Homeಮುಖಪುಟಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? - ಡಿ.ಉಮಾಪತಿ

ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

ಮೋದಿಯವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಈಗಲೇ ಹೇಳಲು ಬಾರದು.

- Advertisement -
- Advertisement -

ಜಾರ್ಖಂಡ್‌ನಲ್ಲಿ ಬಿಜೆಪಿ ಸೋತಿದೆ. ಹಿಂದೂ ಮುಸ್ಲಿಮ್ ಧ್ರುವೀಕರಣ ಫಲ ನೀಡಿಲ್ಲ. ಬಹುಮತ ಸಿಗದಿದ್ದರೂ ಇತರೆ ಪಕ್ಷಗಳನ್ನು ಒಡೆದು, ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡಿ ಸರ್ಕಾರ ರಚಿಸುವ ತಂತ್ರಕ್ಕೂ ಸೋಲಾಗಿದೆ. ಈ ಜನವಿರೋಧಿ ಹುನ್ನಾರಗಳು ಸದಾಕಾಲ ರಾಜಕೀಯ ಲಾಭ ನೀಡುವುದಿಲ್ಲ ಎಂಬ ಸತ್ಯವನ್ನು ಜಾರ್ಖಂಡ್ ಚುನಾವಣಾ ಫಲಿತಾಂಶಗಳು ಮರು ದೃಢೀಕರಿಸಿವೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಡೆಸಿದ ಸುದೀರ್ಘ ಹೋರಾಟದ ನಂತರ ಜಾರ್ಖಂಡ್ ಪ್ರತ್ಯೇಕ ಸ್ವತಂತ್ರ ರಾಜ್ಯವಾಯಿತು. ಇಲ್ಲಿನ ಆದಿವಾಸಿಗಳ ಮತಗಳು, ಒಟ್ಟು ಮತಗಳ ಮೂರನೆಯ ಒಂದಕ್ಕಿಂತ ಕಡಿಮೆ ಹೌದು. ಆದರೂ ಭಾವನಾತ್ಮಕವಾಗಿ ಜಾರ್ಖಂಡ್ ಆದಿವಾಸಿ ಸೀಮೆಯೆಂದೇ ಹೆಸರಾದದ್ದು.

ಬಿಜೆಪಿಯ ಸರ್ವಶಕ್ತ ಜೋಡಿಯಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ 2014ರಲ್ಲಿ ಜಾರ್ಖಂಡ್ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಆರಿಸಿದ್ದು ಆದಿವಾಸಿ ಅಲ್ಲದ ರಘುಬರದಾಸ್ ಅವರನ್ನು. ದಾಸ್ ಐದು ವರ್ಷಗಳ ಕಾಲ ನಡೆಸಿದ ಸರ್ಕಾರದ ಸ್ವರೂಪ ಆದಿವಾಸಿ ವಿರೋಧಿ ಎನಿಸಿಕೊಂಡಿತ್ತು. ಭೂಸ್ವಾಧೀನ ಕಾಯಿದೆಗೆ ದಾಸ್ ಸರ್ಕಾರ ತಂದಿದ್ದ ತಿದ್ದುಪಡಿ ಮತ್ತು ಆದಿವಾಸಿ ಸೀಮೆಯನ್ನು ವ್ಯಾಪಿಸಿದ ಸ್ವಯಮಾಡಳಿತದ ‘ಪತ್ತಲ್ ಗಡಿ’ ಆಂದೋಲನ ಹಾಗೂ ಮತಾಂತರ ತಡೆ ವಿಧೇಯಕ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾದವು. ಕಳೆದ ಎರಡು ವರ್ಷಗಳಲ್ಲಿ ಜಾರ್ಖಂಡ್‌ನಲ್ಲಿ ಗುಂಪು ಬೀದಿಬೀದಿಗಳಲ್ಲಿ ಬಡಿದು ಜಜ್ಜಿ ಕೊಂದ ಗುಂಪು ಹತ್ಯೆ ಪ್ರಕರಣಗಳ ಸಂಖ್ಯೆ 20. ಹತ್ಯೆಗೆ ಈಡಾದವರ ಪೈಕಿ 11 ಮಂದಿ ಮುಸಲ್ಮಾನರಾಗಿದ್ದರು.

ಸ್ವಾಭಾವಿಕವಾಗಿಯೇ ರಘುಬರದಾಸ್ ಅವರು ಆದಿವಾಸಿಗಳ ವಿಶ್ವಾಸ ಕಳೆದುಕೊಂಡರು. ಬಿಜೆಪಿಯಿಂದ ದೂರ ಸರಿದು ಜಾರ್ಖಂಡ್ ಮುಕ್ತಿ ಮೋರ್ಚಾದ ಜೊತೆ ಕೈಕಲೆಸಿದರು.

2017ರಲ್ಲಿ ಅಧಿಕಾರ ಗಳಿಕೆಯಲ್ಲಿ ಯಶಸ್ಸಿನ ಶಿಖರ ಮುಟ್ಟಿದ್ದ ಬಿಜೆಪಿ ದೇಶದ ಶೇ.71ರಷ್ಟು ಭೂ ಭಾಗವನ್ನು ಆಳತೊಡಗಿತ್ತು. ಇದೀಗ ಜಾರ್ಖಂಡ್ ಸೋಲಿನ ನಂತರ ಈ ಪ್ರಮಾಣ ಶೇ.35ಕ್ಕೆ ಕುಸಿದಿದೆ. ಜನಸಂಖ್ಯೆಯ ಲೆಕ್ಕ ಹಿಡಿದು ಹೇಳುವುದಾದರೆ ಈ ಪ್ರಮಾಣ ಶೇ.69ರಿಂದ ಶೇ.43ಕ್ಕೆ ತಗ್ಗಿದೆ.

2019 ಬಿಜೆಪಿಯ ಪಾಲಿಗೆ ಗೆಲುವು ಮತ್ತು ಸೋಲಿನ ಸಂಗಮವಾಗಿತ್ತು. ಲೋಕಸಭಾ ಚುನಾವಣೆಗಳಲ್ಲಿ 303 ಸೀಟುಗಳು ಮತ್ತು ಶೇ.37ರಷ್ಟು ವೋಟುಗಳ ಧಾರಾಳ ಬಹುಮತ ಗಳಿಸಿತು. ಆದರೆ ಈ ಆತ್ಮವಿಶ್ವಾಸದ ಗೆಲುವಿನ ಬೆನ್ನಿನಲ್ಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಕೈಬಿಟ್ಟಿವೆ. ಹರಿಯಾಣದಲ್ಲಿ ಬಹುಮತ ದೊರೆಯಲಿಲ್ಲ.

ಮಹಾರಾಷ್ಟ್ರದಲ್ಲಿ ಕೈಗೆ ಬಂದ ತುತ್ತನ್ನು ಬಾಯಿಗೆ ಇರಿಸಿಕೊಳ್ಳುವಲ್ಲಿ ತಾನು ಎದುರಿಸಿದ ವೈಫಲ್ಯ ಮತ್ತು ಜಾರ್ಖಂಡ್‌ದ ನಿರ್ಣಾಯಕ ಸೋಲು ಕೇಸರಿ ಪಕ್ಷದ ವಿರೋಧಿಗಳ ಕೈಗೆ ಬಡಿಗೆ ನೀಡಿದೆ. ಬಿಜೆಪಿ ಇಳಿಜಾರಿನ ಹಾದಿ ಹಿಡಿದಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ದೇಶಾದ್ಯಂತ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧ ಕೂಡ ಈ ಸಂದೇಹದ ಸಾಲು ಸೇರಿದೆ.

ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆಸಲಾದ ಲೋಕನೀತಿ- ಸಿ.ಎಸ್.ಡಿ.ಎಸ್ ಸಮೀಕ್ಷೆಯ ಪ್ರಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಭಾವ ತಗ್ಗಿದೆ. ಆದರೆ ಕೇವಲ ಇಷ್ಟು ಮಾತ್ರದಿಂದಲೇ ಅವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಹೇಳಲು ಬರುವುದಿಲ್ಲ ಎನ್ನುತ್ತಾರೆ ಈ ಸಮೀಕ್ಷೆ ನಡೆಸಿರುವ ಸಿ.ಎಸ್.ಡಿ.ಎಸ್.ನ ಸಂಜಯಕುಮಾರ್. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದರೂ, ಆ ನಂತರ ಜರುಗಿದ ಲೋಕಸಭಾ ಚುನಾವಣೆಗಳಲ್ಲಿ ಈ ಮೂರೂ ರಾಜ್ಯಗಳ 65 ಸೀಟುಗಳ ಪೈಕಿ 62ನ್ನು ಬಿಜೆಪಿ ಗೆದ್ದುಕೊಂಡ ಕುರಿತು ಕುಮಾರ್ ಗಮನ ಸೆಳೆದಿದ್ದಾರೆ.

ಸದ್ಯಕ್ಕೆ ಜಾರ್ಖಂಡ್ ರಾಜ್ಯಕ್ಕೆ ಸೀಮಿತವಾಗಿರುವ ಈ ಕುಸಿತ ಮುಂಬರುವ ದಿನಗಳಲ್ಲಿ ವಿಶೇಷವಾಗಿ ಪೌರತ್ವ ಕಾಯಿದೆ ತಿದ್ದುಪಡಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಆಚೆಗೂ ಹಬ್ಬಲಿದೆಯೇ ಅಥವಾ ಕೇಂದ್ರ ಸರ್ಕಾರ ಅದನ್ನು ತಡೆಹಿಡಿಯುವುದೇ ಎಂಬುದನ್ನು ಕಾದು ನೋಡಬೇಕಿದೆ ಎಂಬ ಅಡ್ಡ ಗೀಟನ್ನು ಕುಮಾರ್ ಎಳೆದಿದ್ದಾರೆ.

2018ರಿಂದ ಬಿಜೆಪಿ ಹಲವು ಪ್ರಮುಖ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಏಳು ರಾಜ್ಯಗಳಲ್ಲಿ (ಅರುಣಾಚಲ ಪ್ರದೇಶ, ತ್ರಿಪುರ, ಉತ್ತರಪ್ರದೇಶ, ಹಿಮಾಚಲ, ಉತ್ತರಾಖಂಡ, ಗುಜರಾತ್ ಹಾಗೂ ಕರ್ನಾಟಕ) ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ. ಒಂಬತ್ತು ರಾಜ್ಯಗಳಲ್ಲಿ ಮಿತ್ರಪಕ್ಷಗಳ ನೆರವಿನೊಂದಿಗೆ ಸರ್ಕಾರಗಳನ್ನು ನಡೆಸಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅತಿಹೆಚ್ಚು ಸೀಟು ಗೆದ್ದ ಪಕ್ಷವಾಗಿ ಹೊರಹೊಮ್ಮಿತ್ತು. ಜಾರ್ಖಂಡ್‌ನಲ್ಲಿ ಸೋತರೂ ಶೇ.33ರಷ್ಟು ಮತಗಳನ್ನು ಗಳಿಸಿತು ಎಂಬುದು ಅವರ ವಾದ. ಮತದಾರರ ಆಯ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಭಿನ್ನ ಭಿನ್ನ ಎಂಬುದು ನಿರ್ವಿವಾದಿತ ಅಂಶ. ರಾಜ್ಯ ಸರ್ಕಾರಗಳ ಮಾತು ಬಂದಾಗ ಮತದಾರರು ಬಿಜೆಪಿಯ ಆಚೆಗೂ ನೋಡಿದ್ದಾರೆ. ಮೋದಿಯವರ ವೈಫಲ್ಯ ಇಲ್ಲಿ ಎದ್ದು ಕಂಡಿದೆ.

2020ರ ಅರಂಭದಲ್ಲೇ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಮತ್ತು ಅಂತ್ಯದಲ್ಲಿ ಜರುಗುವ ಬಿಹಾರ ವಿಧಾನಸಭಾ ಚುನಾವಣೆಗಳು ಮೋದಿಯವರ ಜನಪ್ರಿಯತೆಯನ್ನು ಮತ್ತಷ್ಟು ಪರೀಕ್ಷಿಸಲಿವೆ. 2021ರಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ವಿಧಾನಸಭೆಗಳಿಗೆ ಚುನಾವಣೆ ಜರುಗಲಿದೆ. ಈ ಎರಡೂ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯಿದೆ ಹುಟ್ಟಿಸಿರುವ ಭೂಕಂಪದ ಬಹುಮುಖ್ಯ ಕಂಪನ ಕೇಂದ್ರಗಳು. ಹೀಗಾಗಿ ಈ ರಾಜ್ಯಗಳು ಮೋದಿಯವರ ಕೈಹಿಡಿಯುವುವೇ ಇಲ್ಲವೇ ಕೆಡವಲಿವೆಯೇ ಎಂಬುದು ಕಾದು ನೋಡಬೇಕಿರುವ ಅಗ್ನಿಪರೀಕ್ಷೆ.

ಈ ನಡುವೆ ಮಣ್ಣುಪಾಲಾಗಿದ್ದ ಕಾಂಗ್ರೆಸ್ ಪಕ್ಷ ಚೇತರಿಕೆಯ ಸೂಚನೆಗಳನ್ನು ತೋರತೊಡಗಿದೆ. ಕಾಂಗ್ರೆಸ್ಸಿನ ನಿಜವಾದ ಶಕ್ತಿಯ ಅಂದಾಜು ಅದರ ಟೀಕಾಕಾರರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಇದ್ದಂತಿದೆ. ಸಂಘ ಪರಿವಾರ ಕಾಂಗ್ರೆಸ್ಸಿನ ಮೇಲೆ ದಶದಿಕ್ಕುಗಳಿಂದ ನಡೆಸುತ್ತಿರುವ ದಾಳಿಯೇ ಈ ಮಾತಿಗೆ ಸಾಕ್ಷಿ. ಕಾಂಗ್ರೆಸ್ ಪಕ್ಷದ ದಿನಗಳು ಮುಗಿದುಹೋದವೆಂದು ತಾನು ಹಗಲಿರುಳು ಚೀರಿ ಹೇಳುತ್ತಿದೆ. ಮುಗಿದುಹೋಗಿದ್ದೇ ನಿಜವಾಗಿದ್ದರೆ ಆ ಮಾತನ್ನು ಹಗಲಿರುಳು ಚೀರಿ ಹೇಳುವ ಅಗತ್ಯ ಇರಲಿಲ್ಲ. ಕಾಂಗ್ರೆಸ್ಸಿಗೆ ತನ್ನಲ್ಲೇ ತನಗೆ ನಂಬಿಕೆ ಕಳೆದುಹೋಗಿದ್ದರೂ, ಮತದಾರರಲ್ಲಿ ಈ ನಂಬಿಕೆಯ ಬೇರು ಸಂಪೂರ್ಣವಾಗಿ ಅಳಿದಿಲ್ಲ ಎಂಬ ಸುಳಿವನ್ನು ಅರಿಯುವಷ್ಟು ಜಾಣತನ ಬಿಜೆಪಿಗೆ ಇದ್ದೇ ಇದೆ. ಇತ್ತೀಚಿನ ದಿನಗಳಲ್ಲಿ ತಾನು ಕಳೆದುಕೊಂಡಿರುವ ಮೂರು ಮುಖ್ಯ ರಾಜ್ಯಗಳು ಕಾಂಗ್ರೆಸ್ ಪಾಲಾಗಿವೆ ಮತ್ತು ಉಳಿದೆರಡರ ಅಧಿಕಾರವನ್ನು ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ಹಂಚಿಕೊಂಡಿದೆ ಎಂಬ ಅಂಶಕ್ಕೆ ಬಿಜೆಪಿ ಕುರುಡಾಗುವುದು ಹೇಗೆ ತಾನೇ ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. sir
    once EVEM Stops see BJP will not win in the country, all parties must see that evm must be banned at any cost, They can loose purpsefully Jarkand to get get little confidence on EVM on public

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...