Homeಮುಖಪುಟಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? - ಡಿ.ಉಮಾಪತಿ

ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

ಮೋದಿಯವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಈಗಲೇ ಹೇಳಲು ಬಾರದು.

- Advertisement -
- Advertisement -

ಜಾರ್ಖಂಡ್‌ನಲ್ಲಿ ಬಿಜೆಪಿ ಸೋತಿದೆ. ಹಿಂದೂ ಮುಸ್ಲಿಮ್ ಧ್ರುವೀಕರಣ ಫಲ ನೀಡಿಲ್ಲ. ಬಹುಮತ ಸಿಗದಿದ್ದರೂ ಇತರೆ ಪಕ್ಷಗಳನ್ನು ಒಡೆದು, ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡಿ ಸರ್ಕಾರ ರಚಿಸುವ ತಂತ್ರಕ್ಕೂ ಸೋಲಾಗಿದೆ. ಈ ಜನವಿರೋಧಿ ಹುನ್ನಾರಗಳು ಸದಾಕಾಲ ರಾಜಕೀಯ ಲಾಭ ನೀಡುವುದಿಲ್ಲ ಎಂಬ ಸತ್ಯವನ್ನು ಜಾರ್ಖಂಡ್ ಚುನಾವಣಾ ಫಲಿತಾಂಶಗಳು ಮರು ದೃಢೀಕರಿಸಿವೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಡೆಸಿದ ಸುದೀರ್ಘ ಹೋರಾಟದ ನಂತರ ಜಾರ್ಖಂಡ್ ಪ್ರತ್ಯೇಕ ಸ್ವತಂತ್ರ ರಾಜ್ಯವಾಯಿತು. ಇಲ್ಲಿನ ಆದಿವಾಸಿಗಳ ಮತಗಳು, ಒಟ್ಟು ಮತಗಳ ಮೂರನೆಯ ಒಂದಕ್ಕಿಂತ ಕಡಿಮೆ ಹೌದು. ಆದರೂ ಭಾವನಾತ್ಮಕವಾಗಿ ಜಾರ್ಖಂಡ್ ಆದಿವಾಸಿ ಸೀಮೆಯೆಂದೇ ಹೆಸರಾದದ್ದು.

ಬಿಜೆಪಿಯ ಸರ್ವಶಕ್ತ ಜೋಡಿಯಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ 2014ರಲ್ಲಿ ಜಾರ್ಖಂಡ್ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಆರಿಸಿದ್ದು ಆದಿವಾಸಿ ಅಲ್ಲದ ರಘುಬರದಾಸ್ ಅವರನ್ನು. ದಾಸ್ ಐದು ವರ್ಷಗಳ ಕಾಲ ನಡೆಸಿದ ಸರ್ಕಾರದ ಸ್ವರೂಪ ಆದಿವಾಸಿ ವಿರೋಧಿ ಎನಿಸಿಕೊಂಡಿತ್ತು. ಭೂಸ್ವಾಧೀನ ಕಾಯಿದೆಗೆ ದಾಸ್ ಸರ್ಕಾರ ತಂದಿದ್ದ ತಿದ್ದುಪಡಿ ಮತ್ತು ಆದಿವಾಸಿ ಸೀಮೆಯನ್ನು ವ್ಯಾಪಿಸಿದ ಸ್ವಯಮಾಡಳಿತದ ‘ಪತ್ತಲ್ ಗಡಿ’ ಆಂದೋಲನ ಹಾಗೂ ಮತಾಂತರ ತಡೆ ವಿಧೇಯಕ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾದವು. ಕಳೆದ ಎರಡು ವರ್ಷಗಳಲ್ಲಿ ಜಾರ್ಖಂಡ್‌ನಲ್ಲಿ ಗುಂಪು ಬೀದಿಬೀದಿಗಳಲ್ಲಿ ಬಡಿದು ಜಜ್ಜಿ ಕೊಂದ ಗುಂಪು ಹತ್ಯೆ ಪ್ರಕರಣಗಳ ಸಂಖ್ಯೆ 20. ಹತ್ಯೆಗೆ ಈಡಾದವರ ಪೈಕಿ 11 ಮಂದಿ ಮುಸಲ್ಮಾನರಾಗಿದ್ದರು.

ಸ್ವಾಭಾವಿಕವಾಗಿಯೇ ರಘುಬರದಾಸ್ ಅವರು ಆದಿವಾಸಿಗಳ ವಿಶ್ವಾಸ ಕಳೆದುಕೊಂಡರು. ಬಿಜೆಪಿಯಿಂದ ದೂರ ಸರಿದು ಜಾರ್ಖಂಡ್ ಮುಕ್ತಿ ಮೋರ್ಚಾದ ಜೊತೆ ಕೈಕಲೆಸಿದರು.

2017ರಲ್ಲಿ ಅಧಿಕಾರ ಗಳಿಕೆಯಲ್ಲಿ ಯಶಸ್ಸಿನ ಶಿಖರ ಮುಟ್ಟಿದ್ದ ಬಿಜೆಪಿ ದೇಶದ ಶೇ.71ರಷ್ಟು ಭೂ ಭಾಗವನ್ನು ಆಳತೊಡಗಿತ್ತು. ಇದೀಗ ಜಾರ್ಖಂಡ್ ಸೋಲಿನ ನಂತರ ಈ ಪ್ರಮಾಣ ಶೇ.35ಕ್ಕೆ ಕುಸಿದಿದೆ. ಜನಸಂಖ್ಯೆಯ ಲೆಕ್ಕ ಹಿಡಿದು ಹೇಳುವುದಾದರೆ ಈ ಪ್ರಮಾಣ ಶೇ.69ರಿಂದ ಶೇ.43ಕ್ಕೆ ತಗ್ಗಿದೆ.

2019 ಬಿಜೆಪಿಯ ಪಾಲಿಗೆ ಗೆಲುವು ಮತ್ತು ಸೋಲಿನ ಸಂಗಮವಾಗಿತ್ತು. ಲೋಕಸಭಾ ಚುನಾವಣೆಗಳಲ್ಲಿ 303 ಸೀಟುಗಳು ಮತ್ತು ಶೇ.37ರಷ್ಟು ವೋಟುಗಳ ಧಾರಾಳ ಬಹುಮತ ಗಳಿಸಿತು. ಆದರೆ ಈ ಆತ್ಮವಿಶ್ವಾಸದ ಗೆಲುವಿನ ಬೆನ್ನಿನಲ್ಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಕೈಬಿಟ್ಟಿವೆ. ಹರಿಯಾಣದಲ್ಲಿ ಬಹುಮತ ದೊರೆಯಲಿಲ್ಲ.

ಮಹಾರಾಷ್ಟ್ರದಲ್ಲಿ ಕೈಗೆ ಬಂದ ತುತ್ತನ್ನು ಬಾಯಿಗೆ ಇರಿಸಿಕೊಳ್ಳುವಲ್ಲಿ ತಾನು ಎದುರಿಸಿದ ವೈಫಲ್ಯ ಮತ್ತು ಜಾರ್ಖಂಡ್‌ದ ನಿರ್ಣಾಯಕ ಸೋಲು ಕೇಸರಿ ಪಕ್ಷದ ವಿರೋಧಿಗಳ ಕೈಗೆ ಬಡಿಗೆ ನೀಡಿದೆ. ಬಿಜೆಪಿ ಇಳಿಜಾರಿನ ಹಾದಿ ಹಿಡಿದಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ದೇಶಾದ್ಯಂತ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧ ಕೂಡ ಈ ಸಂದೇಹದ ಸಾಲು ಸೇರಿದೆ.

ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆಸಲಾದ ಲೋಕನೀತಿ- ಸಿ.ಎಸ್.ಡಿ.ಎಸ್ ಸಮೀಕ್ಷೆಯ ಪ್ರಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಭಾವ ತಗ್ಗಿದೆ. ಆದರೆ ಕೇವಲ ಇಷ್ಟು ಮಾತ್ರದಿಂದಲೇ ಅವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಹೇಳಲು ಬರುವುದಿಲ್ಲ ಎನ್ನುತ್ತಾರೆ ಈ ಸಮೀಕ್ಷೆ ನಡೆಸಿರುವ ಸಿ.ಎಸ್.ಡಿ.ಎಸ್.ನ ಸಂಜಯಕುಮಾರ್. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದರೂ, ಆ ನಂತರ ಜರುಗಿದ ಲೋಕಸಭಾ ಚುನಾವಣೆಗಳಲ್ಲಿ ಈ ಮೂರೂ ರಾಜ್ಯಗಳ 65 ಸೀಟುಗಳ ಪೈಕಿ 62ನ್ನು ಬಿಜೆಪಿ ಗೆದ್ದುಕೊಂಡ ಕುರಿತು ಕುಮಾರ್ ಗಮನ ಸೆಳೆದಿದ್ದಾರೆ.

ಸದ್ಯಕ್ಕೆ ಜಾರ್ಖಂಡ್ ರಾಜ್ಯಕ್ಕೆ ಸೀಮಿತವಾಗಿರುವ ಈ ಕುಸಿತ ಮುಂಬರುವ ದಿನಗಳಲ್ಲಿ ವಿಶೇಷವಾಗಿ ಪೌರತ್ವ ಕಾಯಿದೆ ತಿದ್ದುಪಡಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಆಚೆಗೂ ಹಬ್ಬಲಿದೆಯೇ ಅಥವಾ ಕೇಂದ್ರ ಸರ್ಕಾರ ಅದನ್ನು ತಡೆಹಿಡಿಯುವುದೇ ಎಂಬುದನ್ನು ಕಾದು ನೋಡಬೇಕಿದೆ ಎಂಬ ಅಡ್ಡ ಗೀಟನ್ನು ಕುಮಾರ್ ಎಳೆದಿದ್ದಾರೆ.

2018ರಿಂದ ಬಿಜೆಪಿ ಹಲವು ಪ್ರಮುಖ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಏಳು ರಾಜ್ಯಗಳಲ್ಲಿ (ಅರುಣಾಚಲ ಪ್ರದೇಶ, ತ್ರಿಪುರ, ಉತ್ತರಪ್ರದೇಶ, ಹಿಮಾಚಲ, ಉತ್ತರಾಖಂಡ, ಗುಜರಾತ್ ಹಾಗೂ ಕರ್ನಾಟಕ) ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ. ಒಂಬತ್ತು ರಾಜ್ಯಗಳಲ್ಲಿ ಮಿತ್ರಪಕ್ಷಗಳ ನೆರವಿನೊಂದಿಗೆ ಸರ್ಕಾರಗಳನ್ನು ನಡೆಸಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅತಿಹೆಚ್ಚು ಸೀಟು ಗೆದ್ದ ಪಕ್ಷವಾಗಿ ಹೊರಹೊಮ್ಮಿತ್ತು. ಜಾರ್ಖಂಡ್‌ನಲ್ಲಿ ಸೋತರೂ ಶೇ.33ರಷ್ಟು ಮತಗಳನ್ನು ಗಳಿಸಿತು ಎಂಬುದು ಅವರ ವಾದ. ಮತದಾರರ ಆಯ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಭಿನ್ನ ಭಿನ್ನ ಎಂಬುದು ನಿರ್ವಿವಾದಿತ ಅಂಶ. ರಾಜ್ಯ ಸರ್ಕಾರಗಳ ಮಾತು ಬಂದಾಗ ಮತದಾರರು ಬಿಜೆಪಿಯ ಆಚೆಗೂ ನೋಡಿದ್ದಾರೆ. ಮೋದಿಯವರ ವೈಫಲ್ಯ ಇಲ್ಲಿ ಎದ್ದು ಕಂಡಿದೆ.

2020ರ ಅರಂಭದಲ್ಲೇ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಮತ್ತು ಅಂತ್ಯದಲ್ಲಿ ಜರುಗುವ ಬಿಹಾರ ವಿಧಾನಸಭಾ ಚುನಾವಣೆಗಳು ಮೋದಿಯವರ ಜನಪ್ರಿಯತೆಯನ್ನು ಮತ್ತಷ್ಟು ಪರೀಕ್ಷಿಸಲಿವೆ. 2021ರಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ವಿಧಾನಸಭೆಗಳಿಗೆ ಚುನಾವಣೆ ಜರುಗಲಿದೆ. ಈ ಎರಡೂ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯಿದೆ ಹುಟ್ಟಿಸಿರುವ ಭೂಕಂಪದ ಬಹುಮುಖ್ಯ ಕಂಪನ ಕೇಂದ್ರಗಳು. ಹೀಗಾಗಿ ಈ ರಾಜ್ಯಗಳು ಮೋದಿಯವರ ಕೈಹಿಡಿಯುವುವೇ ಇಲ್ಲವೇ ಕೆಡವಲಿವೆಯೇ ಎಂಬುದು ಕಾದು ನೋಡಬೇಕಿರುವ ಅಗ್ನಿಪರೀಕ್ಷೆ.

ಈ ನಡುವೆ ಮಣ್ಣುಪಾಲಾಗಿದ್ದ ಕಾಂಗ್ರೆಸ್ ಪಕ್ಷ ಚೇತರಿಕೆಯ ಸೂಚನೆಗಳನ್ನು ತೋರತೊಡಗಿದೆ. ಕಾಂಗ್ರೆಸ್ಸಿನ ನಿಜವಾದ ಶಕ್ತಿಯ ಅಂದಾಜು ಅದರ ಟೀಕಾಕಾರರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಇದ್ದಂತಿದೆ. ಸಂಘ ಪರಿವಾರ ಕಾಂಗ್ರೆಸ್ಸಿನ ಮೇಲೆ ದಶದಿಕ್ಕುಗಳಿಂದ ನಡೆಸುತ್ತಿರುವ ದಾಳಿಯೇ ಈ ಮಾತಿಗೆ ಸಾಕ್ಷಿ. ಕಾಂಗ್ರೆಸ್ ಪಕ್ಷದ ದಿನಗಳು ಮುಗಿದುಹೋದವೆಂದು ತಾನು ಹಗಲಿರುಳು ಚೀರಿ ಹೇಳುತ್ತಿದೆ. ಮುಗಿದುಹೋಗಿದ್ದೇ ನಿಜವಾಗಿದ್ದರೆ ಆ ಮಾತನ್ನು ಹಗಲಿರುಳು ಚೀರಿ ಹೇಳುವ ಅಗತ್ಯ ಇರಲಿಲ್ಲ. ಕಾಂಗ್ರೆಸ್ಸಿಗೆ ತನ್ನಲ್ಲೇ ತನಗೆ ನಂಬಿಕೆ ಕಳೆದುಹೋಗಿದ್ದರೂ, ಮತದಾರರಲ್ಲಿ ಈ ನಂಬಿಕೆಯ ಬೇರು ಸಂಪೂರ್ಣವಾಗಿ ಅಳಿದಿಲ್ಲ ಎಂಬ ಸುಳಿವನ್ನು ಅರಿಯುವಷ್ಟು ಜಾಣತನ ಬಿಜೆಪಿಗೆ ಇದ್ದೇ ಇದೆ. ಇತ್ತೀಚಿನ ದಿನಗಳಲ್ಲಿ ತಾನು ಕಳೆದುಕೊಂಡಿರುವ ಮೂರು ಮುಖ್ಯ ರಾಜ್ಯಗಳು ಕಾಂಗ್ರೆಸ್ ಪಾಲಾಗಿವೆ ಮತ್ತು ಉಳಿದೆರಡರ ಅಧಿಕಾರವನ್ನು ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ಹಂಚಿಕೊಂಡಿದೆ ಎಂಬ ಅಂಶಕ್ಕೆ ಬಿಜೆಪಿ ಕುರುಡಾಗುವುದು ಹೇಗೆ ತಾನೇ ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. sir
    once EVEM Stops see BJP will not win in the country, all parties must see that evm must be banned at any cost, They can loose purpsefully Jarkand to get get little confidence on EVM on public

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...