Homeಮುಖಪುಟವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

ವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಕೆಟ್ಟ ರೈಲ್ವೆ ದುರಂತಗಳಲ್ಲಿ ಒಂದಾಗಿದೆ.

ಈ ಅಪಘಾತವು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಭಾರತೀಯ ರೈಲ್ವೆಯನ್ನು ಕಾಡುತ್ತಿರುವ ಇತರ ಸಮಸ್ಯೆಗಳತ್ತಲೂ ಬೊಟ್ಟು ಮಾಡಿದೆ. ಜನಸಂದಣಿ, ರೈಲಿನ ವಿಳಂಬದಂತಹ ಸಮಸ್ಯೆಗಳನ್ನು ಇದು ಎತ್ತಿ ಹಿಡಿದಿದೆ. ಇವುಗಳು ದೀರ್ಘಕಾಲದ ಕಳವಳಕಾರಿ ಸಂಗತಿಗಳಾದರೂ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಇಚ್ಛಾಶಕ್ತಿಯು ಈ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿಲ್ಲ. ಆದರೆ ವಂದೇ ಭಾರತ್‌ ರೈಲಿಗೆ ಒತ್ತು ಸಿಕ್ಕಿದೆ.

ವಂದೇ ಭಾರತ್‌ಗೆ ಒತ್ತು

‘ಎಕನಾಮಿಕ್ ಟೈಮ್ಸ್’ ವರದಿ ಪ್ರಕಾರ ರೈಲ್ವೇ ಇಲಾಖೆಯು ಪ್ರತಿ ವಂದೇ ಭಾರತ್ ರೈಲಿಗಾಗಿ 115 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಇದೇ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ರೈಲುಗಳ ಮೇಲೆ ಸರ್ಕಾರ ಗಮನಹರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಹಲವಾರು ವಂದೇ ಭಾರತ್ ಮಾರ್ಗಗಳನ್ನು ಪ್ರಾರಂಭಿಸಿದ್ದಾರೆ, ರೈಲುಗಳ ಪ್ರಯೋಜನಗಳ ಬಗ್ಗೆ ಪಟ್ಟುಬಿಡದೆ ಪ್ರಚಾರವನ್ನು ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಾಗ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, “ವಂದೇ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸಲು ಹಣವನ್ನು ಬಳಸಲಾಗುವುದು” ಎಂದು ಒತ್ತಿ ಹೇಳಿದರು.

ವಂದೇ ಭಾರತ್ ಟಿಕೆಟ್‌ ದರಗಳು ಭಾರತೀಯ ರೈಲ್ವೆಯ ಸಾಮಾನ್ಯ ರೈಲುಗಳಿಗಿಂತ ಹೆಚ್ಚಾಗಿದೆ. ಈ ರೈಲು 2019-20ರಲ್ಲಿ 808 ಕೋಟಿ ಪ್ರಯಾಣಿಕರನ್ನು ಒತ್ತು ಸಾಗಿಸಿದೆ. ವಿಶೇಷವಾಗಿ ಬಡವರಿಗೆ ಇದು ವೆಚ್ಚದಾಯಕವಾಗಿದೆ.

ಸುರಕ್ಷತಾ ಮಾನದಂಡಗಳಲ್ಲಿ ಕುಸಿತ

ವಂದೇ ಭಾರತ್ ಉತ್ತೇಜನದ ನಡುವೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳು ಗಮನ ಸೆಳೆಯುತ್ತವೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಅಪಘಾತಗಳು ಹೆಚ್ಚಿವೆ ಎಂದು ಈ ವರದಿ ತೋರಿಸುತ್ತದೆ. ರೈಲ್ವೇ ಸಚಿವಾಲಯದ ಸುರಕ್ಷತಾ ಪರಿಶೀಲನಾ ದತ್ತಾಂಶವನ್ನು ಉಲ್ಲೇಖಿಸಿದ ಬಿಸಿನೆಸ್ ಸ್ಟ್ಯಾಂಡರ್ಡ್‌ನಲ್ಲಿನ ವರದಿಯ ಪ್ರಕಾರ, “2022-23ರಲ್ಲಿ 37% (ಅವಘಡ) ಏರಿಕೆಯಾಗಿದೆ.”

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳು ಸುಮಾರು 2.6 ಲಕ್ಷ ಸಾವುಗಳಿಗೆ ಕಾರಣವಾಗಿವೆ ಎಂದು ಅಪರಾಧ ಬ್ಯೂರೋ ಅಂಕಿಅಂಶಗಳು ಹೇಳುತ್ತಿವೆ. ಪ್ರಯಾಣಿಕರ ರೈಲು ಸೇವೆಗಳು ಗಮನಾರ್ಹವಾಗಿ ಕಡಿಮೆಯಾದಾಗ (ಕೋವಿಡ್ -19 ಸಾಂಕ್ರಾಮಿಕದ ಎರಡು ವರ್ಷಗಳ ಹೊರತುಪಡಿಸಿ) ಕಳೆದ ಐದು ವರ್ಷಗಳಲ್ಲಿ ರೈಲು ಅಪಘಾತಗಳಿಗೆ ಸಂಬಂಧಿಸಿದ ಸಾವುಗಳು ಸ್ವಲ್ಪಮಟ್ಟಿಗೆ ಏರಿದೆ.

ಅನುದಾನ ಕಡಿತದಿಂದ ಸುರಕ್ಷತೆಗೆ ಕುತ್ತು

2017 ಮತ್ತು 2021ರ ನಡುವಿನ ರೈಲು ಅಪಘಾತಗಳು ಹೆಚ್ಚಿನದಾಗಿ ಟ್ರ್ಯಾಕ್ ದೋಷಗಳಂತಹ ಯಾಂತ್ರಿಕ ವೈಫಲ್ಯಗಳಿಂದ ಸಂಭವಿಸಿವೆ. ಆದರೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರ ಬಜೆಟ್‌ನಲ್ಲಿ ಟ್ರ್ಯಾಕ್ ನವೀಕರಣಗಳಿಗಾಗಿ ಬಜೆಟ್ ಹಂಚಿಕೆಯಲ್ಲಿ 3,222.4 ಕೋಟಿ ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಭಾರತದ ಮುಖ್ಯ ಲೆಕ್ಕ ಪರಿಶೋಧನಾ ಸಂಸ್ಥೆಯಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತನ್ನ 2022ರ ವರದಿಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ರೈಲುಗಳ ಹಳಿತಪ್ಪುವಿಕೆ ಕುರಿತು ಹೈಲೇಟ್ ಮಾಡಿದೆ. ಕೆಲವು ರೈಲ್ವೆ ವಲಯಗಳು 2017-18 ಮತ್ತು 2019-20 ರ ನಡುವೆ ಈ ಉದ್ದೇಶಕ್ಕಾಗಿ (ಟ್ರ್ಯಾಕ್ ನವೀಕರಣ) ನಿಗದಿಪಡಿಸಿದ ಕೆಲವು ನಿಧಿಯನ್ನೂ ಹಿಂತಿರುಗಿಸಿವೆ.

“ನಿಧಿ ಹಂಚಿಕೆಯಲ್ಲಿನ ಕುಸಿತ ಮತ್ತು ಮಂಜೂರು ಮಾಡಿದ ನಿಧಿಯು ಬಳಕೆಯಾಗದಿರುವುದು ಟ್ರ್ಯಾಕ್ ನವೀಕರಣ ಕಾರ್ಯಗಳು ಸಕಾಲಿಕವಾಗಿ ಪೂರ್ಣಗೊಳ್ಳದಿರುವುದರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

2017-18ರಿಂದ 2020-21ರವರೆಗಿನ 1,129 ಹಳಿತಪ್ಪಿ ತಪ್ಪಿದ ಪ್ರಕರಣಗಳಲ್ಲಿ ಶೇ. 26%ರಷ್ಟು ಪ್ರಕರಣಗಳು ಟ್ರ್ಯಾಕ್ ನವೀಕರಣ ವಿಷಯಕ್ಕೆ ಸಂಬಂಧಿಸಿವೆ ಎಂದು ಲೆಕ್ಕಪರಿಶೋಧಕರು ಹೇಳಿದ್ದಾರೆ.

ಇದನ್ನೂ ಓದಿರಿ: ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

“ರೈಲ್ವೆ ಆಡಳಿತವು ರೈಲ್ವೆಯ ಸ್ಥಾಯಿ ಸಮಿತಿಯ [2016-’17] ಅವಲೋಕನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಟ್ರ್ಯಾಕ್ ನವೀಕರಣಗಳಿಗೆ ಸಂಬಂಧಿಸಿದಂತೆ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಹೆಚ್ಚಿಸುವ ಅಗತ್ಯವಿದೆ” ಎಂದಿದ್ದಾರೆ ಲೆಕ್ಕಪರಿಶೋಧಕರು.

ಹಣಕಾಸಿನ ಕಡಿತದ ಜೊತೆಗೆ, ನೇಮಕಾತಿಯ ಕೊರತೆಯು ಸುರಕ್ಷತೆಯಲ್ಲಿನ ಲೋಪವನ್ನು ಎತ್ತಿ ಹಿಡಿಯುತ್ತದೆ. ಕೇಂದ್ರ ವಲಯದಲ್ಲಿ ಖಾಲಿ ಇರುವ 28,650 ಹುದ್ದೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಸುರಕ್ಷತಾ ಕೆಲಸಗಳಿಗೆ ಸಂಬಂಧಿಸಿವೆ. ವಿವಿಧ ರೀತಿಯ ಇನ್ಸ್‌ಪೆಕ್ಟರ್‌ಗಳು, ಚಾಲಕರು, ರೈಲು ಪರೀಕ್ಷಕರು ಸೇರಿದಂತೆ ಮೊದಲಾದ ಸಿಬ್ಬಂದಿ ಸುರಕ್ಷತಾ ವರ್ಗಕ್ಕೆ ಸೇರುತ್ತಾರೆ.

ದರ ಏರಿಕೆ, ಪರಿಸ್ಥಿತಿ ಹದಗೆಡುವುದೇ?

ಇತ್ತೀಚಿನ ತಿಂಗಳುಗಳಲ್ಲಿ 130 ಹೆಚ್ಚು ರೈಲುಗಳಿಗೆ “ಸೂಪರ್‌ಫಾಸ್ಟ್” ಸ್ಥಾನಮಾನ ನೀಡಿ, ಅವುಗಳ ದರವನ್ನು ಹೆಚ್ಚಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಹೆಚ್ಚಿನ ದರಗಳ ಹೊರತಾಗಿಯೂ, ಸ್ಲೀಪರ್ ಕೋಚ್‌ಗಳು ಸಹ ಕಿಕ್ಕಿರಿದು ತುಂಬಿರುತ್ತವೆ, ಕಳಪೆ ನಿರ್ವಹಣೆ ಇರುತ್ತದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ.

ಶುಕ್ರವಾರ ಅಪಘಾತಕ್ಕೆ ಒಳಗಾದ ರೈಲುಗಳಲ್ಲಿ ಒಂದಾದ ಕೋರಮಂಡಲ್ ಎಕ್ಸ್‌ಪ್ರೆಸ್ ಬಗ್ಗೆಯೇ ಹಲವು ದೂರುಗಳು ಬಂದಿವೆ. ರೈಲು ವಿಳಂಬ ಮತ್ತೊಂದು ಸಮಸ್ಯೆಯಾಗಿದೆ.

ವರದಿ ಕೃಪೆ: ಸ್ಕ್ರಾಲ್.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...