Homeಕರ್ನಾಟಕಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

- Advertisement -
- Advertisement -

ಇಂದು ದೇಶದ್ಯಾಂತ ಪ್ರಮುಖ ದಿನಪತ್ರಿಕೆಗಳಲ್ಲಿ “ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಗೆ (ಬೆಂಗಳೂರಿನ ಏರ್‌ಪೋರ್ಟ್-ಕೆ.ಆರ್ ಪುರಂ- ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ) ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು” ಹೆಸರಿನಲ್ಲಿ ಪೂರ್ಣ ಪುಟದ ಜಾಹೀರಾತನ್ನು ಕರ್ನಾಟಕ ಸಿಎಂ ಯಡಿಯೂರಪ್ಪನವರು ನೀಡಿದ್ದಾರೆ. ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದ್ದು, ಈ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?, ಜನ ಸಂಕಷ್ಟದಲ್ಲಿರುವಾಗ ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ? ಎಂಬ ಪ್ರಶ್ನೆಗಳು ಎದ್ದಿವೆ.

ರಾಜ್ಯ ಸರ್ಕಾರವು 3 ವರ್ಷಗಳ ಹಿಂದೆಯೇ (ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ) ಈ ಮಾರ್ಗಗಳನ್ನು ಅನುಮೋದಿಸಿ, ಭೂಸ್ವಾಧೀನವನ್ನು ಪೂರ್ಣಗೊಳಿಸಿತು ಮತ್ತು ಟೆಂಡರ್ ಸಹ ಮಾಡಿತು. ಆದರೆ ಕೇಂದ್ರ ಕ್ಯಾಬಿನೆಟ್ ಅನುಮೋದನೆಗಾಗಿ ಇಷ್ಟು ದಿನ ಏಕೆ ಕಾಯಬೇಕಾಯಿತು, ಇಷ್ಟು ವರ್ಷ ಏಕೆ ತಡೆಹಿಡಿಯಿತು ಎಂದು ಡಾ.ಎಚ್.ವಿ ವಾಸು, ಪ್ರೊ.ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ನೀಡಿರುವ ಜಾಹೀರಾತಿನಲ್ಲಿ 5 ವರ್ಷಗಳಲ್ಲಿ ಪೂರೈಸುವ ಈ ಯೋಜನೆಗೆ 14,778 ಕೋಟಿ ರೂಗಳಿಗೆ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದಾರೆ. ಅದು  ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚವಾಗಿದೆ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರ ಪೂರ್ತಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಕೇಂದ್ರ ಸಣ್ಣ ಪಾಲನ್ನಷ್ಟೇ ನೀಡುತ್ತದೆ. ರಾಜ್ಯಗಳೇ ಹೆಚ್ಚಿನ ಪಾಲು ಭರಿಸಿದರೂ ಅದರ ಕ್ರೆಡಿಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಏಕೆ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ. ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಹಲವು ವರ್ಷಗಳಿಂದ ಈ ಯೋಜನೆ ಅನುಮೋದನೆಗಾಗಿ ಕಾಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಶೇ.50 ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗಲೂ ತಾನು ಕೊಡಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತದೆ ಎಂಬುದರಲ್ಲಿ ನಂಬಿಕೆಯಿಲ್ಲ. ಇನ್ನು ಈ ಯೋಜನೆಗಾಗಿ ಸಾಲ ಮಾಡುವುದರಲ್ಲಿ ಎಷ್ಟನ್ನು ಕೇಂದ್ರ ಸರ್ಕಾರ ತೀರಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಕುರಿತು ಯಡಿಯೂರಪ್ಪನವರು ಸಾರ್ವಜನಿಕರಿಗೆ ಪಾರದಾರ್ಶಕ ಮಾಹಿತಿ ನೀಡಬೇಕೆಂದು” ಒತ್ತಾಯಿಸಿದರು.

ಇನ್ನು ಈ ಯೋಜನೆಗೆ ದೇಶಾದ್ಯಂತ ರಾಜ್ಯ ಸರ್ಕಾರದ ಹಣದಲ್ಲಿ ಜಾಹೀರಾತು ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿರುವ ಅವರು, ಒಂದು ಕಡೆ ಸರಕಾರದ ಬಳಿ ದುಡ್ಡಿಲ್ಲ ಅಂತಾರೆ, ಇನ್ನೊಂದು ಕಡೆ ಪುಟಗಟ್ಟಲೇ ಜಾಹಿರಾತು ನೀಡ್ತಾರೆ. ಕೇಂದ್ರ ಸರಕಾರ ಕರ್ನಾಟಕದ ಯೋಜನೆಗೆ ದುಡ್ಡು ಕೊಡೋದು ನಾವು ಕೊಟ್ಟ ತೆರಿಗೆ ಹಣದಿಂದಲೇ. ಅಕಸ್ಮಾತ್ ನಿಮಗೆ ಏನಾದ್ರೂ ಧನ್ಯವಾದ ಹೇಳಬೇಕು ಅಂದ್ರೆ ನಿಮ್ಮ ಸ್ವಂತ ದುಡ್ಡಲ್ಲಿ ಜಾಹಿರಾತು ನೀಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಂದು ನಾವು ಸಾವಿನ ಮನೆಯಲ್ಲಿದ್ದೇವೆ. ಇಂತಹ ಸಮಯದಲ್ಲಿ ರಾಜ್ಯಸರ್ಕಾರ ಮೆಟ್ರೋಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ದೊಡ್ಡ ದೊಡ್ಡ ಜಾಹೀರಾತು ನೀಡುತ್ತಿದೆ ಎಂದರೆ ಈ ಸರ್ಕಾರಕ್ಕೆ ಇನ್ನು ಬುದ್ದಿ ಬಂದಿಲ್ಲ ಎಂದರ್ಥ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಾಹೀರಾತುಗಳ ಅವಶ್ಯಕತೆ ಇದೆಯೇ ಎಂಬುದನ್ನು ಈ ಮುರ್ಖ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬೆಡ್‌ಗಳಿಲ್ಲ, ಆಕ್ಸಿಜನ್, ಔ‍‍ಷಧಿ ಕೊರತೆಯಿಂದ ಜನ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಜಾಹೀರಾತು ನೀಡುವ ಮೂಲಕ ಸಾವಿನ ಮನೆಯ ಜನರೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...