Homeಮುಖಪುಟಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

ಲಿಂಗಾಯತ ಸಸ್ಯಹಾರಿ ಧರ್ಮವೇ?-ಬಾಲಾಜಿ ಕುಂಬಾರ

- Advertisement -
- Advertisement -

  • ಬಾಲಾಜಿ ಕುಂಬಾರ,ಬೀದರ
  • ರಾಜ್ಯದ ಶಾಲಾ ಕಾಲೇಜಿನ ಬಹುತೇಕ ಹಾಸ್ಟೇಲ್ ಮಕ್ಕಳಿಗೆ, ಗರ್ಭಿಣಿಯರಿಗೆ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ಜೊತೆಗೆ ಇತರೆ ಪೌಷ್ಟಿಕಾಂಶದ ಕಾಳುಗಳನ್ನೂ ಕೊಡುವುದು ಮೊದಲಿನಿಂದಲೂ ಜಾರಿಯಲ್ಲಿದೆ. ಆದರೆ ಅದನ್ನು ಯಾವತ್ತೂ ಯಾರೂ ವಿರೋಧ ಮಾಡಲಿಲ್ಲ, ಆದರೆ ಈಗ ಸರ್ಕಾರ ಹೈದರಾಬಾದ್‌ ಕರ್ನಾಟಕ ಭಾಗದ ಶಾಲಾ ಮಕ್ಕಳಿಗೆ (ವಾರದಲ್ಲಿ ಮೂರು ದಿನ) ಮೊಟ್ಟೆ ಕೊಡಬೇಕೆಂದು ಜಾರಿಗೊಳಿಸಿದ “ಮೊಟ್ಟೆ ಯೋಜನೆ” ಮೇಲೆ ಕೆಲವು ಸಂಘಟನೆ, ಮಠಾಧೀಶರ ಕಣ್ಣು ಬಿದ್ದಿದೆ. ಮೊಟ್ಟೆ ವಿರುದ್ಧ ಇಷ್ಟೊಂದು ವ್ಯಾಪಕವಾಗಿ ಮೊಟ್ಟೆ ಚಳವಳಿ ಆರಂಭಿಸಲು ಉದ್ದೇಶ ಏನಿರಬಹುದು ಅರ್ಥವಾಗುತ್ತಿಲ್ಲ. ಇದು ಅಷ್ಟೇ ವಿಚಿತ್ರವೂ….ಹಾಸ್ಯಾಸ್ಪದಕ್ಕೂ ಕಾರಣವಾಗಿದೆ.

    ಹೌದು, ನಾನು ಮೊಟ್ಟೆ ತಿನ್ನುತ್ತೇನೆ, ಆದರೆ ನಾನು ಇಲ್ಲಿಯವರೆಗೆ ನಾನು ಯಾವುದೇ, ಮಾಂಸ ಸೇವಿಸಲಿಲ್ಲ (ನಮ್ಮ ಕುಟುಂಬವೂ ಸಸ್ಯಹಾರಿ). ಆದರೆ ನಾನು ಮಾಂಸಹಾರಿಗಳನ್ನು ಎಂದಿಗೂ ತಿರಸ್ಕಾರದಿಂದ ನೋಡಲಿಲ್ಲ. ಅವರು ನನ್ನೆದುರಿಗೆ ಕುಳಿತು ಮಾಂಸ ತಿಂದರೂ ನನಗ್ಯಾವ ತೊಂದರೆಯೂ ಆಗಲ್ಲ. ಅವರು ‘ ಮಾಂಸ ತಿನ್ನಿ’ ಎಂದು ನನಗೆ ಒತ್ತಾಯ ಮಾಡಲ್ಲ. ನೀವು ‘ಮಾಂಸ ಬಿಡಿ’ ಎಂದು ನಾನು ಆಗ್ರಹಿಸುವುದಿಲ್ಲ. ಆಹಾರ ಅವರವರ ವೈಯುಕ್ತಿಕ ಹಕ್ಕು, ಆದರೆ ಇದೇ ತಿನ್ನಿ, ಇದು ಬಿಡಿ ಎಂದು ಪ್ರಶ್ನಿಸುವ, ಹೇರುವ, ವಿರೋಧಿಸುವ ಹಕ್ಕು ಯಾರಿಗೂ ಇಲ್ಲ ಎಂದು ನಂಬಿರುವನು ನಾನು.

    ಇದನ್ನೂ ಓದಿ:ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

    ಆಹಾರದ ಕುರಿತು ಕಟ್ಟುಪಾಡು ಹೊರಡಿಸಿದ ಯಾವ ಧರ್ಮಗಳು ವ್ಯಾಪಕವಾಗಿ ಬೆಳೆಯಲು ಸಾಧ್ಯವಿಲ್ಲ. ಲಿಂಗಾಯತ ಕೂಡ ಅಷ್ಟೇ, ಕಳ್ಳರನ್ನು, ಸುಳ್ಳರನ್ನು ವೇಶ್ಯೆಯರನ್ನು, ಹೆಂಡ ಮಾರುವರನ್ನು ಸೇರಿ ಇನ್ನಿತರ ಹಲವರನ್ನು ಲಿಂಗಾಯತರನ್ನಾಗಿಸಿ, ಒಬ್ಬ ಪ್ರಜ್ಞಾವಂತ ಮನುಷ್ಯರಾಗಿ ಬದುಕುವಂತೆ ಕಲಿಸಿಕೊಟ್ಟ ಬಸವಣ್ಣ ಹಾಗೂ ಸಮಕಾಲೀನ ಶರಣರ ಮಹೋನ್ನತ ತತ್ವ ಸಿದ್ಧಾಂತದ ಆಶಯಗಳು ಇಂದು ಮತ್ತೆ ಮುನ್ನೆಲೆಗೆ ಬರಬೇಕಾಗಿದೆ. ಆದರೆ ಅವೆಲ್ಲವೂ ಇಂದು ಜಾತಿಯತೆ ದೃಷ್ಟಿಕೋನದಿಂದ ಅಳೆದು – ತೂಗಿ ಇವ್ರು ಲಿಂಗಾಯತರು ಎಂದು ಹೇಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ದೊಡ್ಡ ದುರಂತ ಅನ್ನಬಹುದು.

    ಮಾಂಸಹಾರಿಗಳು ಕನಿಷ್ಟರು, ಸಸ್ಯಹಾರಿಗಳು ಶ್ರೇಷ್ಠರು ಎಂದು ವಿಂಗಡಿಸುವುದು ಕಂಡರೆ ಇದು ಜಾತಿಯತೆಯ ಭಾಗವೇ ಎಂದೆನಿಸುತ್ತದೆ. ಎಲ್ಲಾ ಲಿಂಗಾಯತರು ಸಸ್ಯಹಾರಿಗಳಲ್ಲ, ಸಸ್ಯಹಾರಿಗಳು ಎಲ್ಲರೂ ಲಿಂಗಾಯತರಲ್ಲ, ಇದರೊಳಗೆ ಮಾಂಸಹಾರಿ ಲಿಂಗಾಯತರೂ ಇದ್ದಾರೆ. ಅಷ್ಟೇ ಯಾಕೆ ಶುದ್ದ ಮಾಂಸಹಾರಿಗಳೂ ಕೂಡ ಬಸವತತ್ವವನ್ನು ಅತಿಯಾಗಿ ಹಚ್ಚಿಕೊಂಡು ಬಸವಾದಿ ಶರಣರನ್ನೇ ಉಸಿರಾಗಿಸಿಕೊಂಡು ಬದುಕುವ ಅದೆಷ್ಟೋ ಕುಟುಂಬಗಳು, ಸಮುದಾಯವೇ ನಮ್ಮಲ್ಲಿದೆ. ಬಹುತೇಕ ಸಸ್ಯಹಾರಿ, ಮಾಂಸಹಾರಿಗಳು ಬಸವಣ್ಣನವರನ್ನು ಬರೀ ಗುರುವಾಗಿ ಸ್ವೀಕರಿಸಿದ್ದಾರೆ ಹೊರತು ಅವರ್ಯಾರು ತತ್ವಕ್ಕೆ ಬದ್ಧರಲ್ಲ. ಒಟ್ಟಿನಲ್ಲಿ ಶರಣರ ಆಶಯಗಳ ವಿರೋಧ ನಡೆ.

    ಇದನ್ನೂ ಓದಿ:‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

    ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಬಾಳೆಹಣ್ಣು ಇದೆ, ಆದರೆ ಕೆಲವರು ಮೊಟ್ಟೆ ತಿನ್ನುವರು ಮನೆಯಲ್ಲಿ ತಿಂದು ಬರಲಿ ಅಂತಾರೆ, ಇನ್ನೂ ಕೆಲವರು ಮೊಟ್ಟೆ ತಿನ್ನವರಿಗೆ ಮೊಟ್ಟೆ ಬದಲು ಹಣ ಕೊಡಿ ಅಂತಾರೆ, ಮೊಟ್ಟೆ ಬಾಳೆಹಣ್ಣು ನೀಡುವುದರಿಂದ ಭೇದಭಾವ , ಅಸಮಾನತೆ ಆಗುತ್ತೆ ಅನ್ನುವರು ಇನ್ನೂ ಒಂದಿಷ್ಟು ಮಂದಿ. ತಮ್ಮ ತಮ್ಮ ಸಮುದಾಯದಲ್ಲೇ ನಾವು ಶ್ರೇಷ್ಠರು ಅವರು ಕನಿಷ್ಟರು ಎಂದು ರಕ್ತಸಂಬಂಧ ಬೆಳೆಸಲು ಹಿಂದೇಟು ಹಾಕುವವರು, ತಳವರ್ಗ ಸಮುದಾಯವರನ್ನು ಇನ್ನೂ ಮನೆಯೊಳಗೆ ಬಿಡದೇ ಮೇಲಿಂದ ರೊಟ್ಟಿ ಕೊಡುವ ಅಸ್ಪೃಶ್ಯತೆಗಿಂತ ಮೊಟ್ಟೆ ಬಾಳೆಹಣ್ಣಿನ ನಡುವಿನ ಅಸಮಾನತೆ ದೊಡ್ಡದೇನಲ್ಲ ಬಿಡಿ.

    ನಾವು ಗಟ್ಟಿಯಾಗಿ ಮಾತನಾಡಬೇಕಾಗಿದ್ದು ಹಸಿವಿನ ಬಗ್ಗೆ, ಕ್ರೂರ ಜಾತಿಯತೆ ಬಗ್ಗೆ, ಅದನ್ನು ಬಿಟ್ಟು ಆಹಾರದ ಬಗ್ಗೆ ಅನಗತ್ಯ ವಿಷಯವಲ್ಲ. ಇದರಿಂದಾಗಿ ಲಿಂಗಾಯತ ತತ್ವವನ್ನು ಒಪ್ಪಿಕೊಂಡು, ಅಪ್ಪಿಕೊಂಡು ಸಾಧ್ಯವಾದಷ್ಟು ಮೈಗೂಡಿಸಿಕೊಂಡು ಬದುಕುವ ಮಾಂಸಪ್ರಿಯರಿಗೆ ಗೊಂದಲ ಸೃಷ್ಟಿಸಿದೆ. ಶರಣತತ್ವ ಅಂದ್ರೆ ಶುದ್ದ ಸಸ್ಯಹಾರಿ ಧರ್ಮವೇ? ಎಂಬುದು ಈಗ ಯಕ್ಷ ಪ್ರಶ್ನೆಯಾಗಿಯೇ ಕಾಡುತ್ತಿದೆ. ಲಿಂಗಾಯತ ಸಸ್ಯಹಾರಿ ಧರ್ಮವೇ ಆದರೆ ಈಗಾಗಲೇ ಲಿಂಗಾಯತದಲ್ಲಿ ಇರುವ ಮಾಂಸಹಾರಿ ಉಪಪಂಗಡದವರು ಎಲ್ಲಿ ಹೋಗಬೇಕು? ಆಹಾರದ ಕಟ್ಟುಪಾಡಿನ ಕಾರಣಕ್ಕೇ ಅವರನ್ನು ಲಿಂಗಾಯತರೆಂದು ಪರಿಗಣಿಸಬಾರದೇ?

    ಶರಣರ ಯಾರನ್ನೂ ಕೀಳಾಗಿ, ಕನಿಷ್ಟರು, ಶ್ರೇಷ್ಠರು ಭೇದಭಾವ ಮಾಡಲಿಲ್ಲ. ‘ಎನಗಿಂತ ಕಿರಿಯರಿಲ್ಲ’ ಎಂಬ ಭಾವ ಅದೆಷ್ಟು ಸರಳ..ಸುಂದರ…ಅನನ್ಯ ಅರ್ಥೈಸುತ್ತದೆ. ಯೋಚಿಸೋಣ..!!

    ಇದನ್ನೂ ಓದಿ:ಸಸ್ಯಹಾರಿಯಾಗಿದ್ದ ನಾನು ಬಾಡೂಟಕ್ಕೆ ತೆರೆದುಕೊಂಡದ್ದು ಹೀಗೆ…

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

    ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

    ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

    ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

    ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

    ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

    ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

    ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

    ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

    ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

    ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

    ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

    ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

    ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

    ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

    ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

    ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

    ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

    ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

    ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...