Homeಮುಖಪುಟಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? - ಡಿ.ಉಮಾಪತಿ

ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

ಮೋದಿಯವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಈಗಲೇ ಹೇಳಲು ಬಾರದು.

- Advertisement -
- Advertisement -

ಜಾರ್ಖಂಡ್‌ನಲ್ಲಿ ಬಿಜೆಪಿ ಸೋತಿದೆ. ಹಿಂದೂ ಮುಸ್ಲಿಮ್ ಧ್ರುವೀಕರಣ ಫಲ ನೀಡಿಲ್ಲ. ಬಹುಮತ ಸಿಗದಿದ್ದರೂ ಇತರೆ ಪಕ್ಷಗಳನ್ನು ಒಡೆದು, ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡಿ ಸರ್ಕಾರ ರಚಿಸುವ ತಂತ್ರಕ್ಕೂ ಸೋಲಾಗಿದೆ. ಈ ಜನವಿರೋಧಿ ಹುನ್ನಾರಗಳು ಸದಾಕಾಲ ರಾಜಕೀಯ ಲಾಭ ನೀಡುವುದಿಲ್ಲ ಎಂಬ ಸತ್ಯವನ್ನು ಜಾರ್ಖಂಡ್ ಚುನಾವಣಾ ಫಲಿತಾಂಶಗಳು ಮರು ದೃಢೀಕರಿಸಿವೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಡೆಸಿದ ಸುದೀರ್ಘ ಹೋರಾಟದ ನಂತರ ಜಾರ್ಖಂಡ್ ಪ್ರತ್ಯೇಕ ಸ್ವತಂತ್ರ ರಾಜ್ಯವಾಯಿತು. ಇಲ್ಲಿನ ಆದಿವಾಸಿಗಳ ಮತಗಳು, ಒಟ್ಟು ಮತಗಳ ಮೂರನೆಯ ಒಂದಕ್ಕಿಂತ ಕಡಿಮೆ ಹೌದು. ಆದರೂ ಭಾವನಾತ್ಮಕವಾಗಿ ಜಾರ್ಖಂಡ್ ಆದಿವಾಸಿ ಸೀಮೆಯೆಂದೇ ಹೆಸರಾದದ್ದು.

ಬಿಜೆಪಿಯ ಸರ್ವಶಕ್ತ ಜೋಡಿಯಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ 2014ರಲ್ಲಿ ಜಾರ್ಖಂಡ್ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಆರಿಸಿದ್ದು ಆದಿವಾಸಿ ಅಲ್ಲದ ರಘುಬರದಾಸ್ ಅವರನ್ನು. ದಾಸ್ ಐದು ವರ್ಷಗಳ ಕಾಲ ನಡೆಸಿದ ಸರ್ಕಾರದ ಸ್ವರೂಪ ಆದಿವಾಸಿ ವಿರೋಧಿ ಎನಿಸಿಕೊಂಡಿತ್ತು. ಭೂಸ್ವಾಧೀನ ಕಾಯಿದೆಗೆ ದಾಸ್ ಸರ್ಕಾರ ತಂದಿದ್ದ ತಿದ್ದುಪಡಿ ಮತ್ತು ಆದಿವಾಸಿ ಸೀಮೆಯನ್ನು ವ್ಯಾಪಿಸಿದ ಸ್ವಯಮಾಡಳಿತದ ‘ಪತ್ತಲ್ ಗಡಿ’ ಆಂದೋಲನ ಹಾಗೂ ಮತಾಂತರ ತಡೆ ವಿಧೇಯಕ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾದವು. ಕಳೆದ ಎರಡು ವರ್ಷಗಳಲ್ಲಿ ಜಾರ್ಖಂಡ್‌ನಲ್ಲಿ ಗುಂಪು ಬೀದಿಬೀದಿಗಳಲ್ಲಿ ಬಡಿದು ಜಜ್ಜಿ ಕೊಂದ ಗುಂಪು ಹತ್ಯೆ ಪ್ರಕರಣಗಳ ಸಂಖ್ಯೆ 20. ಹತ್ಯೆಗೆ ಈಡಾದವರ ಪೈಕಿ 11 ಮಂದಿ ಮುಸಲ್ಮಾನರಾಗಿದ್ದರು.

ಸ್ವಾಭಾವಿಕವಾಗಿಯೇ ರಘುಬರದಾಸ್ ಅವರು ಆದಿವಾಸಿಗಳ ವಿಶ್ವಾಸ ಕಳೆದುಕೊಂಡರು. ಬಿಜೆಪಿಯಿಂದ ದೂರ ಸರಿದು ಜಾರ್ಖಂಡ್ ಮುಕ್ತಿ ಮೋರ್ಚಾದ ಜೊತೆ ಕೈಕಲೆಸಿದರು.

2017ರಲ್ಲಿ ಅಧಿಕಾರ ಗಳಿಕೆಯಲ್ಲಿ ಯಶಸ್ಸಿನ ಶಿಖರ ಮುಟ್ಟಿದ್ದ ಬಿಜೆಪಿ ದೇಶದ ಶೇ.71ರಷ್ಟು ಭೂ ಭಾಗವನ್ನು ಆಳತೊಡಗಿತ್ತು. ಇದೀಗ ಜಾರ್ಖಂಡ್ ಸೋಲಿನ ನಂತರ ಈ ಪ್ರಮಾಣ ಶೇ.35ಕ್ಕೆ ಕುಸಿದಿದೆ. ಜನಸಂಖ್ಯೆಯ ಲೆಕ್ಕ ಹಿಡಿದು ಹೇಳುವುದಾದರೆ ಈ ಪ್ರಮಾಣ ಶೇ.69ರಿಂದ ಶೇ.43ಕ್ಕೆ ತಗ್ಗಿದೆ.

2019 ಬಿಜೆಪಿಯ ಪಾಲಿಗೆ ಗೆಲುವು ಮತ್ತು ಸೋಲಿನ ಸಂಗಮವಾಗಿತ್ತು. ಲೋಕಸಭಾ ಚುನಾವಣೆಗಳಲ್ಲಿ 303 ಸೀಟುಗಳು ಮತ್ತು ಶೇ.37ರಷ್ಟು ವೋಟುಗಳ ಧಾರಾಳ ಬಹುಮತ ಗಳಿಸಿತು. ಆದರೆ ಈ ಆತ್ಮವಿಶ್ವಾಸದ ಗೆಲುವಿನ ಬೆನ್ನಿನಲ್ಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಕೈಬಿಟ್ಟಿವೆ. ಹರಿಯಾಣದಲ್ಲಿ ಬಹುಮತ ದೊರೆಯಲಿಲ್ಲ.

ಮಹಾರಾಷ್ಟ್ರದಲ್ಲಿ ಕೈಗೆ ಬಂದ ತುತ್ತನ್ನು ಬಾಯಿಗೆ ಇರಿಸಿಕೊಳ್ಳುವಲ್ಲಿ ತಾನು ಎದುರಿಸಿದ ವೈಫಲ್ಯ ಮತ್ತು ಜಾರ್ಖಂಡ್‌ದ ನಿರ್ಣಾಯಕ ಸೋಲು ಕೇಸರಿ ಪಕ್ಷದ ವಿರೋಧಿಗಳ ಕೈಗೆ ಬಡಿಗೆ ನೀಡಿದೆ. ಬಿಜೆಪಿ ಇಳಿಜಾರಿನ ಹಾದಿ ಹಿಡಿದಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ದೇಶಾದ್ಯಂತ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧ ಕೂಡ ಈ ಸಂದೇಹದ ಸಾಲು ಸೇರಿದೆ.

ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆಸಲಾದ ಲೋಕನೀತಿ- ಸಿ.ಎಸ್.ಡಿ.ಎಸ್ ಸಮೀಕ್ಷೆಯ ಪ್ರಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಭಾವ ತಗ್ಗಿದೆ. ಆದರೆ ಕೇವಲ ಇಷ್ಟು ಮಾತ್ರದಿಂದಲೇ ಅವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಹೇಳಲು ಬರುವುದಿಲ್ಲ ಎನ್ನುತ್ತಾರೆ ಈ ಸಮೀಕ್ಷೆ ನಡೆಸಿರುವ ಸಿ.ಎಸ್.ಡಿ.ಎಸ್.ನ ಸಂಜಯಕುಮಾರ್. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದರೂ, ಆ ನಂತರ ಜರುಗಿದ ಲೋಕಸಭಾ ಚುನಾವಣೆಗಳಲ್ಲಿ ಈ ಮೂರೂ ರಾಜ್ಯಗಳ 65 ಸೀಟುಗಳ ಪೈಕಿ 62ನ್ನು ಬಿಜೆಪಿ ಗೆದ್ದುಕೊಂಡ ಕುರಿತು ಕುಮಾರ್ ಗಮನ ಸೆಳೆದಿದ್ದಾರೆ.

ಸದ್ಯಕ್ಕೆ ಜಾರ್ಖಂಡ್ ರಾಜ್ಯಕ್ಕೆ ಸೀಮಿತವಾಗಿರುವ ಈ ಕುಸಿತ ಮುಂಬರುವ ದಿನಗಳಲ್ಲಿ ವಿಶೇಷವಾಗಿ ಪೌರತ್ವ ಕಾಯಿದೆ ತಿದ್ದುಪಡಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಆಚೆಗೂ ಹಬ್ಬಲಿದೆಯೇ ಅಥವಾ ಕೇಂದ್ರ ಸರ್ಕಾರ ಅದನ್ನು ತಡೆಹಿಡಿಯುವುದೇ ಎಂಬುದನ್ನು ಕಾದು ನೋಡಬೇಕಿದೆ ಎಂಬ ಅಡ್ಡ ಗೀಟನ್ನು ಕುಮಾರ್ ಎಳೆದಿದ್ದಾರೆ.

2018ರಿಂದ ಬಿಜೆಪಿ ಹಲವು ಪ್ರಮುಖ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಏಳು ರಾಜ್ಯಗಳಲ್ಲಿ (ಅರುಣಾಚಲ ಪ್ರದೇಶ, ತ್ರಿಪುರ, ಉತ್ತರಪ್ರದೇಶ, ಹಿಮಾಚಲ, ಉತ್ತರಾಖಂಡ, ಗುಜರಾತ್ ಹಾಗೂ ಕರ್ನಾಟಕ) ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ. ಒಂಬತ್ತು ರಾಜ್ಯಗಳಲ್ಲಿ ಮಿತ್ರಪಕ್ಷಗಳ ನೆರವಿನೊಂದಿಗೆ ಸರ್ಕಾರಗಳನ್ನು ನಡೆಸಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅತಿಹೆಚ್ಚು ಸೀಟು ಗೆದ್ದ ಪಕ್ಷವಾಗಿ ಹೊರಹೊಮ್ಮಿತ್ತು. ಜಾರ್ಖಂಡ್‌ನಲ್ಲಿ ಸೋತರೂ ಶೇ.33ರಷ್ಟು ಮತಗಳನ್ನು ಗಳಿಸಿತು ಎಂಬುದು ಅವರ ವಾದ. ಮತದಾರರ ಆಯ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಭಿನ್ನ ಭಿನ್ನ ಎಂಬುದು ನಿರ್ವಿವಾದಿತ ಅಂಶ. ರಾಜ್ಯ ಸರ್ಕಾರಗಳ ಮಾತು ಬಂದಾಗ ಮತದಾರರು ಬಿಜೆಪಿಯ ಆಚೆಗೂ ನೋಡಿದ್ದಾರೆ. ಮೋದಿಯವರ ವೈಫಲ್ಯ ಇಲ್ಲಿ ಎದ್ದು ಕಂಡಿದೆ.

2020ರ ಅರಂಭದಲ್ಲೇ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಮತ್ತು ಅಂತ್ಯದಲ್ಲಿ ಜರುಗುವ ಬಿಹಾರ ವಿಧಾನಸಭಾ ಚುನಾವಣೆಗಳು ಮೋದಿಯವರ ಜನಪ್ರಿಯತೆಯನ್ನು ಮತ್ತಷ್ಟು ಪರೀಕ್ಷಿಸಲಿವೆ. 2021ರಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ವಿಧಾನಸಭೆಗಳಿಗೆ ಚುನಾವಣೆ ಜರುಗಲಿದೆ. ಈ ಎರಡೂ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯಿದೆ ಹುಟ್ಟಿಸಿರುವ ಭೂಕಂಪದ ಬಹುಮುಖ್ಯ ಕಂಪನ ಕೇಂದ್ರಗಳು. ಹೀಗಾಗಿ ಈ ರಾಜ್ಯಗಳು ಮೋದಿಯವರ ಕೈಹಿಡಿಯುವುವೇ ಇಲ್ಲವೇ ಕೆಡವಲಿವೆಯೇ ಎಂಬುದು ಕಾದು ನೋಡಬೇಕಿರುವ ಅಗ್ನಿಪರೀಕ್ಷೆ.

ಈ ನಡುವೆ ಮಣ್ಣುಪಾಲಾಗಿದ್ದ ಕಾಂಗ್ರೆಸ್ ಪಕ್ಷ ಚೇತರಿಕೆಯ ಸೂಚನೆಗಳನ್ನು ತೋರತೊಡಗಿದೆ. ಕಾಂಗ್ರೆಸ್ಸಿನ ನಿಜವಾದ ಶಕ್ತಿಯ ಅಂದಾಜು ಅದರ ಟೀಕಾಕಾರರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಇದ್ದಂತಿದೆ. ಸಂಘ ಪರಿವಾರ ಕಾಂಗ್ರೆಸ್ಸಿನ ಮೇಲೆ ದಶದಿಕ್ಕುಗಳಿಂದ ನಡೆಸುತ್ತಿರುವ ದಾಳಿಯೇ ಈ ಮಾತಿಗೆ ಸಾಕ್ಷಿ. ಕಾಂಗ್ರೆಸ್ ಪಕ್ಷದ ದಿನಗಳು ಮುಗಿದುಹೋದವೆಂದು ತಾನು ಹಗಲಿರುಳು ಚೀರಿ ಹೇಳುತ್ತಿದೆ. ಮುಗಿದುಹೋಗಿದ್ದೇ ನಿಜವಾಗಿದ್ದರೆ ಆ ಮಾತನ್ನು ಹಗಲಿರುಳು ಚೀರಿ ಹೇಳುವ ಅಗತ್ಯ ಇರಲಿಲ್ಲ. ಕಾಂಗ್ರೆಸ್ಸಿಗೆ ತನ್ನಲ್ಲೇ ತನಗೆ ನಂಬಿಕೆ ಕಳೆದುಹೋಗಿದ್ದರೂ, ಮತದಾರರಲ್ಲಿ ಈ ನಂಬಿಕೆಯ ಬೇರು ಸಂಪೂರ್ಣವಾಗಿ ಅಳಿದಿಲ್ಲ ಎಂಬ ಸುಳಿವನ್ನು ಅರಿಯುವಷ್ಟು ಜಾಣತನ ಬಿಜೆಪಿಗೆ ಇದ್ದೇ ಇದೆ. ಇತ್ತೀಚಿನ ದಿನಗಳಲ್ಲಿ ತಾನು ಕಳೆದುಕೊಂಡಿರುವ ಮೂರು ಮುಖ್ಯ ರಾಜ್ಯಗಳು ಕಾಂಗ್ರೆಸ್ ಪಾಲಾಗಿವೆ ಮತ್ತು ಉಳಿದೆರಡರ ಅಧಿಕಾರವನ್ನು ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ಹಂಚಿಕೊಂಡಿದೆ ಎಂಬ ಅಂಶಕ್ಕೆ ಬಿಜೆಪಿ ಕುರುಡಾಗುವುದು ಹೇಗೆ ತಾನೇ ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. sir
    once EVEM Stops see BJP will not win in the country, all parties must see that evm must be banned at any cost, They can loose purpsefully Jarkand to get get little confidence on EVM on public

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...