Homeಮುಖಪುಟಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? - ಡಿ.ಉಮಾಪತಿ

ಹಲವು ರಾಜ್ಯಗಳಲ್ಲಿ ಬಿಜೆಪಿ ಸೋತ ನಂತರ ಮೋದಿ ವರ್ಚಸ್ಸು ಕಡಿಮೆಯಾಗಿದೆಯೆ? – ಡಿ.ಉಮಾಪತಿ

ಮೋದಿಯವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಈಗಲೇ ಹೇಳಲು ಬಾರದು.

- Advertisement -
- Advertisement -

ಜಾರ್ಖಂಡ್‌ನಲ್ಲಿ ಬಿಜೆಪಿ ಸೋತಿದೆ. ಹಿಂದೂ ಮುಸ್ಲಿಮ್ ಧ್ರುವೀಕರಣ ಫಲ ನೀಡಿಲ್ಲ. ಬಹುಮತ ಸಿಗದಿದ್ದರೂ ಇತರೆ ಪಕ್ಷಗಳನ್ನು ಒಡೆದು, ಬೆದರಿಸಿ, ಬ್ಲ್ಯಾಕ್‌ಮೇಲ್ ಮಾಡಿ ಸರ್ಕಾರ ರಚಿಸುವ ತಂತ್ರಕ್ಕೂ ಸೋಲಾಗಿದೆ. ಈ ಜನವಿರೋಧಿ ಹುನ್ನಾರಗಳು ಸದಾಕಾಲ ರಾಜಕೀಯ ಲಾಭ ನೀಡುವುದಿಲ್ಲ ಎಂಬ ಸತ್ಯವನ್ನು ಜಾರ್ಖಂಡ್ ಚುನಾವಣಾ ಫಲಿತಾಂಶಗಳು ಮರು ದೃಢೀಕರಿಸಿವೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಡೆಸಿದ ಸುದೀರ್ಘ ಹೋರಾಟದ ನಂತರ ಜಾರ್ಖಂಡ್ ಪ್ರತ್ಯೇಕ ಸ್ವತಂತ್ರ ರಾಜ್ಯವಾಯಿತು. ಇಲ್ಲಿನ ಆದಿವಾಸಿಗಳ ಮತಗಳು, ಒಟ್ಟು ಮತಗಳ ಮೂರನೆಯ ಒಂದಕ್ಕಿಂತ ಕಡಿಮೆ ಹೌದು. ಆದರೂ ಭಾವನಾತ್ಮಕವಾಗಿ ಜಾರ್ಖಂಡ್ ಆದಿವಾಸಿ ಸೀಮೆಯೆಂದೇ ಹೆಸರಾದದ್ದು.

ಬಿಜೆಪಿಯ ಸರ್ವಶಕ್ತ ಜೋಡಿಯಾದ ನರೇಂದ್ರ ಮೋದಿ ಮತ್ತು ಅಮಿತ್ ಶಾ 2014ರಲ್ಲಿ ಜಾರ್ಖಂಡ್ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಆರಿಸಿದ್ದು ಆದಿವಾಸಿ ಅಲ್ಲದ ರಘುಬರದಾಸ್ ಅವರನ್ನು. ದಾಸ್ ಐದು ವರ್ಷಗಳ ಕಾಲ ನಡೆಸಿದ ಸರ್ಕಾರದ ಸ್ವರೂಪ ಆದಿವಾಸಿ ವಿರೋಧಿ ಎನಿಸಿಕೊಂಡಿತ್ತು. ಭೂಸ್ವಾಧೀನ ಕಾಯಿದೆಗೆ ದಾಸ್ ಸರ್ಕಾರ ತಂದಿದ್ದ ತಿದ್ದುಪಡಿ ಮತ್ತು ಆದಿವಾಸಿ ಸೀಮೆಯನ್ನು ವ್ಯಾಪಿಸಿದ ಸ್ವಯಮಾಡಳಿತದ ‘ಪತ್ತಲ್ ಗಡಿ’ ಆಂದೋಲನ ಹಾಗೂ ಮತಾಂತರ ತಡೆ ವಿಧೇಯಕ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾದವು. ಕಳೆದ ಎರಡು ವರ್ಷಗಳಲ್ಲಿ ಜಾರ್ಖಂಡ್‌ನಲ್ಲಿ ಗುಂಪು ಬೀದಿಬೀದಿಗಳಲ್ಲಿ ಬಡಿದು ಜಜ್ಜಿ ಕೊಂದ ಗುಂಪು ಹತ್ಯೆ ಪ್ರಕರಣಗಳ ಸಂಖ್ಯೆ 20. ಹತ್ಯೆಗೆ ಈಡಾದವರ ಪೈಕಿ 11 ಮಂದಿ ಮುಸಲ್ಮಾನರಾಗಿದ್ದರು.

ಸ್ವಾಭಾವಿಕವಾಗಿಯೇ ರಘುಬರದಾಸ್ ಅವರು ಆದಿವಾಸಿಗಳ ವಿಶ್ವಾಸ ಕಳೆದುಕೊಂಡರು. ಬಿಜೆಪಿಯಿಂದ ದೂರ ಸರಿದು ಜಾರ್ಖಂಡ್ ಮುಕ್ತಿ ಮೋರ್ಚಾದ ಜೊತೆ ಕೈಕಲೆಸಿದರು.

2017ರಲ್ಲಿ ಅಧಿಕಾರ ಗಳಿಕೆಯಲ್ಲಿ ಯಶಸ್ಸಿನ ಶಿಖರ ಮುಟ್ಟಿದ್ದ ಬಿಜೆಪಿ ದೇಶದ ಶೇ.71ರಷ್ಟು ಭೂ ಭಾಗವನ್ನು ಆಳತೊಡಗಿತ್ತು. ಇದೀಗ ಜಾರ್ಖಂಡ್ ಸೋಲಿನ ನಂತರ ಈ ಪ್ರಮಾಣ ಶೇ.35ಕ್ಕೆ ಕುಸಿದಿದೆ. ಜನಸಂಖ್ಯೆಯ ಲೆಕ್ಕ ಹಿಡಿದು ಹೇಳುವುದಾದರೆ ಈ ಪ್ರಮಾಣ ಶೇ.69ರಿಂದ ಶೇ.43ಕ್ಕೆ ತಗ್ಗಿದೆ.

2019 ಬಿಜೆಪಿಯ ಪಾಲಿಗೆ ಗೆಲುವು ಮತ್ತು ಸೋಲಿನ ಸಂಗಮವಾಗಿತ್ತು. ಲೋಕಸಭಾ ಚುನಾವಣೆಗಳಲ್ಲಿ 303 ಸೀಟುಗಳು ಮತ್ತು ಶೇ.37ರಷ್ಟು ವೋಟುಗಳ ಧಾರಾಳ ಬಹುಮತ ಗಳಿಸಿತು. ಆದರೆ ಈ ಆತ್ಮವಿಶ್ವಾಸದ ಗೆಲುವಿನ ಬೆನ್ನಿನಲ್ಲೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಕೈಬಿಟ್ಟಿವೆ. ಹರಿಯಾಣದಲ್ಲಿ ಬಹುಮತ ದೊರೆಯಲಿಲ್ಲ.

ಮಹಾರಾಷ್ಟ್ರದಲ್ಲಿ ಕೈಗೆ ಬಂದ ತುತ್ತನ್ನು ಬಾಯಿಗೆ ಇರಿಸಿಕೊಳ್ಳುವಲ್ಲಿ ತಾನು ಎದುರಿಸಿದ ವೈಫಲ್ಯ ಮತ್ತು ಜಾರ್ಖಂಡ್‌ದ ನಿರ್ಣಾಯಕ ಸೋಲು ಕೇಸರಿ ಪಕ್ಷದ ವಿರೋಧಿಗಳ ಕೈಗೆ ಬಡಿಗೆ ನೀಡಿದೆ. ಬಿಜೆಪಿ ಇಳಿಜಾರಿನ ಹಾದಿ ಹಿಡಿದಿದೆಯೇ ಎಂಬ ಪ್ರಶ್ನೆಗಳು ಎದ್ದಿವೆ. ದೇಶಾದ್ಯಂತ ಭುಗಿಲೆದ್ದಿರುವ ಪೌರತ್ವ ತಿದ್ದುಪಡಿ ಕಾಯಿದೆಯ ವಿರೋಧ ಕೂಡ ಈ ಸಂದೇಹದ ಸಾಲು ಸೇರಿದೆ.

ಇತ್ತೀಚೆಗೆ ಜಾರ್ಖಂಡ್‌ನಲ್ಲಿ ನಡೆಸಲಾದ ಲೋಕನೀತಿ- ಸಿ.ಎಸ್.ಡಿ.ಎಸ್ ಸಮೀಕ್ಷೆಯ ಪ್ರಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಭಾವ ತಗ್ಗಿದೆ. ಆದರೆ ಕೇವಲ ಇಷ್ಟು ಮಾತ್ರದಿಂದಲೇ ಅವರ ಪ್ರಭಾವ ಸರ್ವವ್ಯಾಪಿಯಾಗಿ ರಾಷ್ಟ್ರಮಟ್ಟದಲ್ಲಿ ತಗ್ಗಿದೆ ಎಂದು ಹೇಳಲು ಬರುವುದಿಲ್ಲ ಎನ್ನುತ್ತಾರೆ ಈ ಸಮೀಕ್ಷೆ ನಡೆಸಿರುವ ಸಿ.ಎಸ್.ಡಿ.ಎಸ್.ನ ಸಂಜಯಕುಮಾರ್. ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದರೂ, ಆ ನಂತರ ಜರುಗಿದ ಲೋಕಸಭಾ ಚುನಾವಣೆಗಳಲ್ಲಿ ಈ ಮೂರೂ ರಾಜ್ಯಗಳ 65 ಸೀಟುಗಳ ಪೈಕಿ 62ನ್ನು ಬಿಜೆಪಿ ಗೆದ್ದುಕೊಂಡ ಕುರಿತು ಕುಮಾರ್ ಗಮನ ಸೆಳೆದಿದ್ದಾರೆ.

ಸದ್ಯಕ್ಕೆ ಜಾರ್ಖಂಡ್ ರಾಜ್ಯಕ್ಕೆ ಸೀಮಿತವಾಗಿರುವ ಈ ಕುಸಿತ ಮುಂಬರುವ ದಿನಗಳಲ್ಲಿ ವಿಶೇಷವಾಗಿ ಪೌರತ್ವ ಕಾಯಿದೆ ತಿದ್ದುಪಡಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಆಚೆಗೂ ಹಬ್ಬಲಿದೆಯೇ ಅಥವಾ ಕೇಂದ್ರ ಸರ್ಕಾರ ಅದನ್ನು ತಡೆಹಿಡಿಯುವುದೇ ಎಂಬುದನ್ನು ಕಾದು ನೋಡಬೇಕಿದೆ ಎಂಬ ಅಡ್ಡ ಗೀಟನ್ನು ಕುಮಾರ್ ಎಳೆದಿದ್ದಾರೆ.

2018ರಿಂದ ಬಿಜೆಪಿ ಹಲವು ಪ್ರಮುಖ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಏಳು ರಾಜ್ಯಗಳಲ್ಲಿ (ಅರುಣಾಚಲ ಪ್ರದೇಶ, ತ್ರಿಪುರ, ಉತ್ತರಪ್ರದೇಶ, ಹಿಮಾಚಲ, ಉತ್ತರಾಖಂಡ, ಗುಜರಾತ್ ಹಾಗೂ ಕರ್ನಾಟಕ) ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ. ಒಂಬತ್ತು ರಾಜ್ಯಗಳಲ್ಲಿ ಮಿತ್ರಪಕ್ಷಗಳ ನೆರವಿನೊಂದಿಗೆ ಸರ್ಕಾರಗಳನ್ನು ನಡೆಸಿದೆ.

ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಅತಿಹೆಚ್ಚು ಸೀಟು ಗೆದ್ದ ಪಕ್ಷವಾಗಿ ಹೊರಹೊಮ್ಮಿತ್ತು. ಜಾರ್ಖಂಡ್‌ನಲ್ಲಿ ಸೋತರೂ ಶೇ.33ರಷ್ಟು ಮತಗಳನ್ನು ಗಳಿಸಿತು ಎಂಬುದು ಅವರ ವಾದ. ಮತದಾರರ ಆಯ್ಕೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಭಿನ್ನ ಭಿನ್ನ ಎಂಬುದು ನಿರ್ವಿವಾದಿತ ಅಂಶ. ರಾಜ್ಯ ಸರ್ಕಾರಗಳ ಮಾತು ಬಂದಾಗ ಮತದಾರರು ಬಿಜೆಪಿಯ ಆಚೆಗೂ ನೋಡಿದ್ದಾರೆ. ಮೋದಿಯವರ ವೈಫಲ್ಯ ಇಲ್ಲಿ ಎದ್ದು ಕಂಡಿದೆ.

2020ರ ಅರಂಭದಲ್ಲೇ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಮತ್ತು ಅಂತ್ಯದಲ್ಲಿ ಜರುಗುವ ಬಿಹಾರ ವಿಧಾನಸಭಾ ಚುನಾವಣೆಗಳು ಮೋದಿಯವರ ಜನಪ್ರಿಯತೆಯನ್ನು ಮತ್ತಷ್ಟು ಪರೀಕ್ಷಿಸಲಿವೆ. 2021ರಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ವಿಧಾನಸಭೆಗಳಿಗೆ ಚುನಾವಣೆ ಜರುಗಲಿದೆ. ಈ ಎರಡೂ ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯಿದೆ ಹುಟ್ಟಿಸಿರುವ ಭೂಕಂಪದ ಬಹುಮುಖ್ಯ ಕಂಪನ ಕೇಂದ್ರಗಳು. ಹೀಗಾಗಿ ಈ ರಾಜ್ಯಗಳು ಮೋದಿಯವರ ಕೈಹಿಡಿಯುವುವೇ ಇಲ್ಲವೇ ಕೆಡವಲಿವೆಯೇ ಎಂಬುದು ಕಾದು ನೋಡಬೇಕಿರುವ ಅಗ್ನಿಪರೀಕ್ಷೆ.

ಈ ನಡುವೆ ಮಣ್ಣುಪಾಲಾಗಿದ್ದ ಕಾಂಗ್ರೆಸ್ ಪಕ್ಷ ಚೇತರಿಕೆಯ ಸೂಚನೆಗಳನ್ನು ತೋರತೊಡಗಿದೆ. ಕಾಂಗ್ರೆಸ್ಸಿನ ನಿಜವಾದ ಶಕ್ತಿಯ ಅಂದಾಜು ಅದರ ಟೀಕಾಕಾರರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಇದ್ದಂತಿದೆ. ಸಂಘ ಪರಿವಾರ ಕಾಂಗ್ರೆಸ್ಸಿನ ಮೇಲೆ ದಶದಿಕ್ಕುಗಳಿಂದ ನಡೆಸುತ್ತಿರುವ ದಾಳಿಯೇ ಈ ಮಾತಿಗೆ ಸಾಕ್ಷಿ. ಕಾಂಗ್ರೆಸ್ ಪಕ್ಷದ ದಿನಗಳು ಮುಗಿದುಹೋದವೆಂದು ತಾನು ಹಗಲಿರುಳು ಚೀರಿ ಹೇಳುತ್ತಿದೆ. ಮುಗಿದುಹೋಗಿದ್ದೇ ನಿಜವಾಗಿದ್ದರೆ ಆ ಮಾತನ್ನು ಹಗಲಿರುಳು ಚೀರಿ ಹೇಳುವ ಅಗತ್ಯ ಇರಲಿಲ್ಲ. ಕಾಂಗ್ರೆಸ್ಸಿಗೆ ತನ್ನಲ್ಲೇ ತನಗೆ ನಂಬಿಕೆ ಕಳೆದುಹೋಗಿದ್ದರೂ, ಮತದಾರರಲ್ಲಿ ಈ ನಂಬಿಕೆಯ ಬೇರು ಸಂಪೂರ್ಣವಾಗಿ ಅಳಿದಿಲ್ಲ ಎಂಬ ಸುಳಿವನ್ನು ಅರಿಯುವಷ್ಟು ಜಾಣತನ ಬಿಜೆಪಿಗೆ ಇದ್ದೇ ಇದೆ. ಇತ್ತೀಚಿನ ದಿನಗಳಲ್ಲಿ ತಾನು ಕಳೆದುಕೊಂಡಿರುವ ಮೂರು ಮುಖ್ಯ ರಾಜ್ಯಗಳು ಕಾಂಗ್ರೆಸ್ ಪಾಲಾಗಿವೆ ಮತ್ತು ಉಳಿದೆರಡರ ಅಧಿಕಾರವನ್ನು ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ಹಂಚಿಕೊಂಡಿದೆ ಎಂಬ ಅಂಶಕ್ಕೆ ಬಿಜೆಪಿ ಕುರುಡಾಗುವುದು ಹೇಗೆ ತಾನೇ ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. sir
    once EVEM Stops see BJP will not win in the country, all parties must see that evm must be banned at any cost, They can loose purpsefully Jarkand to get get little confidence on EVM on public

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...