HomeಮುಖಪುಟFact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

Fact-check : ವರ್ಗಾವಣೆಯಾದ ನ್ಯಾ.ಎಸ್ ಮುರಳೀಧರ್ ಕಾಂಗ್ರೆಸ್ ಸಮರ್ಥಕರೆ?

- Advertisement -
- Advertisement -

ದೆಹಲಿಯಲ್ಲಿ ಭಾರೀ ಹಿಂಸಾಚಾರ ನಡೆಯಿತು. 40ಕ್ಕೂ ಹೆಚ್ಚು ಜನ ಬಲಿಯಾಗಿ 500ರಷ್ಟು ಜನ ಗಾಯಗೊಂಡು ಕೋಟ್ಯಾಂತರ ರೂಗಳ ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಯಿತು. ಅದಕ್ಕೂ ಮುನ್ನ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಎಂಬ ವ್ಯಕ್ತಿ ಸಿಎಎ ವಿರೋಧಿ ಹೋರಾಟಗಾರರನ್ನು ಎತ್ತಂಗಡಿ ಮಾಡದಿದ್ದರೆ ನಾವು ಬೀದಿಗಿಳಿಯುತ್ತೇವೆ ಎಂದು ಪೊಲೀಸರ ಎದುರೇ ಬೆದರಿಕೆ ಹಾಕಿದ್ದ. ಅದಕ್ಕೂ ಮುಂಚೆ ಅನುರಾಗ್ ಠಾಕೂರ್ ಎಂಬ ಬಿಜೆಪಿ ಸಂಸದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಘೋಷಣೆ ಕೂಗಿದ್ದ. ಅದರ ವಿಡಿಯೋ ನೋಡಿ

ದೆಹಲಿ ಹಿಂಸಾಚಾರದ ಗಾಯಾಳುಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲು ಪೊಲೀಸರು ರಕ್ಷಣೆ ನೀಡುತ್ತಿಲ್ಲ ಎಂದು ವಕೀಲರೊಬ್ಬರು ನ್ಯಾಯಾಧೀಶರಿಗೆ ಕರೆ ಮಾಡಿ ಮನವಿ ಮಾಡಿದರು. ತಡರಾತ್ರಿ ವಿಚಾರಣೆ ನಡೆಸಿದ ನ್ಯಾ.ಎಸ್ ಮುರಳೀಧರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ರಕ್ಷಣೆ ನೀಡಲು ಆದೇಶಿಸಿದರು.

ಇನ್ನು ಹಿಂಸಾಚಾರ ಪ್ರಕರಣಕ್ಕೆ ಕಾರಣವೇನೆಂದು ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂತು. ಆಗ ನ್ಯಾ.ಮುರಳೀಧರ್ ಆ ದ್ವೇಷ ಭಾಷಣದ ವಿಡಿಯೋಗಳನ್ನು ಕೋರ್ಟ್‌ನಲ್ಲಿ ಪ್ರಸಾರ ಮಾಡಿ ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಸೇರಿದಂತೆ ನಾಲ್ಕು ಜನರ ಮೇಲೆ ಎಫ್‌ಐಆರ್ ಹಾಕಬೇಕೆಂದು ತಾಕೀತು ಮಾಡಿದರು. ಆ ನ್ಯಾಯಮೂರ್ತಿಗಳ ಪರವಾಗಿ ಹಲವು ಪತ್ರಿಕೆಗಳು ವರಿದಿ ಮಾಡಿದರು. ಬಹಳಷ್ಟು ಜನ ಅವರ ಧೈರ್ಯ ಮತ್ತು ನ್ಯಾಯವಂತಿಕೆಯನ್ನು ಮೆಚ್ಚಿಕೊಂಡರು.

ಇದನ್ನೂ ಓದಿ: ಬಿಜಿಪಿ ನಾಯಕರ ವಿರುದ್ಧ FIR ದಾಖಲಿಸಲು ದೆಹಲಿ ಹೈಕೋರ್ಟ್ ಆದೇಶ

ಅದಾದ ಒಂದು ದಿನಕ್ಕೆ ಆ ನ್ಯಾಯಮೂರ್ತಿಯನ್ನು ದೆಹಲಿಯಿಂದ ಪಂಜಾಬ್ – ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಯಿತು.

ಅಷ್ಟೇ ಅಲ್ಲದೇ ಅವರು ಕಾಂಗ್ರೆಸ್ ಪಕ್ಷದ ಸಮರ್ಥಕರು, ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗಿದ್ದರು. ಹಾಗಾಗಿಯೇ ಅವರು ಶಾಹೀನ್ ಬಾಗ್ ಪ್ರತಿಭಟನಾಕಾರರ ಮೇಲೆ ಕ್ರಮ ತೆಗೆದುಕೊಳ್ಳೂವ ಬದಲು ಬಿಜೆಪಿ ಮುಖಂಡರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಹರಿಬಿಡಲಾಯಿತು.

ಈ ಕುರಿತು ಫ್ಯಾಕ್ಟ್ಚೆಕ್ ನಡೆಸಿದಾಗ ನ್ಯಾ.ಮುರಳೀಧರ್ ಕಾಂಗ್ರೆಸ್ ಬೆಂಬಲಿಗರಲ್ಲ, ಸ್ವತಂತ್ರ ನ್ಯಾಯಾಧೀಶರು ಎಂಬುದು ಸ್ಪಷ್ಟವಾಗಿದೆ. ಜೊತೆಗೆ ಸೋನಿಯಾ ಗಾಂಧಿ ಜೊತೆಗೆ ನಾಮಪತ್ರ ಸಲ್ಲಿಸುವಾಗ ಇದ್ದವರು ಕೆ.ಸಿ ಕೌಶಿಕ್ ಎಂಬುವರು ಸೋನಿಯಾರವರ ವಕೀಲರೇ ಹೊರತು ಮುರಳೀಧರ್ ಅಲ್ಲ ಎಂಬುದು ತಿಳಿದುಬಂದಿದೆ.

ಈ ಕುರಿತು ಯೂತ್‌ ಕಾಂಗ್ರೆಸ್‌ ಈ ಹಿಂದೆಯೇ ಹಲವಾರು ಫೋಟೊಗಳನ್ನು ಹಂಚಿಕೊಂಡಿದೆ.

ಆಲ್ಟ್‌ ನ್ಯೂಸ್‌ ಈ ಕುರಿತು ಸಮಗ್ರ ವರದಿ ಮಾಡಿದ್ದು ಮುರಳೀಧರ್‌ ಅಲ್ಲ ಅವರು ಕೌಶಿಕ್‌ ಎಂದು ಸ್ಪಷ್ಟಪಡಿಸಿದೆ. ಆ ಫೋಟೊ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...