Homeಕರ್ನಾಟಕಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಕೊರೋನಾ ಆಹಾರ ಸಹಾಯವಾಣಿ 155214ಕೆಲಸ ಮಾಡುತ್ತಿದೆಯೇ?: ನಾನುಗೌರಿ.ಕಾಂಗೆ ಆಘಾತ ತಂದ ಅನುಭವ

ಸ್ವಯಂಪ್ರೇರಣೆಯಿಂದ ಸರ್ಕಾರದ ಸಹಾಯವಾಣಿಯನ್ನು ಪ್ರಚಾರ ಮಾಡಿದ ನಾನುಗೌರಿ.ಕಾಂಗೆ ಆಘಾತ ಕಾದಿತ್ತು.

- Advertisement -
- Advertisement -

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ನಾನುಗೌರಿ.ಕಾಂ ಸರ್ಕಾರವನ್ನು ಪ್ರಶ್ನೆ ಮಾಡುವುದಷ್ಟೇ ಮಾಡಬಾರದು ಎಂದು ಭಾವಿಸಿದೆ. ಇಂತಹ ಹೊತ್ತಿನಲ್ಲಿ ಸರ್ಕಾರದ ಜೊತೆಗೂ ನಿಂತು ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.  ಜನರಿಗೆ ನೆರವು ಒದಗಿಸುತ್ತಿರುವ ಹಲವು ಸಂಸ್ಥೆಗಳಿಗೂ ಮತ್ತು ಸಾಮಾನ್ಯ ಬಡಜನರಿಗೂ ನಡುವೆ ಸೇತುವೆಯಂತೆ ಕೆಲಸ ಮಾಡಲು ಪ್ರಯತ್ನ ನಡೆಸಿದೆ. ಆದರೆ, ಅದೇ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ದೀರ್ಘ ಕಾಲ ನೆರವು ಸಿಗಬೇಕೆಂದರೆ ಸರ್ಕಾರವೇ ಕೆಲಸ ಮಾಡಬೇಕಾಗುತ್ತದೆ.

ಆ ಹಿನ್ನೆಲೆಯಲ್ಲಿ ನಾನುಗೌರಿ.ಕಾಂನಿಂದ ಸರ್ಕಾರದ ಸಹಾಯವಾಣಿ 155214ಗೆ ಕರೆ ಮಾಡಿ ಅದು ಕೆಲಸ ಮಾಡುತ್ತಿದೆಯೇ  ಎಂದು ಪರಿಶೀಲಿಸಲಾಯಿತು ಮತ್ತು ಫೋನ್‌ ಕರೆ ಸ್ವೀಕರಿಸಿದವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಆ ನಂಬರ್‌ ಅನ್ನು ಹಾಕಿ ಪೋಸ್ಟರ್‌ ಮಾಡಿ ಸಾಮಾನ್ಯ ಜನರು ಮತ್ತು ಸ್ವಯಂಸೇವಕರಲ್ಲಿ ಮನವಿ ಮಾಡಿಕೊಳ್ಳಲಾಯಿತು.

ಜೊತೆಗೆ ಉತ್ತರಹಳ್ಳಿಯ ಅಂಬೇಡ್ಕರ್‌ ನಗರದಲ್ಲಿ ವಾಸಿಸುತ್ತಿರುವ ಬಡ ಕುಟುಂಬಗಳಿಗೆ ಅಗತ್ಯವಿದ್ದ ನೆರವಿಗಾಗಿ ಪ್ರಯತ್ನ ಮಾಡುತ್ತಿದ್ದ ಸ್ಥಳೀಯರಿಗೂ ಈ ಹೆಲ್ಪ್‌ಲೈನ್‌ ನಂಬರ್‌ ನೀಡಿ ಸಂಪರ್ಕಿಸಲು ಹೇಳಲಾಯಿತು. ಅವರ ಅನುಭವವು ನಮ್ಮಲ್ಲಿ ನಿರಾಶೆಯನ್ನು ಮೂಡಿಸಿತು.

ಉತ್ತರಹಳ್ಳಿಯ ಆಸುಪಾಸಿನಲ್ಲೇ ವಾಸಿಸುವ ಬರಹಗಾರ, ಸಾಮಾಜಿಕ ಚಿಂತಕ ಶ್ರೀಪಾದ್‌ ಅವರ ಅನುಭವವು ಕೆಳಕಂಡಂತಿದೆ.

ದಿನಾಂಕ : 29.3.2020 ರಂದು 155214 ಸಹಾಯವಾಣಿಗೆ ಕರೆ ಮಾಡಿ ಉತ್ತರಹಳ್ಳಿಯ ಅಂಬೇಡ್ಕರ್ ನಗರದ ಸಾವಿತ್ರಿ ಬಾ ಫುಲೆ ಕಾಲನಿ ಸ್ಲಂಗಳಲ್ಲಿ ವಾಸಿಸುತ್ತಿರುವ ಕುಟುಂಬಗಳು ಅನಾಥರಾಗಿವೆ ಮತ್ತು ಅವರಿಗೆ ತುರ್ತಾಗಿ ಆಹಾರದ ಪೂರೈಕೆ ಮಾಡಬೇಕು ಎಂದು ಮನವಿ ಸಲ್ಲಿಸಿಲಾಯಿತು. ಆ ಸಹಾಯವಾಣಿಯವರೂ ನಮ್ಮ ಕೋರಿಕೆಗೆ ಪ್ರತಿಕ್ರಿಯಿಸಿ ಸಂಜೆಯ ಒಳಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದರು. ಆದರೆ ರಾತ್ರಿಯವರೆಗೂ ಯಾವುದೇ ಸಹಾಯ ದೊರಕಲಿಲ್ಲ.

ನಂತರ ಪರಿಚಯದ ಸರಕಾರಿ ಅಧಿಕಾರಿಯೊಬ್ಬರಿಗೆ ಈ ಕುರಿತು ಗಮನ ಸೆಳೆಯಲಾಯಿತು. ಅವರೂ ಸಹ ಭರವಸೆ ನೀಡಿದರು.

ಇದನ್ನೂ ಓದಿ: ಊರಿಗೆ ಬಂದ ವಲಸೆ ಕಾರ್ಮಿಕರಿಗೆ ಅಲ್ಲೂ ಅವಮಾನ

ದಿನಾಂಕ 30.3.2020ರಂದು ಮರಳಿ ವಿಚಾರಿಸಲಾಗಿ ಇಲ್ಲಿಯವರೆಗೂ (ಸಂಜೆ 6.30) ಯಾವುದೇ ಬಗೆಯ ಪರಿಹಾರ ದೊರಕಿಲ್ಲ. ಅಲ್ಲಿನ ಕುಟುಂಬಗಳು ಆಹಾರ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ. ದಾನಿಗಳ ಮೂಲಕ ತಾತ್ಕಾಲಿಕವಾಗಿ ಸಣ್ಣ ಪ್ರಮಾಣದ ದಿನಸಿ ವಸ್ತುಗಳನ್ನು ಕೊಡಲಾಗಿದೆ. ಆದರೆ ಅದು ಸಾಕಾಗುವುದಿಲ್ಲ.

155214 ಸಹಾಯವಾಣಿ ಹೊಣೆ ಹೊತ್ತ ಬಿಬಿಎಂಪಿ ತುರ್ತು ಪರಿಸ್ಥಿತಿಯಂತಹ ಈ ದಿನಗಳಲ್ಲಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ ಆ ರೀತಿ ಮಾಡುತ್ತಿಲ್ಲ. ಇವರನ್ನು ಫಾಲೋ ಅಪ್ ಅಪ್ ಮಾಡುವುದೆ ಒಂದು ಕೆಲಸವಾದರೆ ಅದು ಕಷ್ಟದ ಕೆಲಸ.

ಸಾರ್ವಜನಿಕವಾಗಿ ಹೊಣೆಗಾರಿಕೆಯನ್ನು ನಿಭಾಯಿಸಲು ಕರಾರುವಕ್ಕಾದ ಕಾರ್ಯಯೋಜನೆ ಮತ್ತು ಪ್ರತಿಕ್ರಿಯೆ ತುಂಬಾ ಅವಶ್ಯಕ. ಆದರೆ ಈ ಉತ್ತರ ಹಳ್ಳಿ ಸ್ಲಂ ಗಳ ವಿಷಯದಲ್ಲಿ ಮೇಲೆ ತಿಳಿಸಿದ ಸಹಾಯವಾಣಿಯಿಂದ ತುರ್ತು ಸಹಾಯ ದೊರಕಿಲ್ಲ.

ಇದನ್ನೂ ಓದಿ: ಕೊರೊನಾ ವೈರಸ್‌ ವಿರುದ್ಧ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರ್ಕಾರ

ಇನ್ನೊಂದು ಉದಾಹರಣೆ ಈ ರೀತಿ ಇದೆ. ಕೆ.ಆರ್‌.ಪುರದಾಚೆಗಿನ ನಲ್ಲಿ ಸುಮಾರು 150ರಿಂದ 200 ಜನ ವಲಸೆ ಕಾರ್ಮಿಕರಿದ್ದು ನಾಳೆ ಅವರಲ್ಲಿರುವ ಆಹಾರ ಪದಾರ್ಥಗಳು ಕೊನೆಯಾಗಲಿದ್ದು ಮುಂದೇನು ಎಂದು ಚಿಂತಾಕ್ರಾಂತರಾಗಿದ್ದರು. ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ಮೂಲಕ ಅವರು ನಾನುಗೌರಿ.ಕಾಂಅನ್ನು ಸಂಪರ್ಕಿಸಿದರು. ಅವರಿಗೆ ಸದರಿ ಹೆಲ್ಪ್‌ಲೈನ್‌ ನಂಬರ್‌ಅನ್ನು ಸಂಪರ್ಕಿಸಲು ತಿಳಿಸಲಾಯಿತು. ಸುಮಾರು 20 ಸಾರಿ ಕರೆ ಮಾಡಿದರೂ ಆ ನಂಬರ್‌ಅನ್ನು ಯಾರೂ ಸ್ವೀಕರಿಸಲಿಲ್ಲವೆಂದು ಆ ವಲಸೆ ಕಾರ್ಮಿಕರಲ್ಲೊಬ್ಬರಾದ ಕಿಶನ್‌ (ಹೆಸರು ಬದಲಿಸಲಾಗಿದೆ) ತಿಳಿಸಿದರು.

ನಾನುಗೌರಿ.ಕಾಂ ಕಳಿಸಿದ ಪೋಸ್ಟರ್‌ಅನ್ನು ಷೇರ್‌ ಮಾಡಿದ ವಿಜಯ್‌ಕುಮಾರ್‌ ಸೀತಪ್ಪ ಅವರ ಸ್ನೇಹಿತರೊಬ್ಬರು ಸದರಿ ನಂಬರ್‌ಗೆ ಕರೆ ಮಾಡಿದರೆ ಅವರಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂತೆಂದು ತಿಳಿಸಿದ್ದಾರೆ.

ಹೀಗಾದಲ್ಲಿ ವಲಸೆ ಕಾರ್ಮಿಕರ ಗತಿಯೇನು? ನೂರಾರು ಕಿ.ಮೀ ನಡೆದಾದರೂ ಸರಿ, ನಮ್ಮೂರಿನಲ್ಲಿ ಇದ್ದರೆ ಕ್ಷೇಮ ಎಂದು ಅವರು ಹೊರಡುವುದು ಸಹಜ ತಾನೇ? ಈ ಪ್ರಶ್ನೆಗಳಿಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಅಧಿಕಾರಿಗಳು ನೆರವು ನೀಡುವುದಾದಲ್ಲಿ ಮೇಲಿನ ಎಲ್ಲಾ ವಿವರಗಳನ್ನೂ (ಹೆಸರುಗಳು, ಫೋನ್‌ ನಂಬರ್‌ ಸಮೇತ) ನೀಡುತ್ತೇವೆ ಮತ್ತು ಸರ್ಕಾರದ ಸಕಾರಾತ್ಮಕ ಕೆಲಸವನ್ನು ಮತ್ತಷ್ಟು ಜನರಿಗೆ ತಿಳಿಸುವ ಕೆಲಸವನ್ನು ಮಾಡುತ್ತೇವೆ.

ಸಂಬಂಧಿಸಿದ ಅಧಿಕಾರಿಯನ್ನು ಉತ್ತರಹಳ್ಳಿಯಲ್ಲಿ ಸಂಪರ್ಕ ಮಾಡಿದರೂ ಪರಿಹಾರ ಸಿಗದೇ ಇದ್ದುದರಿಂದ ಇದನ್ನು ವರದಿ ಮಾಡುವ ಅಗತ್ಯವಿದೆಯೆಂದು ಭಾವಿಸಿ ಈ ವರದಿ ಬರೆಯಲಾಗಿದೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಉದ್ದೇಶದಿಂದ ಈ ವರದಿಯನ್ನು ಷೇರ್‌ ಮಾಡಬೇಕೆಂದು ಕೋರುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...