Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...