Homeನ್ಯಾಯ ಪಥಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

ಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

- Advertisement -
- Advertisement -

ಈ ವಿಷಮ ಸಮಯದಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸುದ್ದಿಗಳು ಶಾನೆ ಕುತೂಹಲಕರವಾಗಿವೆಯಲ್ಲಾ. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನವೇ ಮುನಿಸಿಪಾಲಿಟಿಯವರು ಬಿದಿರುದಬ್ಬೆ ಮತ್ತು ಖಾದಿಯಲ್ಲದ ನಿಗಿನಿಗಿ ಬಾವುಟ ಹಂಚಿದರು. ಜಿಲ್ಲಾ ಮೈದಾನವಲ್ಲದೆ ಶಾಲಾ ಕಾಲೇಜಿನ ದಿಕ್ಕಿನಿಂದ ದೇಶ ಘೋಷಣೆಗಳು ಮಕ್ಕಳ ಗಂಟಲಿಂದ ಮುಗಿಲು ಮುಟ್ಟಿದವು. ಅಷ್ಟರಲ್ಲಿ ಬಿಜೆಪಿಗಳ ಕಡೆಯವರು ಆಳೆತ್ತರದ ಸಾವರ್ಕರ್ ಪ್ಲೆಕ್ಸ್ ತಂದು ಅಮೀರ್ ಅಹಮದ್ ಸರ್ಕಲ್ಲಲ್ಲಿ ಇಟ್ಟರು. ಟಿಪ್ಪು ಅಭಿಮಾನಿಗಳು ಅದನ್ನ ಕಿತ್ತೆಸೆದರು. ಅವರ ದೃಷ್ಟಿಯಲ್ಲಿ ಟಿಪ್ಪು ಸ್ವಾತಂತ್ರ ಹೋರಾಟಗಾರನಲ್ಲದಿದ್ದರೆ ಸಾವರ್ಕರನು ಸ್ವಾತಂತ್ರ ಹೋರಾಟಗಾರನಲ್ಲ ಎಂಬುದು. ಇದಕ್ಕೂ ಮೊದಲೆ ಶಿವಮೊಗ್ಗದ ಮಾಲ್‌ನಲ್ಲಿ ಅಳವಡಿಸಿದ ಸಾವರಕರನ ಫೋಟೋ ವಿರುದ್ಧ ದೇಶಪ್ರೇಮಿಯೊಬ್ಬ ಪ್ರತಿಭಟಿಸಿದ್ದ. ಇದೇ ಪ್ರತಿಭಟನೆ ಅಮೀರ್ ಅಹಮದ್ ಸರ್ಕಲ್ಲಿಗೂ ಮರುದಿನ ವ್ಯಾಪಿಸಿದ್ದರಿಂದ ಸೆಕ್ಷನ್ 144 ಜಾರಿಯಾಗಿತ್ತು. ಇತ್ತ ಕುವೆಂಪು ರಂಗಮಂದಿರದಲ್ಲಿ ನಾಟಕ ಆಡಲು ಬಣ್ಣ ಬಳಿದುಕೊಂಡು ಕೂತಿದ್ದವರಿಗೆ ಸೆಕ್ಷನ್ 144 ಜಾರಿಯಾಗಿದೆ ಮನೆಗೆ ಹೋಗಿ ಎಂಬ ಅಪ್ಪಣೆ ಬಂತು. ನಾಟಕ ನೋಡಲು ಬಂದಿದ್ದವರೆಲ್ಲಾ, ಈಶ್ವರಪ್ಪ ಮನೆಗೆ ಹೋಗದ ಹೊರತು ಶಿವಮೊಗ್ಗಕ್ಕೆ ನೆಮ್ಮದಿಯಿಲ್ಲ ಎಂದು ಗೊಣಗಿಕೊಂಡು, ಮತಾಂಧ ಮೆದುಳಲ್ಲಿ ಕಲೆ, ಸಾಹಿತ್ಯ, ಸಂಗೀತಕ್ಕೆ ಜಾಗವಿರುವುದಿಲ್ಲ ಎಂದು ಮಾತನಾಡಿಕೊಂಡು ಮನೆಸೇರಿದರಂತಲ್ಲಾ, ಥೂತ್ತೇರಿ.
****

ಶಿವಮೊಗ್ಗದ ಸ್ಥಿತಿ ಕುರಿತು ದೂರದೂರಿನ ಜನಗಳು ಅಲ್ಲಿ ಏನೋ ಆಗಬಾರದ್ದು ಆಗುತ್ತಿದೆ ಎಂದು ಆತಂಕಗೊಂಡಿರುವುದು ಸಹಜವಂತಲ್ಲಾ. ಏಕೆಂದರೆ ಟಿವಿ ಮಾಧ್ಯಮಗಳು ಶಿವಮೊಗ್ಗದ ನಿಗಿನಿಗಿ ಶಿವಮೊಗ್ಗ ಕೊತಕೊತ. ಬೂದಿ ಮುಚ್ಚಿದ ಕೆಂಡ ಶಿವಮೊಗ್ಗ, ಆತಂಕದಲ್ಲಿ ಶಿವಮೊಗ್ಗ ಎಂಬ ಅಬ್ಬರಿಸುತ್ತಿರುವುದನ್ನು ಕೇಳಿ ಹೊರಬಂದು ನೋಡಿದರೆ ಆ ಮಲೆನಾಡಿನ ಹೆಮ್ಮೆಯ ನಗರ ಕಾಡಿನಷ್ಟೇ ಪ್ರಶಾಂತವಾಗಿದ್ದು ಆ ಊರಿನ ಜನಗಳಿಗೆ ಅಚ್ಚರಿ ಮೂಡಿಸಿದೆಯಂತಲ್ಲಾ. ಹಾಗಾದರೆ ಟಿವಿಯವರು ಅರಚುತ್ತಿರುವ ನಿಗಿನಿಗಿ ಕೊತಕೊತ ಎಲ್ಲಿದೆ ಎಂದು ನೋಡಲಾಗಿ ಅದು ಟಿವಿಯವರ ಹೊಟ್ಟೆಪಾಡಿನ ಸದ್ದೆಂಬುದು ಅರಿವಾಗಿ ಶಿವಮೊಗ್ಗದ ಜನ ಬಿದ್ದುಬಿದ್ದು ನಕ್ಕರಂತಲ್ಲಾ. ಮುಖ್ಯವಾಗಿ ಟಿವಿಯವರು ಈವರೆಗೂ ತೋರುತ್ತಿರುವುದು ಅಮೀರ್ ಅಹಮದ್ ಸರ್ಕಲ್ಲಿನಲ್ಲಿ ಪ್ಲೆಕ್ಸ್ ಕಿತ್ತಾಕಿದ ಕಿತ್ತಾಟವನ್ನು. ಅದು ಬಿಟ್ಟರೆ ಎಲ್ಲ ಬಡಾವಣೆಗಳಲ್ಲೂ ಕೂಡ, ಅದೆಲ್ಲೊ ದೂರದಲ್ಲಿ ನಡೆದ ಈಶ್ವರಪ್ಪನ ಕಡೆಯವರು ಮತ್ತು ಕೆಲ ಕಿಡಿಗೇಡಿ ಮುಸ್ಲಿಮರ ಪುಂಡಾಟ ಎನ್ನುತ್ತ ಗೋಬಿ ಮಂಚೂರಿ, ಪಾನಿಪೂರಿ, ಇಡ್ಲಿ ಗಾಡಿಯವರೆಲ್ಲಾ ತಮ್ಮ ಜೀವನಾಧಾರದ ಆ ದಿನದ ಸಾಮಗ್ರಿಯನ್ನ ಚರಂಡಿಗೆ ಸುರಿಯುತ್ತ ಶಾಪ ಹಾಕುತ್ತಿದ್ದಾರಂತಲ್ಲಾ. ಪೊಲೀಸರಿಗೆ ಸಂಬಳ ಬರುತ್ತದೆ, ರಾಜಕಾರಣಿಗಳ ಖಜಾನೆಗೆ ರಾಜ ಕಾಲುವೆಗಳೆ ಇವೆ. ಇವರೆಲ್ಲಾ ಆ ದಿನ ದುಡಿದು ಅದರಲ್ಲಧ ಪಿಗ್ಮಿ ಕಟ್ಟಿ ಉಳಿದುದರಲ್ಲಿ ಜೀವನದ ಗಾಡಿ ಎಳೆಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು ಎಂಬುದು ದುಡಿದು ತಿನ್ನುವವರ ಅಳಲಾಗಿದೆಯಂತಲ್ಲಾ, ಥೂತ್ತೇರಿ.


*****

ಶಿವಮೊಗ್ಗ ಜಿಲ್ಲೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಭದ್ರಾವತಿಯ ಚೂರಿ ಇರಿತದ ವಿಷಯದಲ್ಲಿ ಚೂರಿ ಹಾಕಿದವನು ಮತ್ತು ಹಾಕಿಸಿಕೊಂಡವನು ಜೊತೆಯಲ್ಲಿ ಕುಳಿತು ಜೂಜಾಡುತ್ತಿರುವ ಫೋಟೋ ತೋರಿಸಿದ ಶಾಸಕ ಸಂಗಮೇಶ್ ಇದು ಮತೀಯ ಗಲಭೆ ಎಂದಾದರೆ ನಾನು ಶಾಸಕ ಸ್ಥಾನ ಬಿಡುತ್ತೇನೆ ಎಂದರೂ ಬಿಜೆಪಿಗಳು ಬಿಡುತ್ತಿಲ್ಲವಂತಲ್ಲಾ. ಯಾವತ್ತೂ ಸತ್ಯ ಸಂಗತಿಗಳ ವಿರುದ್ಧವೇ ಹೋರಾಡುವ ಪ್ರವೃತ್ತಿ ಬೆಳೆಸಿಕೊಂಡ ಫಲವಾಗಿ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಳಲೆ ತಿಂದಿದ್ದು ಎಂದು ಗೊತ್ತಾಗಿದ್ದರು ಅದು ಕೋಳಿ ಎಂದು ಕೂಗುತ್ತಿವೆಯಂತಲ್ಲಾ. ಇದನ್ನ ಕೇಳಿಸಿಕೊಂಡ ಕೊಡಗಿನ ಜನ ಒಳಗೊಳಗೇ ನಗುತ್ತ ಆ ಸಿದ್ದರಾಮಯ್ಯ ಏನು ತಿಂದರೆ ನಮಗೇನು ನಮ್ಮ ಸಂಸ್ಕೃತಿಯಲ್ಲೇ ಮಾಂಸ ಮಡ್ಡಿ ಹಾಸುಹೊಕ್ಕಾಗಿದೆ, ಅದರಲ್ಲೂ ನಮ್ಮ ಪ್ರಿಯ ಆಹಾರವಾದ ವರಹ ಮಾಂಸ ಭಕ್ಷಣೆ ಮಾಡಿಲ್ಲವಲ್ಲಾ, ಅಷ್ಟಕ್ಕೂ ಈಗಿನ ಕೋಳಿ ಹಿಂದಿನ ಕೋಳಿಯಂತಲ್ಲಾ ಎಂದರಂತಲ್ಲಾ. ಸಿದ್ದರಾಮಯ್ಯ ತಿಂದ ಮಾಂಸದ ಬಗ್ಗೆ ತೀರಾ ತಲೆಕೆಡಿಸಿಕೊಂಡಿರುವ ಬಿಜೆಪಿಗಳು ಮತ್ತು ಟಿವಿ ಜನರನ್ನ ಕುರಿತೇ ನಮ್ಮ ಸರ್ವಜ್ಞ ಶತಮಾನದ ಹಿಂದೆಯೇ ವಚನ ಕಟ್ಟಿದ್ದಾನೆ. ಅದೇನೆಂದರೆ ಬಾಡ ತಿಂಬಾತಂಗೆ ಆವೇನು ಆಡೇನು ಕಾಡಬಡನರಿಯೇನು ಮನೆಯ ನಾಯೇನು ಸರ್ವಜ್ಞ. ಅದರಂತೆ ಸಿದ್ದು ಏನು ತಿಂದರೆ ಬಿಜೆಪಿಗಳಿಗೇನೋ ಬೋಪಯ್ಯ ಎನ್ನುವಂತಾಗಿದೆಯಲ್ಲಾ, ಥೂತ್ತೇರಿ॒

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....