Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...