Homeಫ್ಯಾಕ್ಟ್‌ಚೆಕ್Fact Check: ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ಕರ್ನಾಟಕಕ್ಕೆ ಬರ ಬೇಕಿರುವ ಎಲ್ಲಾ ಹಣ...

Fact Check: ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕೇಂದ್ರದಿಂದ ಕರ್ನಾಟಕಕ್ಕೆ ಬರ ಬೇಕಿರುವ ಎಲ್ಲಾ ಹಣ ಬಂದಿದೆಯಾ?

- Advertisement -
- Advertisement -

ಕೇಂದ್ರ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ನಡುವೆ ತೆರಿಗೆ ಹಂಚಿಕೆ ಕಿತ್ತಾಟ ತಾರಕಕ್ಕೇರಿದೆ. ಹಣಕಾಸು ಆಯೋಗದ ಶಿಫಾರಸ್ಸಿನಂತೆ ನಮಗೆ ಬರ ಬೇಕಿರುವ ತೆರಿಗೆ ಪಾಲು ಮತ್ತು ನಾವು ಮನವಿ ಮಾಡಿದಂತೆ ಎನ್‌ಡಿಆರ್‌ಎಫ್‌ ನಿಧಿಯ ಬರ ಪರಿಹಾರ ಬಂದಿಲ್ಲ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.

ತೆರಿಗೆ ಪಾಲು ಕೊಡುವಂತೆ ಆಗ್ರಹಿಸಿ ಮತ್ತು ಅನುದಾನ ಹಂಚಿಕೆಯ ತಾರತಮ್ಯ ಖಂಡಿಸಿ ಫೆಬ್ರವರಿ ತಿಂಗಳಲ್ಲಿ ರಾಜ್ಯ ಸರ್ಕಾರ ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಬರ ಪರಿಹಾರ ಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ, ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಆದರೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, “ಕೇಂದ್ರದಿಂದ ಕರ್ನಾಟಕಕ್ಕೆ ಕೊಡಬೇಕಿದ್ದ ಒಂದೊಂದು ಪೈಸೆಯನ್ನೂ ಸರಿಯಾದ ಸಮಯಕ್ಕೆ ಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಅವರು, “ತೆರಿಗೆ ಹಂಚಿಕೆಯು 2014 ರಿಂದ 2024 ರ ನಡುವೆ ಶೇ. 258ರಷ್ಟು ಹೆಚ್ಚಾಗಿದೆ. ಇದು ಯುಪಿಎ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ 3.5 ಪಟ್ಟು ಹೆಚ್ಚು. ರಾಜ್ಯಗಳಿಗೆ ಕೇಂದ್ರದಿಂದ ನೀಡುವ ಅನುದಾನ ಶೇ. 273ರಷ್ಟು ಹೆಚ್ಚಳವಾಗಿದೆ. ಇದು ಯುಪಿಎ ಸರ್ಕಾರ ನೀಡಿದ್ದಕ್ಕಿಂತ 3.7 ಪಟ್ಟು ಹೆಚ್ಚು. 2004-2014 ರ ನಡುವೆ ಕರ್ನಾಟಕಕ್ಕೆ ತೆರಿಗೆ ಹಂಚಿಕೆ ರೂಪದಲ್ಲಿ ವರ್ಷಕ್ಕೆ ನೀಡಲಾದ ಹಣ 81,795 ಕೋಟಿ ರೂ. 2014-2024 ರ ನಡುವೆ, ರಾಜ್ಯಕ್ಕೆ ಪಾವತಿಸಿದ ತೆರಿಗೆ ಹಂಚಿಕೆ ಸುಮಾರು 2.93 ಲಕ್ಷ ಕೋಟಿಗಳು” ಎಂದಿದ್ದಾರೆ.

ಅಲ್ಲದೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದಿರುವ ನಿರ್ಮಲಾ ಸೀತಾರಾಮನ್, ಆ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದಿದ್ದಾರೆ.

ಫ್ಯಾಕ್ಟ್‌ಚೆಕ್: ಹಾಗಾದರೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದಂತೆ ಕರ್ನಾಟಕಕ್ಕೆ ಕೇಂದ್ರದಿಂದ ಬರ ಬೇಕಿದ್ದ ಎಲ್ಲಾ ಹಣ ಬಂದಿದೆಯಾ? ರಾಜ್ಯ ಸರ್ಕಾರ ಹೇಳುತ್ತಿರುವುದೇನು ನೋಡೋಣ.

ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 25ರಂದು ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿರುವ ಸಚಿವ ಕೃಷ್ಣಬೈರೇಗೌಡ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಮೊತ್ತ ಎಷ್ಟು? ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಹಣ ನೀಡುತ್ತಿದೆಯಾ? ಇತ್ಯಾದಿ ಮಾಹಿತಿಗಳನ್ನು ಅಂಕಿ ಅಂಶ ಸಹಿತ ವಿವರಿಸಿದ್ದಾರೆ.

ಸಚಿವ ಕೃಷ್ಣಬೈರೇಗೌಡ ಅವರು ಹೇಳಿದಂತೆ, “ಯಾವುದೇ ರಾಜ್ಯಕ್ಕೆ 2019-20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು 20-21ರಲ್ಲಿ ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21ರಲ್ಲಿ ರೂ. 5495 ಕೋಟಿ ಹಣ ಕಡಿಮೆ ಬಂದಿದೆ. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ, ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ ಎಂದಿದ್ದಾರೆ.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದ್ದಾರೆ.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ರೂ.31,180 ಕೋಟಿಗೆ ಕುಸಿದಿದೆ. ಹೀಗಾಗಿ, ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. ಇನ್ನು ಜಲಮೂಲಗಳ ಪುನರುಜ್ಜೀವನಕ್ಕೆ 3 ಸಾವಿರ ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರೂ. ಸೇರಿ ಬೆಂಗಳೂರಿಗೆ ಒಟ್ಟು ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಹಳೆ ಬಾಕಿ ಸೇರಿ ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ ಎಂದು ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿಗೆ ಕೇಂದ್ರ ಹಣ ನೀಡುತ್ತಿದೆಯಾ?

ರಾಜ್ಯ ಸರ್ಕಾರದ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೃಷ್ಣಬೈರೇಗೌಡರು, “ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ಸೇರಿ ರೂ.11,200 ಕೋಟಿ ಹಣವನ್ನೂ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದಿದ್ದಾರೆ.

ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯಕ್ಕೆ ಕೇಂದ್ರದಿಂದ ರಾಜ್ಯಕ್ಕೆ 2020-21ನೇ ಸಾಲಿನ ತೆರಿಗೆ ಬಾಕಿ ರೂ. 5,495 ಕೋಟಿ ಮತ್ತು 2021-26ನೇ ಸಾಲಿನಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ರೂ.6,000 ಕೋಟಿ ಸೇರಿ ಒಟ್ಟು ರೂ.11,495 ಕೋಟಿ ಬರಬೇಕಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ 2024-25 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂ., ಶಕ್ತಿ ಯೋಜನೆಗೆ 5,015 ಕೋಟಿ ರೂ., ಯುವನಿಧಿ ಯೋಜನೆಗೆ 650 ಕೋಟಿ ರೂ., ಮತ್ತು ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ನೀಡಿದೆ. ಹಾಗಾಗಿ, ಇಲ್ಲಿ ಕೇಂದ್ರದ ಅನುದಾನದ ಅವಶ್ಯಕತೆ ಇಲ್ಲ. ನಿವೃತ್ತಿ ವೇತನದಲ್ಲಿ ಕೇಂದ್ರದ ಸರ್ಕಾರದ ಪಾಲು ರೂ. 550 ಕೋಟಿ ಇದೆ.

ಬರಗಾಲ ಪರಿಹಾರ ಬಿಡುಗಡೆ ಕೋರಿ ಸುಪ್ರೀಂ ಮೊರೆ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ತೆರಿಗೆ ಪಾಲು ಒಂದೆಡೆಯಾದರೆ, ಮತ್ತೊಂದೆಡೆ ಬರ ಪರಿಹಾರ ಬಂದಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಈ ಕುರಿತು ಮಾರ್ಚ್ 23ರಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, “ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದಿದ್ದೇವೆ. ಆದರೂ, ಇದುವರೆ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದಿದ್ದಾರೆ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ, ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20ರಂದು ಕೃಷ್ಣಬೈರೇಗೌಡ ಜೊತೆ ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ, ನಮಗೆ ಪರಿಹಾರ ಕೊಡಲಿಲ್ಲ. ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬರ ಪರಿಹಾರದ ವಿಷಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತಿಕ್ಕಾಟದ ಕುರಿತು ಫೆ. 7ರಂದು ಪ್ರಜಾವಾಣಿ ಪತ್ರಿಕೆಯು “ಆಳ- ಅಗಲ ; ಬರ ಪರಿಹಾರದ ಹೊಣೆ ನಮ್ಮದಲ್ಲ ರಾಜ್ಯ ಸರ್ಕಾರದ್ದು ಎನ್ನುತ್ತದೆ ಕೇಂದ್ರ” ಎಂಬ ಶೀರ್ಷಿಕೆಯಲ್ಲಿ ವಿಸ್ಕೃತ ಲೇಖನವೊಂದನ್ನು ಪ್ರಕಟಿಸಿದೆ.

ಈ ಲೇಖನದಲ್ಲಿ “ಕೇಂದ್ರ ಸರ್ಕಾರದ್ದೇ ನಿಯಮಗಳ ಪ್ರಕಾರ ರೈತರಿಗೆ ಪರಿಹಾರ ಮತ್ತು ಇತರ ಪರಿಹಾರ ಕಾರ್ಯಗಳಿಗೆ ರೂ. 18,171 ಕೋಟಿ ನೆರವು ನೀಡಿ ಎಂದು ರಾಜ್ಯ ಸರ್ಕಾರ ಕೇಳಿದೆ. 2023–24ನೇ ಸಾಲಿನ ಎಸ್‌ಡಿಆರ್‌ಎಫ್‌ ನಿಧಿಯಲ್ಲಿ ರೂ. 929 ಕೋಟಿಯಷ್ಟಿದೆ. ಈ ಹಣವನ್ನು ಬೆಳೆ ಪರಿಹಾರಕ್ಕೆ ಒದಗಿಸಲೂ ಸಾಧ್ಯವಿಲ್ಲ, ಕುಡಿಯುವ ನೀರು, ಕೊಳವೆ ಬಾವಿ, ಮೇವು–ಗೋಶಾಲೆಗಳ ಸ್ಥಾಪನೆಗೆ ಒದಗಿಸಲೂ ಸಾಲುವುದಿಲ್ಲ. ಹೀಗಾಗಿಯೇ ಎನ್‌ಡಿಆರ್‌ಎಫ್‌ ನಿಧಿಯಿಂದ ಹೆಚ್ಚಿನ ನೆರವು ಒದಗಿಸಿ ಎಂದು ರಾಜ್ಯ ಸರ್ಕಾರವು ಕೇಳುತ್ತಿದೆ” ಎನ್ನಲಾಗಿದೆ.

ಲೇಖನ ಕೊಂಡಿ ಇಲ್ಲಿದೆ 

“ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌ ಅಡಿಯಲ್ಲಿ ನಿಧಿಯನ್ನು ತೆಗೆದಿರಿಸುತ್ತದೆ. ರಾಜ್ಯಗಳಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿಯೇ ಒಂದು ಭಾಗವನ್ನು ಎನ್‌ಡಿಆರ್‌ಎಫ್‌ಗೆಂದು ಮೀಸಲಿರಿಸಲಾಗುತ್ತದೆ. ಹಣಕಾಸು ಆಯೋಗವು ನಿಗದಿ ಮಾಡಿದ ಪ್ರಮಾಣದಲ್ಲಿ ಎನ್‌ಡಿಆರ್‌ಎಫ್‌ ನಿಧಿಯ ಸ್ವಲ್ಪ ಪ್ರಮಾಣವನ್ನು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡುತ್ತದೆ. 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ 2023–24ನೇ ಸಾಲಿನಲ್ಲಿ ₹929 ಕೋಟಿಯನ್ನು ಈ ನಿಧಿ ಅಡಿ ಒದಗಿಸಬೇಕು ಎಂದು ಹೇಳಿತ್ತು. ಅದರಲ್ಲಿ ತನ್ನ ಪಾಲಿನ ₹697.60 ಕೋಟಿಯನ್ನು ಕರ್ನಾಟಕಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರವು ಹೇಳುತ್ತಿದೆ.” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರ ತೆರಿಗೆ ಪಾಲು, ಎನ್‌ಡಿಆರ್‌ಎಫ್‌ ಅಡಿ ಬರ ಪರಿಹಾರ ಸೇರಿ ಕೇಂದ್ರದಿಂದ ಎಷ್ಟು ಹಣ ಬರಲು ಬಾಕಿ ಇದೆ ಎಂಬ ಮಾಹಿತಿಯನ್ನು ಅಂಕಿ ಅಂಶಗಳ ಸಹಿತ ವಿವರಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾವು ಎಲ್ಲಾ ಹಣ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆಯೇ ಹೊರತು. ಈ ಕುರಿತು ಸ್ಪಷ್ಟವಾದ ದಾಖಲೆ ನೀಡಿಲ್ಲ.

ಇದನ್ನೂ ಓದಿ : Fact Check : ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...