Homeಕರ್ನಾಟಕಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

- Advertisement -
- Advertisement -

ಇಂದು ದೇಶದ್ಯಾಂತ ಪ್ರಮುಖ ದಿನಪತ್ರಿಕೆಗಳಲ್ಲಿ “ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಗೆ (ಬೆಂಗಳೂರಿನ ಏರ್‌ಪೋರ್ಟ್-ಕೆ.ಆರ್ ಪುರಂ- ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ) ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು” ಹೆಸರಿನಲ್ಲಿ ಪೂರ್ಣ ಪುಟದ ಜಾಹೀರಾತನ್ನು ಕರ್ನಾಟಕ ಸಿಎಂ ಯಡಿಯೂರಪ್ಪನವರು ನೀಡಿದ್ದಾರೆ. ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದ್ದು, ಈ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?, ಜನ ಸಂಕಷ್ಟದಲ್ಲಿರುವಾಗ ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ? ಎಂಬ ಪ್ರಶ್ನೆಗಳು ಎದ್ದಿವೆ.

ರಾಜ್ಯ ಸರ್ಕಾರವು 3 ವರ್ಷಗಳ ಹಿಂದೆಯೇ (ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ) ಈ ಮಾರ್ಗಗಳನ್ನು ಅನುಮೋದಿಸಿ, ಭೂಸ್ವಾಧೀನವನ್ನು ಪೂರ್ಣಗೊಳಿಸಿತು ಮತ್ತು ಟೆಂಡರ್ ಸಹ ಮಾಡಿತು. ಆದರೆ ಕೇಂದ್ರ ಕ್ಯಾಬಿನೆಟ್ ಅನುಮೋದನೆಗಾಗಿ ಇಷ್ಟು ದಿನ ಏಕೆ ಕಾಯಬೇಕಾಯಿತು, ಇಷ್ಟು ವರ್ಷ ಏಕೆ ತಡೆಹಿಡಿಯಿತು ಎಂದು ಡಾ.ಎಚ್.ವಿ ವಾಸು, ಪ್ರೊ.ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ನೀಡಿರುವ ಜಾಹೀರಾತಿನಲ್ಲಿ 5 ವರ್ಷಗಳಲ್ಲಿ ಪೂರೈಸುವ ಈ ಯೋಜನೆಗೆ 14,778 ಕೋಟಿ ರೂಗಳಿಗೆ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದಾರೆ. ಅದು  ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚವಾಗಿದೆ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರ ಪೂರ್ತಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಕೇಂದ್ರ ಸಣ್ಣ ಪಾಲನ್ನಷ್ಟೇ ನೀಡುತ್ತದೆ. ರಾಜ್ಯಗಳೇ ಹೆಚ್ಚಿನ ಪಾಲು ಭರಿಸಿದರೂ ಅದರ ಕ್ರೆಡಿಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಏಕೆ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ. ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಹಲವು ವರ್ಷಗಳಿಂದ ಈ ಯೋಜನೆ ಅನುಮೋದನೆಗಾಗಿ ಕಾಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಶೇ.50 ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗಲೂ ತಾನು ಕೊಡಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತದೆ ಎಂಬುದರಲ್ಲಿ ನಂಬಿಕೆಯಿಲ್ಲ. ಇನ್ನು ಈ ಯೋಜನೆಗಾಗಿ ಸಾಲ ಮಾಡುವುದರಲ್ಲಿ ಎಷ್ಟನ್ನು ಕೇಂದ್ರ ಸರ್ಕಾರ ತೀರಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಕುರಿತು ಯಡಿಯೂರಪ್ಪನವರು ಸಾರ್ವಜನಿಕರಿಗೆ ಪಾರದಾರ್ಶಕ ಮಾಹಿತಿ ನೀಡಬೇಕೆಂದು” ಒತ್ತಾಯಿಸಿದರು.

ಇನ್ನು ಈ ಯೋಜನೆಗೆ ದೇಶಾದ್ಯಂತ ರಾಜ್ಯ ಸರ್ಕಾರದ ಹಣದಲ್ಲಿ ಜಾಹೀರಾತು ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿರುವ ಅವರು, ಒಂದು ಕಡೆ ಸರಕಾರದ ಬಳಿ ದುಡ್ಡಿಲ್ಲ ಅಂತಾರೆ, ಇನ್ನೊಂದು ಕಡೆ ಪುಟಗಟ್ಟಲೇ ಜಾಹಿರಾತು ನೀಡ್ತಾರೆ. ಕೇಂದ್ರ ಸರಕಾರ ಕರ್ನಾಟಕದ ಯೋಜನೆಗೆ ದುಡ್ಡು ಕೊಡೋದು ನಾವು ಕೊಟ್ಟ ತೆರಿಗೆ ಹಣದಿಂದಲೇ. ಅಕಸ್ಮಾತ್ ನಿಮಗೆ ಏನಾದ್ರೂ ಧನ್ಯವಾದ ಹೇಳಬೇಕು ಅಂದ್ರೆ ನಿಮ್ಮ ಸ್ವಂತ ದುಡ್ಡಲ್ಲಿ ಜಾಹಿರಾತು ನೀಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಂದು ನಾವು ಸಾವಿನ ಮನೆಯಲ್ಲಿದ್ದೇವೆ. ಇಂತಹ ಸಮಯದಲ್ಲಿ ರಾಜ್ಯಸರ್ಕಾರ ಮೆಟ್ರೋಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ದೊಡ್ಡ ದೊಡ್ಡ ಜಾಹೀರಾತು ನೀಡುತ್ತಿದೆ ಎಂದರೆ ಈ ಸರ್ಕಾರಕ್ಕೆ ಇನ್ನು ಬುದ್ದಿ ಬಂದಿಲ್ಲ ಎಂದರ್ಥ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಾಹೀರಾತುಗಳ ಅವಶ್ಯಕತೆ ಇದೆಯೇ ಎಂಬುದನ್ನು ಈ ಮುರ್ಖ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬೆಡ್‌ಗಳಿಲ್ಲ, ಆಕ್ಸಿಜನ್, ಔ‍‍ಷಧಿ ಕೊರತೆಯಿಂದ ಜನ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಜಾಹೀರಾತು ನೀಡುವ ಮೂಲಕ ಸಾವಿನ ಮನೆಯ ಜನರೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...