HomeಮುಖಪುಟFact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

Fact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

- Advertisement -
- Advertisement -

ದೆಹಲಿಯಲ್ಲಿ ಭಾರೀ ಹಿಂಸಾಚಾರ ನಡೆಯಿತು. 40ಕ್ಕೂ ಹೆಚ್ಚು ಜನ ಬಲಿಯಾಗಿ 500ರಷ್ಟು ಜನ ಗಾಯಗೊಂಡು ಕೋಟ್ಯಾಂತರ ರೂಗಳ ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಯಿತು. ಅದಕ್ಕೂ ಮುನ್ನ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಎಂಬ ವ್ಯಕ್ತಿ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯುತ್ತೇವೆ ಎಂದು ಪೊಲೀಸರ ಎದುರೇ ಬೆದರಿಕೆ ಹಾಕಿದ್ದ. ಅದಕ್ಕೂ ಮುಂಚೆ ಅನುರಾಗ್ ಠಾಕೂರ್ ಎಂಬ ಬಿಜೆಪಿ ಸಂಸದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಘೋಷಣೆ ಕೂಗಿದ್ದ. ಅದರ ವಿಡಿಯೋ ನೋಡಿ

ದೆಹಲಿ ಹಿಂಸಾಚಾರದ ಗಾಯಾಳುಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲು ಪೊಲೀಸರು ರಕ್ಷಣೆ ನೀಡುತ್ತಿಲ್ಲ ಎಂದು ವಕೀಲರೊಬ್ಬರು ನ್ಯಾಯಾಧೀಶರಿಗೆ ಕರೆ ಮಾಡಿ ಮನವಿ ಮಾಡಿದರು. ತಡರಾತ್ರಿ ವಿಚಾರಣೆ ನಡೆಸಿದ ನ್ಯಾ.ಎಸ್ ಮುರಳೀಧರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ರಕ್ಷಣೆ ನೀಡಲು ಆದೇಶಿಸಿದರು.

ಇನ್ನು ಹಿಂಸಾಚಾರ ಪ್ರಕರಣಕ್ಕೆ ಕಾರಣವೇನೆಂದು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂತು. ಆಗ ನ್ಯಾ.ಮುರಳೀಧರ್ ಆ ದ್ವೇಷ ಭಾಷಣದ ವಿಡಿಯೋಗಳನ್ನು ಕೋರ್ಟ್‌ನಲ್ಲಿ ಪ್ರಸಾರ ಮಾಡಿ ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಸೇರಿದಂತೆ ನಾಲ್ಕು ಜನರ ಮೇಲೆ ಎಫ್‌ಐಆರ್ ಹಾಕಬೇಕೆಂದು ತಾಕೀತು ಮಾಡಿದರು. ಆ ನ್ಯಾಯಮೂರ್ತಿಗಳ ಪರವಾಗಿ ಹಲವು ಪತ್ರಿಕೆಗಳು ವರಿದಿ ಮಾಡಿದರು. ಬಹಳಷ್ಟು ಜನ ಅವರ ಧೈರ್ಯ ಮತ್ತು ನ್ಯಾಯವಂತಿಕೆಯನ್ನು ಮೆಚ್ಚಿಕೊಂಡರು.

ಇದನ್ನೂ ಓದಿ: ಬಿಜಿಪಿ ನಾಯಕರ ವಿರುದ್ಧ FIR ದಾಖಲಿಸಲು ದೆಹಲಿ ಹೈಕೋರ್ಟ್ ಆದೇಶ

ಅದಾದ ಒಂದು ದಿನಕ್ಕೆ ಆ ನ್ಯಾಯಮೂರ್ತಿಯನ್ನು ದೆಹಲಿಯಿಂದ ಪಂಜಾಬ್ – ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಯಿತು.

ಅಷ್ಟೇ ಅಲ್ಲದೇ ಅವರು ಕಾಂಗ್ರೆಸ್ ಪಕ್ಷದ ಸಮರ್ಥಕರು, ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗಿದ್ದರು. ಹಾಗಾಗಿಯೇ ಅವರು ಶಾಹೀನ್ ಬಾಗ್ ಪ್ರತಿಭಟನಾಕಾರರ ಮೇಲೆ ಕ್ರಮ ತೆಗೆದುಕೊಳ್ಳೂವ ಬದಲು ಬಿಜೆಪಿ ಮುಖಂಡರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಹರಿಬಿಡಲಾಯಿತು.

ಈ ಕುರಿತು ಫ್ಯಾಕ್ಟ್ಚೆಕ್ ನಡೆಸಿದಾಗ ನ್ಯಾ.ಮುರಳೀಧರ್ ಕಾಂಗ್ರೆಸ್ ಬೆಂಬಲಿಗರಲ್ಲ, ಸ್ವತಂತ್ರ ನ್ಯಾಯಾಧೀಶರು ಎಂಬುದು ಸ್ಪಷ್ಟವಾಗಿದೆ. ಜೊತೆಗೆ ಸೋನಿಯಾ ಗಾಂಧಿ ಜೊತೆಗೆ ನಾಮಪತ್ರ ಸಲ್ಲಿಸುವಾಗ ಇದ್ದವರು ಕೆ.ಸಿ ಕೌಶಿಕ್ ಎಂಬುವರು ಸೋನಿಯಾರವರ ವಕೀಲರೇ ಹೊರತು ಮುರಳೀಧರ್ ಅಲ್ಲ ಎಂಬುದು ತಿಳಿದುಬಂದಿದೆ.

ಈ ಕುರಿತು ಯೂತ್‌ ಕಾಂಗ್ರೆಸ್‌ ಈ ಹಿಂದೆಯೇ ಹಲವಾರು ಫೋಟೊಗಳನ್ನು ಹಂಚಿಕೊಂಡಿದೆ.

ಆಲ್ಟ್‌ ನ್ಯೂಸ್‌ ಈ ಕುರಿತು ಸಮಗ್ರ ವರದಿ ಮಾಡಿದ್ದು ಮುರಳೀಧರ್‌ ಅಲ್ಲ ಅವರು ಕೌಶಿಕ್‌ ಎಂದು ಸ್ಪಷ್ಟಪಡಿಸಿದೆ. ಆ ಫೋಟೊ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...