Homeಮುಖಪುಟವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

ವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಕೆಟ್ಟ ರೈಲ್ವೆ ದುರಂತಗಳಲ್ಲಿ ಒಂದಾಗಿದೆ.

ಈ ಅಪಘಾತವು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಭಾರತೀಯ ರೈಲ್ವೆಯನ್ನು ಕಾಡುತ್ತಿರುವ ಇತರ ಸಮಸ್ಯೆಗಳತ್ತಲೂ ಬೊಟ್ಟು ಮಾಡಿದೆ. ಜನಸಂದಣಿ, ರೈಲಿನ ವಿಳಂಬದಂತಹ ಸಮಸ್ಯೆಗಳನ್ನು ಇದು ಎತ್ತಿ ಹಿಡಿದಿದೆ. ಇವುಗಳು ದೀರ್ಘಕಾಲದ ಕಳವಳಕಾರಿ ಸಂಗತಿಗಳಾದರೂ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಇಚ್ಛಾಶಕ್ತಿಯು ಈ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿಲ್ಲ. ಆದರೆ ವಂದೇ ಭಾರತ್‌ ರೈಲಿಗೆ ಒತ್ತು ಸಿಕ್ಕಿದೆ.

ವಂದೇ ಭಾರತ್‌ಗೆ ಒತ್ತು

‘ಎಕನಾಮಿಕ್ ಟೈಮ್ಸ್’ ವರದಿ ಪ್ರಕಾರ ರೈಲ್ವೇ ಇಲಾಖೆಯು ಪ್ರತಿ ವಂದೇ ಭಾರತ್ ರೈಲಿಗಾಗಿ 115 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಇದೇ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ರೈಲುಗಳ ಮೇಲೆ ಸರ್ಕಾರ ಗಮನಹರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಹಲವಾರು ವಂದೇ ಭಾರತ್ ಮಾರ್ಗಗಳನ್ನು ಪ್ರಾರಂಭಿಸಿದ್ದಾರೆ, ರೈಲುಗಳ ಪ್ರಯೋಜನಗಳ ಬಗ್ಗೆ ಪಟ್ಟುಬಿಡದೆ ಪ್ರಚಾರವನ್ನು ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಾಗ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, “ವಂದೇ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸಲು ಹಣವನ್ನು ಬಳಸಲಾಗುವುದು” ಎಂದು ಒತ್ತಿ ಹೇಳಿದರು.

ವಂದೇ ಭಾರತ್ ಟಿಕೆಟ್‌ ದರಗಳು ಭಾರತೀಯ ರೈಲ್ವೆಯ ಸಾಮಾನ್ಯ ರೈಲುಗಳಿಗಿಂತ ಹೆಚ್ಚಾಗಿದೆ. ಈ ರೈಲು 2019-20ರಲ್ಲಿ 808 ಕೋಟಿ ಪ್ರಯಾಣಿಕರನ್ನು ಒತ್ತು ಸಾಗಿಸಿದೆ. ವಿಶೇಷವಾಗಿ ಬಡವರಿಗೆ ಇದು ವೆಚ್ಚದಾಯಕವಾಗಿದೆ.

ಸುರಕ್ಷತಾ ಮಾನದಂಡಗಳಲ್ಲಿ ಕುಸಿತ

ವಂದೇ ಭಾರತ್ ಉತ್ತೇಜನದ ನಡುವೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳು ಗಮನ ಸೆಳೆಯುತ್ತವೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಅಪಘಾತಗಳು ಹೆಚ್ಚಿವೆ ಎಂದು ಈ ವರದಿ ತೋರಿಸುತ್ತದೆ. ರೈಲ್ವೇ ಸಚಿವಾಲಯದ ಸುರಕ್ಷತಾ ಪರಿಶೀಲನಾ ದತ್ತಾಂಶವನ್ನು ಉಲ್ಲೇಖಿಸಿದ ಬಿಸಿನೆಸ್ ಸ್ಟ್ಯಾಂಡರ್ಡ್‌ನಲ್ಲಿನ ವರದಿಯ ಪ್ರಕಾರ, “2022-23ರಲ್ಲಿ 37% (ಅವಘಡ) ಏರಿಕೆಯಾಗಿದೆ.”

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳು ಸುಮಾರು 2.6 ಲಕ್ಷ ಸಾವುಗಳಿಗೆ ಕಾರಣವಾಗಿವೆ ಎಂದು ಅಪರಾಧ ಬ್ಯೂರೋ ಅಂಕಿಅಂಶಗಳು ಹೇಳುತ್ತಿವೆ. ಪ್ರಯಾಣಿಕರ ರೈಲು ಸೇವೆಗಳು ಗಮನಾರ್ಹವಾಗಿ ಕಡಿಮೆಯಾದಾಗ (ಕೋವಿಡ್ -19 ಸಾಂಕ್ರಾಮಿಕದ ಎರಡು ವರ್ಷಗಳ ಹೊರತುಪಡಿಸಿ) ಕಳೆದ ಐದು ವರ್ಷಗಳಲ್ಲಿ ರೈಲು ಅಪಘಾತಗಳಿಗೆ ಸಂಬಂಧಿಸಿದ ಸಾವುಗಳು ಸ್ವಲ್ಪಮಟ್ಟಿಗೆ ಏರಿದೆ.

ಅನುದಾನ ಕಡಿತದಿಂದ ಸುರಕ್ಷತೆಗೆ ಕುತ್ತು

2017 ಮತ್ತು 2021ರ ನಡುವಿನ ರೈಲು ಅಪಘಾತಗಳು ಹೆಚ್ಚಿನದಾಗಿ ಟ್ರ್ಯಾಕ್ ದೋಷಗಳಂತಹ ಯಾಂತ್ರಿಕ ವೈಫಲ್ಯಗಳಿಂದ ಸಂಭವಿಸಿವೆ. ಆದರೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರ ಬಜೆಟ್‌ನಲ್ಲಿ ಟ್ರ್ಯಾಕ್ ನವೀಕರಣಗಳಿಗಾಗಿ ಬಜೆಟ್ ಹಂಚಿಕೆಯಲ್ಲಿ 3,222.4 ಕೋಟಿ ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಭಾರತದ ಮುಖ್ಯ ಲೆಕ್ಕ ಪರಿಶೋಧನಾ ಸಂಸ್ಥೆಯಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತನ್ನ 2022ರ ವರದಿಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ರೈಲುಗಳ ಹಳಿತಪ್ಪುವಿಕೆ ಕುರಿತು ಹೈಲೇಟ್ ಮಾಡಿದೆ. ಕೆಲವು ರೈಲ್ವೆ ವಲಯಗಳು 2017-18 ಮತ್ತು 2019-20 ರ ನಡುವೆ ಈ ಉದ್ದೇಶಕ್ಕಾಗಿ (ಟ್ರ್ಯಾಕ್ ನವೀಕರಣ) ನಿಗದಿಪಡಿಸಿದ ಕೆಲವು ನಿಧಿಯನ್ನೂ ಹಿಂತಿರುಗಿಸಿವೆ.

“ನಿಧಿ ಹಂಚಿಕೆಯಲ್ಲಿನ ಕುಸಿತ ಮತ್ತು ಮಂಜೂರು ಮಾಡಿದ ನಿಧಿಯು ಬಳಕೆಯಾಗದಿರುವುದು ಟ್ರ್ಯಾಕ್ ನವೀಕರಣ ಕಾರ್ಯಗಳು ಸಕಾಲಿಕವಾಗಿ ಪೂರ್ಣಗೊಳ್ಳದಿರುವುದರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

2017-18ರಿಂದ 2020-21ರವರೆಗಿನ 1,129 ಹಳಿತಪ್ಪಿ ತಪ್ಪಿದ ಪ್ರಕರಣಗಳಲ್ಲಿ ಶೇ. 26%ರಷ್ಟು ಪ್ರಕರಣಗಳು ಟ್ರ್ಯಾಕ್ ನವೀಕರಣ ವಿಷಯಕ್ಕೆ ಸಂಬಂಧಿಸಿವೆ ಎಂದು ಲೆಕ್ಕಪರಿಶೋಧಕರು ಹೇಳಿದ್ದಾರೆ.

ಇದನ್ನೂ ಓದಿರಿ: ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

“ರೈಲ್ವೆ ಆಡಳಿತವು ರೈಲ್ವೆಯ ಸ್ಥಾಯಿ ಸಮಿತಿಯ [2016-’17] ಅವಲೋಕನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಟ್ರ್ಯಾಕ್ ನವೀಕರಣಗಳಿಗೆ ಸಂಬಂಧಿಸಿದಂತೆ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಹೆಚ್ಚಿಸುವ ಅಗತ್ಯವಿದೆ” ಎಂದಿದ್ದಾರೆ ಲೆಕ್ಕಪರಿಶೋಧಕರು.

ಹಣಕಾಸಿನ ಕಡಿತದ ಜೊತೆಗೆ, ನೇಮಕಾತಿಯ ಕೊರತೆಯು ಸುರಕ್ಷತೆಯಲ್ಲಿನ ಲೋಪವನ್ನು ಎತ್ತಿ ಹಿಡಿಯುತ್ತದೆ. ಕೇಂದ್ರ ವಲಯದಲ್ಲಿ ಖಾಲಿ ಇರುವ 28,650 ಹುದ್ದೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಸುರಕ್ಷತಾ ಕೆಲಸಗಳಿಗೆ ಸಂಬಂಧಿಸಿವೆ. ವಿವಿಧ ರೀತಿಯ ಇನ್ಸ್‌ಪೆಕ್ಟರ್‌ಗಳು, ಚಾಲಕರು, ರೈಲು ಪರೀಕ್ಷಕರು ಸೇರಿದಂತೆ ಮೊದಲಾದ ಸಿಬ್ಬಂದಿ ಸುರಕ್ಷತಾ ವರ್ಗಕ್ಕೆ ಸೇರುತ್ತಾರೆ.

ದರ ಏರಿಕೆ, ಪರಿಸ್ಥಿತಿ ಹದಗೆಡುವುದೇ?

ಇತ್ತೀಚಿನ ತಿಂಗಳುಗಳಲ್ಲಿ 130 ಹೆಚ್ಚು ರೈಲುಗಳಿಗೆ “ಸೂಪರ್‌ಫಾಸ್ಟ್” ಸ್ಥಾನಮಾನ ನೀಡಿ, ಅವುಗಳ ದರವನ್ನು ಹೆಚ್ಚಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಹೆಚ್ಚಿನ ದರಗಳ ಹೊರತಾಗಿಯೂ, ಸ್ಲೀಪರ್ ಕೋಚ್‌ಗಳು ಸಹ ಕಿಕ್ಕಿರಿದು ತುಂಬಿರುತ್ತವೆ, ಕಳಪೆ ನಿರ್ವಹಣೆ ಇರುತ್ತದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ.

ಶುಕ್ರವಾರ ಅಪಘಾತಕ್ಕೆ ಒಳಗಾದ ರೈಲುಗಳಲ್ಲಿ ಒಂದಾದ ಕೋರಮಂಡಲ್ ಎಕ್ಸ್‌ಪ್ರೆಸ್ ಬಗ್ಗೆಯೇ ಹಲವು ದೂರುಗಳು ಬಂದಿವೆ. ರೈಲು ವಿಳಂಬ ಮತ್ತೊಂದು ಸಮಸ್ಯೆಯಾಗಿದೆ.

ವರದಿ ಕೃಪೆ: ಸ್ಕ್ರಾಲ್.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...