Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...