Homeನ್ಯಾಯ ಪಥಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

ಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

- Advertisement -
- Advertisement -

ಈ ವಿಷಮ ಸಮಯದಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸುದ್ದಿಗಳು ಶಾನೆ ಕುತೂಹಲಕರವಾಗಿವೆಯಲ್ಲಾ. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನವೇ ಮುನಿಸಿಪಾಲಿಟಿಯವರು ಬಿದಿರುದಬ್ಬೆ ಮತ್ತು ಖಾದಿಯಲ್ಲದ ನಿಗಿನಿಗಿ ಬಾವುಟ ಹಂಚಿದರು. ಜಿಲ್ಲಾ ಮೈದಾನವಲ್ಲದೆ ಶಾಲಾ ಕಾಲೇಜಿನ ದಿಕ್ಕಿನಿಂದ ದೇಶ ಘೋಷಣೆಗಳು ಮಕ್ಕಳ ಗಂಟಲಿಂದ ಮುಗಿಲು ಮುಟ್ಟಿದವು. ಅಷ್ಟರಲ್ಲಿ ಬಿಜೆಪಿಗಳ ಕಡೆಯವರು ಆಳೆತ್ತರದ ಸಾವರ್ಕರ್ ಪ್ಲೆಕ್ಸ್ ತಂದು ಅಮೀರ್ ಅಹಮದ್ ಸರ್ಕಲ್ಲಲ್ಲಿ ಇಟ್ಟರು. ಟಿಪ್ಪು ಅಭಿಮಾನಿಗಳು ಅದನ್ನ ಕಿತ್ತೆಸೆದರು. ಅವರ ದೃಷ್ಟಿಯಲ್ಲಿ ಟಿಪ್ಪು ಸ್ವಾತಂತ್ರ ಹೋರಾಟಗಾರನಲ್ಲದಿದ್ದರೆ ಸಾವರ್ಕರನು ಸ್ವಾತಂತ್ರ ಹೋರಾಟಗಾರನಲ್ಲ ಎಂಬುದು. ಇದಕ್ಕೂ ಮೊದಲೆ ಶಿವಮೊಗ್ಗದ ಮಾಲ್‌ನಲ್ಲಿ ಅಳವಡಿಸಿದ ಸಾವರಕರನ ಫೋಟೋ ವಿರುದ್ಧ ದೇಶಪ್ರೇಮಿಯೊಬ್ಬ ಪ್ರತಿಭಟಿಸಿದ್ದ. ಇದೇ ಪ್ರತಿಭಟನೆ ಅಮೀರ್ ಅಹಮದ್ ಸರ್ಕಲ್ಲಿಗೂ ಮರುದಿನ ವ್ಯಾಪಿಸಿದ್ದರಿಂದ ಸೆಕ್ಷನ್ 144 ಜಾರಿಯಾಗಿತ್ತು. ಇತ್ತ ಕುವೆಂಪು ರಂಗಮಂದಿರದಲ್ಲಿ ನಾಟಕ ಆಡಲು ಬಣ್ಣ ಬಳಿದುಕೊಂಡು ಕೂತಿದ್ದವರಿಗೆ ಸೆಕ್ಷನ್ 144 ಜಾರಿಯಾಗಿದೆ ಮನೆಗೆ ಹೋಗಿ ಎಂಬ ಅಪ್ಪಣೆ ಬಂತು. ನಾಟಕ ನೋಡಲು ಬಂದಿದ್ದವರೆಲ್ಲಾ, ಈಶ್ವರಪ್ಪ ಮನೆಗೆ ಹೋಗದ ಹೊರತು ಶಿವಮೊಗ್ಗಕ್ಕೆ ನೆಮ್ಮದಿಯಿಲ್ಲ ಎಂದು ಗೊಣಗಿಕೊಂಡು, ಮತಾಂಧ ಮೆದುಳಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಜಾಗವಿರುವುದಿಲ್ಲ ಎಂದು ಮಾತನಾಡಿಕೊಂಡು ಮನೆಸೇರಿದರಂತಲ್ಲಾ, ಥೂತ್ತೇರಿ.
****

ಶಿವಮೊಗ್ಗದ ಸ್ಥಿತಿ ಕುರಿತು ದೂರದೂರಿನ ಜನಗಳು ಅಲ್ಲಿ ಏನೋ ಆಗಬಾರದ್ದು ಆಗುತ್ತಿದೆ ಎಂದು ಆತಂಕಗೊಂಡಿರುವುದು ಸಹಜವಂತಲ್ಲಾ. ಏಕೆಂದರೆ ಟಿವಿ ಮಾಧ್ಯಮಗಳು ಶಿವಮೊಗ್ಗದ ನಿಗಿನಿಗಿ ಶಿವಮೊಗ್ಗ ಕೊತಕೊತ. ಬೂದಿ ಮುಚ್ಚಿದ ಕೆಂಡ ಶಿವಮೊಗ್ಗ, ಆತಂಕದಲ್ಲಿ ಶಿವಮೊಗ್ಗ ಎಂಬ ಅಬ್ಬರಿಸುತ್ತಿರುವುದನ್ನು ಕೇಳಿ ಹೊರಬಂದು ನೋಡಿದರೆ ಆ ಮಲೆನಾಡಿನ ಹೆಮ್ಮೆಯ ನಗರ ಕಾಡಿನಷ್ಟೇ ಪ್ರಶಾಂತವಾಗಿದ್ದು ಆ ಊರಿನ ಜನಗಳಿಗೆ ಅಚ್ಚರಿ ಮೂಡಿಸಿದೆಯಂತಲ್ಲಾ. ಹಾಗಾದರೆ ಟಿವಿಯವರು ಅರಚುತ್ತಿರುವ ನಿಗಿನಿಗಿ ಕೊತಕೊತ ಎಲ್ಲಿದೆ ಎಂದು ನೋಡಲಾಗಿ ಅದು ಟಿವಿಯವರ ಹೊಟ್ಟೆಪಾಡಿನ ಸದ್ದೆಂಬುದು ಅರಿವಾಗಿ ಶಿವಮೊಗ್ಗದ ಜನ ಬಿದ್ದುಬಿದ್ದು ನಕ್ಕರಂತಲ್ಲಾ. ಮುಖ್ಯವಾಗಿ ಟಿವಿಯವರು ಈವರೆಗೂ ತೋರುತ್ತಿರುವುದು ಅಮೀರ್ ಅಹಮದ್ ಸರ್ಕಲ್ಲಿನಲ್ಲಿ ಪ್ಲೆಕ್ಸ್ ಕಿತ್ತಾಕಿದ ಕಿತ್ತಾಟವನ್ನು. ಅದು ಬಿಟ್ಟರೆ ಎಲ್ಲ ಬಡಾವಣೆಗಳಲ್ಲೂ ಕೂಡ, ಅದೆಲ್ಲೊ ದೂರದಲ್ಲಿ ನಡೆದ ಈಶ್ವರಪ್ಪನ ಕಡೆಯವರು ಮತ್ತು ಕೆಲ ಕಿಡಿಗೇಡಿ ಮುಸ್ಲಿಮರ ಪುಂಡಾಟ ಎನ್ನುತ್ತ ಗೋಬಿ ಮಂಚೂರಿ, ಪಾನಿಪೂರಿ, ಇಡ್ಲಿ ಗಾಡಿಯವರೆಲ್ಲಾ ತಮ್ಮ ಜೀವನಾಧಾರದ ಆ ದಿನದ ಸಾಮಗ್ರಿಯನ್ನ ಚರಂಡಿಗೆ ಸುರಿಯುತ್ತ ಶಾಪ ಹಾಕುತ್ತಿದ್ದಾರಂತಲ್ಲಾ. ಪೊಲೀಸರಿಗೆ ಸಂಬಳ ಬರುತ್ತದೆ, ರಾಜಕಾರಣಿಗಳ ಖಜಾನೆಗೆ ರಾಜ ಕಾಲುವೆಗಳೆ ಇವೆ. ಇವರೆಲ್ಲಾ ಆ ದಿನ ದುಡಿದು ಅದರಲ್ಲಧ ಪಿಗ್ಮಿ ಕಟ್ಟಿ ಉಳಿದುದರಲ್ಲಿ ಜೀವನದ ಗಾಡಿ ಎಳೆಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂಬುದು ದುಡಿದು ತಿನ್ನುವವರ ಅಳಲಾಗಿದೆಯಂತಲ್ಲಾ, ಥೂತ್ತೇರಿ.


*****

ಶಿವಮೊಗ್ಗ ಜಿಲ್ಲೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿಯ ಚೂರಿ ಇರಿತದ ವಿಷಯದಲ್ಲಿ ಚೂರಿ ಹಾಕಿದವನು ಮತ್ತು ಹಾಕಿಸಿಕೊಂಡವನು ಜೊತೆಯಲ್ಲಿ ಕುಳಿತು ಜೂಜಾಡುತ್ತಿರುವ ಫೋಟೋ ತೋರಿಸಿದ ಶಾಸಕ ಸಂಗಮೇಶ್ ಇದು ಮತೀಯ ಗಲಭೆ ಎಂದಾದರೆ ನಾನು ಶಾಸಕ ಸ್ಥಾನ ಬಿಡುತ್ತೇನೆ ಎಂದರೂ ಬಿಜೆಪಿಗಳು ಬಿಡುತ್ತಿಲ್ಲವಂತಲ್ಲಾ. ಯಾವತ್ತೂ ಸತ್ಯ ಸಂಗತಿಗಳ ವಿರುದ್ಧವೇ ಹೋರಾಡುವ ಪ್ರವೃತ್ತಿ ಬೆಳೆಸಿಕೊಂಡ ಫಲವಾಗಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಳಲೆ ತಿಂದಿದ್ದು ಎಂದು ಗೊತ್ತಾಗಿದ್ದರು ಅದು ಕೋಳಿ ಎಂದು ಕೂಗುತ್ತಿವೆಯಂತಲ್ಲಾ. ಇದನ್ನ ಕೇಳಿಸಿಕೊಂಡ ಕೊಡಗಿನ ಜನ ಒಳಗೊಳಗೇ ನಗುತ್ತ ಆ ಸಿದ್ದರಾಮಯ್ಯ ಏನು ತಿಂದರೆ ನಮಗೇನು ನಮ್ಮ ಸಂಸ್ಕೃತಿಯಲ್ಲೇ ಮಾಂಸ ಮಡ್ಡಿ ಹಾಸುಹೊಕ್ಕಾಗಿದೆ, ಅದರಲ್ಲೂ ನಮ್ಮ ಪ್ರಿಯ ಆಹಾರವಾದ ವರಹ ಮಾಂಸ ಭಕ್ಷಣೆ ಮಾಡಿಲ್ಲವಲ್ಲಾ, ಅಷ್ಟಕ್ಕೂ ಈಗಿನ ಕೋಳಿ ಹಿಂದಿನ ಕೋಳಿಯಂತಲ್ಲಾ ಎಂದರಂತಲ್ಲಾ. ಸಿದ್ದರಾಮಯ್ಯ ತಿಂದ ಮಾಂಸದ ಬಗ್ಗೆ ತೀರಾ ತಲೆಕೆಡಿಸಿಕೊಂಡಿರುವ ಬಿಜೆಪಿಗಳು ಮತ್ತು ಟಿವಿ ಜನರನ್ನ ಕುರಿತೇ ನಮ್ಮ ಸರ್ವಜ್ಞ ಶತಮಾನದ ಹಿಂದೆಯೇ ವಚನ ಕಟ್ಟಿದ್ದಾನೆ. ಅದೇನೆಂದರೆ ಬಾಡ ತಿಂಬಾತಂಗೆ ಆವೇನು ಆಡೇನು ಕಾಡಬಡನರಿಯೇನು ಮನೆಯ ನಾಯೇನು ಸರ್ವಜ್ಞ. ಅದರಂತೆ ಸಿದ್ದು ಏನು ತಿಂದರೆ ಬಿಜೆಪಿಗಳಿಗೇನೋ ಬೋಪಯ್ಯ ಎನ್ನುವಂತಾಗಿದೆಯಲ್ಲಾ, ಥೂತ್ತೇರಿ॒

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...