Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...