Homeಮುಖಪುಟವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

ವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಕೆಟ್ಟ ರೈಲ್ವೆ ದುರಂತಗಳಲ್ಲಿ ಒಂದಾಗಿದೆ.

ಈ ಅಪಘಾತವು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಭಾರತೀಯ ರೈಲ್ವೆಯನ್ನು ಕಾಡುತ್ತಿರುವ ಇತರ ಸಮಸ್ಯೆಗಳತ್ತಲೂ ಬೊಟ್ಟು ಮಾಡಿದೆ. ಜನಸಂದಣಿ, ರೈಲಿನ ವಿಳಂಬದಂತಹ ಸಮಸ್ಯೆಗಳನ್ನು ಇದು ಎತ್ತಿ ಹಿಡಿದಿದೆ. ಇವುಗಳು ದೀರ್ಘಕಾಲದ ಕಳವಳಕಾರಿ ಸಂಗತಿಗಳಾದರೂ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಇಚ್ಛಾಶಕ್ತಿಯು ಈ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿಲ್ಲ. ಆದರೆ ವಂದೇ ಭಾರತ್‌ ರೈಲಿಗೆ ಒತ್ತು ಸಿಕ್ಕಿದೆ.

ವಂದೇ ಭಾರತ್‌ಗೆ ಒತ್ತು

‘ಎಕನಾಮಿಕ್ ಟೈಮ್ಸ್’ ವರದಿ ಪ್ರಕಾರ ರೈಲ್ವೇ ಇಲಾಖೆಯು ಪ್ರತಿ ವಂದೇ ಭಾರತ್ ರೈಲಿಗಾಗಿ 115 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಇದೇ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ರೈಲುಗಳ ಮೇಲೆ ಸರ್ಕಾರ ಗಮನಹರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಹಲವಾರು ವಂದೇ ಭಾರತ್ ಮಾರ್ಗಗಳನ್ನು ಪ್ರಾರಂಭಿಸಿದ್ದಾರೆ, ರೈಲುಗಳ ಪ್ರಯೋಜನಗಳ ಬಗ್ಗೆ ಪಟ್ಟುಬಿಡದೆ ಪ್ರಚಾರವನ್ನು ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಾಗ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, “ವಂದೇ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸಲು ಹಣವನ್ನು ಬಳಸಲಾಗುವುದು” ಎಂದು ಒತ್ತಿ ಹೇಳಿದರು.

ವಂದೇ ಭಾರತ್ ಟಿಕೆಟ್‌ ದರಗಳು ಭಾರತೀಯ ರೈಲ್ವೆಯ ಸಾಮಾನ್ಯ ರೈಲುಗಳಿಗಿಂತ ಹೆಚ್ಚಾಗಿದೆ. ಈ ರೈಲು 2019-20ರಲ್ಲಿ 808 ಕೋಟಿ ಪ್ರಯಾಣಿಕರನ್ನು ಒತ್ತು ಸಾಗಿಸಿದೆ. ವಿಶೇಷವಾಗಿ ಬಡವರಿಗೆ ಇದು ವೆಚ್ಚದಾಯಕವಾಗಿದೆ.

ಸುರಕ್ಷತಾ ಮಾನದಂಡಗಳಲ್ಲಿ ಕುಸಿತ

ವಂದೇ ಭಾರತ್ ಉತ್ತೇಜನದ ನಡುವೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳು ಗಮನ ಸೆಳೆಯುತ್ತವೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಅಪಘಾತಗಳು ಹೆಚ್ಚಿವೆ ಎಂದು ಈ ವರದಿ ತೋರಿಸುತ್ತದೆ. ರೈಲ್ವೇ ಸಚಿವಾಲಯದ ಸುರಕ್ಷತಾ ಪರಿಶೀಲನಾ ದತ್ತಾಂಶವನ್ನು ಉಲ್ಲೇಖಿಸಿದ ಬಿಸಿನೆಸ್ ಸ್ಟ್ಯಾಂಡರ್ಡ್‌ನಲ್ಲಿನ ವರದಿಯ ಪ್ರಕಾರ, “2022-23ರಲ್ಲಿ 37% (ಅವಘಡ) ಏರಿಕೆಯಾಗಿದೆ.”

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳು ಸುಮಾರು 2.6 ಲಕ್ಷ ಸಾವುಗಳಿಗೆ ಕಾರಣವಾಗಿವೆ ಎಂದು ಅಪರಾಧ ಬ್ಯೂರೋ ಅಂಕಿಅಂಶಗಳು ಹೇಳುತ್ತಿವೆ. ಪ್ರಯಾಣಿಕರ ರೈಲು ಸೇವೆಗಳು ಗಮನಾರ್ಹವಾಗಿ ಕಡಿಮೆಯಾದಾಗ (ಕೋವಿಡ್ -19 ಸಾಂಕ್ರಾಮಿಕದ ಎರಡು ವರ್ಷಗಳ ಹೊರತುಪಡಿಸಿ) ಕಳೆದ ಐದು ವರ್ಷಗಳಲ್ಲಿ ರೈಲು ಅಪಘಾತಗಳಿಗೆ ಸಂಬಂಧಿಸಿದ ಸಾವುಗಳು ಸ್ವಲ್ಪಮಟ್ಟಿಗೆ ಏರಿದೆ.

ಅನುದಾನ ಕಡಿತದಿಂದ ಸುರಕ್ಷತೆಗೆ ಕುತ್ತು

2017 ಮತ್ತು 2021ರ ನಡುವಿನ ರೈಲು ಅಪಘಾತಗಳು ಹೆಚ್ಚಿನದಾಗಿ ಟ್ರ್ಯಾಕ್ ದೋಷಗಳಂತಹ ಯಾಂತ್ರಿಕ ವೈಫಲ್ಯಗಳಿಂದ ಸಂಭವಿಸಿವೆ. ಆದರೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರ ಬಜೆಟ್‌ನಲ್ಲಿ ಟ್ರ್ಯಾಕ್ ನವೀಕರಣಗಳಿಗಾಗಿ ಬಜೆಟ್ ಹಂಚಿಕೆಯಲ್ಲಿ 3,222.4 ಕೋಟಿ ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಭಾರತದ ಮುಖ್ಯ ಲೆಕ್ಕ ಪರಿಶೋಧನಾ ಸಂಸ್ಥೆಯಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತನ್ನ 2022ರ ವರದಿಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ರೈಲುಗಳ ಹಳಿತಪ್ಪುವಿಕೆ ಕುರಿತು ಹೈಲೇಟ್ ಮಾಡಿದೆ. ಕೆಲವು ರೈಲ್ವೆ ವಲಯಗಳು 2017-18 ಮತ್ತು 2019-20 ರ ನಡುವೆ ಈ ಉದ್ದೇಶಕ್ಕಾಗಿ (ಟ್ರ್ಯಾಕ್ ನವೀಕರಣ) ನಿಗದಿಪಡಿಸಿದ ಕೆಲವು ನಿಧಿಯನ್ನೂ ಹಿಂತಿರುಗಿಸಿವೆ.

“ನಿಧಿ ಹಂಚಿಕೆಯಲ್ಲಿನ ಕುಸಿತ ಮತ್ತು ಮಂಜೂರು ಮಾಡಿದ ನಿಧಿಯು ಬಳಕೆಯಾಗದಿರುವುದು ಟ್ರ್ಯಾಕ್ ನವೀಕರಣ ಕಾರ್ಯಗಳು ಸಕಾಲಿಕವಾಗಿ ಪೂರ್ಣಗೊಳ್ಳದಿರುವುದರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

2017-18ರಿಂದ 2020-21ರವರೆಗಿನ 1,129 ಹಳಿತಪ್ಪಿ ತಪ್ಪಿದ ಪ್ರಕರಣಗಳಲ್ಲಿ ಶೇ. 26%ರಷ್ಟು ಪ್ರಕರಣಗಳು ಟ್ರ್ಯಾಕ್ ನವೀಕರಣ ವಿಷಯಕ್ಕೆ ಸಂಬಂಧಿಸಿವೆ ಎಂದು ಲೆಕ್ಕಪರಿಶೋಧಕರು ಹೇಳಿದ್ದಾರೆ.

ಇದನ್ನೂ ಓದಿರಿ: ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

“ರೈಲ್ವೆ ಆಡಳಿತವು ರೈಲ್ವೆಯ ಸ್ಥಾಯಿ ಸಮಿತಿಯ [2016-’17] ಅವಲೋಕನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಟ್ರ್ಯಾಕ್ ನವೀಕರಣಗಳಿಗೆ ಸಂಬಂಧಿಸಿದಂತೆ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಹೆಚ್ಚಿಸುವ ಅಗತ್ಯವಿದೆ” ಎಂದಿದ್ದಾರೆ ಲೆಕ್ಕಪರಿಶೋಧಕರು.

ಹಣಕಾಸಿನ ಕಡಿತದ ಜೊತೆಗೆ, ನೇಮಕಾತಿಯ ಕೊರತೆಯು ಸುರಕ್ಷತೆಯಲ್ಲಿನ ಲೋಪವನ್ನು ಎತ್ತಿ ಹಿಡಿಯುತ್ತದೆ. ಕೇಂದ್ರ ವಲಯದಲ್ಲಿ ಖಾಲಿ ಇರುವ 28,650 ಹುದ್ದೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಸುರಕ್ಷತಾ ಕೆಲಸಗಳಿಗೆ ಸಂಬಂಧಿಸಿವೆ. ವಿವಿಧ ರೀತಿಯ ಇನ್ಸ್‌ಪೆಕ್ಟರ್‌ಗಳು, ಚಾಲಕರು, ರೈಲು ಪರೀಕ್ಷಕರು ಸೇರಿದಂತೆ ಮೊದಲಾದ ಸಿಬ್ಬಂದಿ ಸುರಕ್ಷತಾ ವರ್ಗಕ್ಕೆ ಸೇರುತ್ತಾರೆ.

ದರ ಏರಿಕೆ, ಪರಿಸ್ಥಿತಿ ಹದಗೆಡುವುದೇ?

ಇತ್ತೀಚಿನ ತಿಂಗಳುಗಳಲ್ಲಿ 130 ಹೆಚ್ಚು ರೈಲುಗಳಿಗೆ “ಸೂಪರ್‌ಫಾಸ್ಟ್” ಸ್ಥಾನಮಾನ ನೀಡಿ, ಅವುಗಳ ದರವನ್ನು ಹೆಚ್ಚಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಹೆಚ್ಚಿನ ದರಗಳ ಹೊರತಾಗಿಯೂ, ಸ್ಲೀಪರ್ ಕೋಚ್‌ಗಳು ಸಹ ಕಿಕ್ಕಿರಿದು ತುಂಬಿರುತ್ತವೆ, ಕಳಪೆ ನಿರ್ವಹಣೆ ಇರುತ್ತದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ.

ಶುಕ್ರವಾರ ಅಪಘಾತಕ್ಕೆ ಒಳಗಾದ ರೈಲುಗಳಲ್ಲಿ ಒಂದಾದ ಕೋರಮಂಡಲ್ ಎಕ್ಸ್‌ಪ್ರೆಸ್ ಬಗ್ಗೆಯೇ ಹಲವು ದೂರುಗಳು ಬಂದಿವೆ. ರೈಲು ವಿಳಂಬ ಮತ್ತೊಂದು ಸಮಸ್ಯೆಯಾಗಿದೆ.

ವರದಿ ಕೃಪೆ: ಸ್ಕ್ರಾಲ್.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...