಂತೆ ಸಿದ್ದು ಏನು ತಿಂದರೆ ಬಿಜೆಪಿಗಳಿಗೇನೋ ಬೋಪಯ್ಯ ಎನ್ನುವಂತಾಗಿದೆಯಲ್ಲಾ, ಥೂತ್ತೇರಿ॒

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...