Homeಮುಖಪುಟವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

ವಂದೇ ಭಾರತ್‌ಗೆ ಒತ್ತು ನೀಡಿ ಉಳಿದ ರೈಲುಗಳನ್ನು ಕಡೆಗಣಿಸುತ್ತಿದ್ದಾರೆಯೇ ಮೋದಿ?

- Advertisement -
- Advertisement -

ಒಡಿಶಾದಲ್ಲಿ ಶುಕ್ರವಾರ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 288 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಇದು ಭಾರತದ ಅತ್ಯಂತ ಕೆಟ್ಟ ರೈಲ್ವೆ ದುರಂತಗಳಲ್ಲಿ ಒಂದಾಗಿದೆ.

ಈ ಅಪಘಾತವು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮಾತ್ರವಲ್ಲದೆ, ಭಾರತೀಯ ರೈಲ್ವೆಯನ್ನು ಕಾಡುತ್ತಿರುವ ಇತರ ಸಮಸ್ಯೆಗಳತ್ತಲೂ ಬೊಟ್ಟು ಮಾಡಿದೆ. ಜನಸಂದಣಿ, ರೈಲಿನ ವಿಳಂಬದಂತಹ ಸಮಸ್ಯೆಗಳನ್ನು ಇದು ಎತ್ತಿ ಹಿಡಿದಿದೆ. ಇವುಗಳು ದೀರ್ಘಕಾಲದ ಕಳವಳಕಾರಿ ಸಂಗತಿಗಳಾದರೂ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಇಚ್ಛಾಶಕ್ತಿಯು ಈ ಸಮಸ್ಯೆಗಳ ಮೇಲೆ ಕೇಂದ್ರೀಕೃತವಾಗಿಲ್ಲ. ಆದರೆ ವಂದೇ ಭಾರತ್‌ ರೈಲಿಗೆ ಒತ್ತು ಸಿಕ್ಕಿದೆ.

ವಂದೇ ಭಾರತ್‌ಗೆ ಒತ್ತು

‘ಎಕನಾಮಿಕ್ ಟೈಮ್ಸ್’ ವರದಿ ಪ್ರಕಾರ ರೈಲ್ವೇ ಇಲಾಖೆಯು ಪ್ರತಿ ವಂದೇ ಭಾರತ್ ರೈಲಿಗಾಗಿ 115 ಕೋಟಿ ರೂಪಾಯಿಗಳನ್ನು ಪಾವತಿಸುತ್ತಿದೆ. ಇದೇ ಸಮಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ರೈಲುಗಳ ಮೇಲೆ ಸರ್ಕಾರ ಗಮನಹರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರೇ ಸ್ವತಃ ಹಲವಾರು ವಂದೇ ಭಾರತ್ ಮಾರ್ಗಗಳನ್ನು ಪ್ರಾರಂಭಿಸಿದ್ದಾರೆ, ರೈಲುಗಳ ಪ್ರಯೋಜನಗಳ ಬಗ್ಗೆ ಪಟ್ಟುಬಿಡದೆ ಪ್ರಚಾರವನ್ನು ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 2.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಾಗ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, “ವಂದೇ ಭಾರತ್ ರೈಲುಗಳ ಉತ್ಪಾದನೆಯನ್ನು ಹೆಚ್ಚಿಸಲು ಹಣವನ್ನು ಬಳಸಲಾಗುವುದು” ಎಂದು ಒತ್ತಿ ಹೇಳಿದರು.

ವಂದೇ ಭಾರತ್ ಟಿಕೆಟ್‌ ದರಗಳು ಭಾರತೀಯ ರೈಲ್ವೆಯ ಸಾಮಾನ್ಯ ರೈಲುಗಳಿಗಿಂತ ಹೆಚ್ಚಾಗಿದೆ. ಈ ರೈಲು 2019-20ರಲ್ಲಿ 808 ಕೋಟಿ ಪ್ರಯಾಣಿಕರನ್ನು ಒತ್ತು ಸಾಗಿಸಿದೆ. ವಿಶೇಷವಾಗಿ ಬಡವರಿಗೆ ಇದು ವೆಚ್ಚದಾಯಕವಾಗಿದೆ.

ಸುರಕ್ಷತಾ ಮಾನದಂಡಗಳಲ್ಲಿ ಕುಸಿತ

ವಂದೇ ಭಾರತ್ ಉತ್ತೇಜನದ ನಡುವೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ಅಂಕಿಅಂಶಗಳು ಗಮನ ಸೆಳೆಯುತ್ತವೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಅಪಘಾತಗಳು ಹೆಚ್ಚಿವೆ ಎಂದು ಈ ವರದಿ ತೋರಿಸುತ್ತದೆ. ರೈಲ್ವೇ ಸಚಿವಾಲಯದ ಸುರಕ್ಷತಾ ಪರಿಶೀಲನಾ ದತ್ತಾಂಶವನ್ನು ಉಲ್ಲೇಖಿಸಿದ ಬಿಸಿನೆಸ್ ಸ್ಟ್ಯಾಂಡರ್ಡ್‌ನಲ್ಲಿನ ವರದಿಯ ಪ್ರಕಾರ, “2022-23ರಲ್ಲಿ 37% (ಅವಘಡ) ಏರಿಕೆಯಾಗಿದೆ.”

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತಗಳು ಸುಮಾರು 2.6 ಲಕ್ಷ ಸಾವುಗಳಿಗೆ ಕಾರಣವಾಗಿವೆ ಎಂದು ಅಪರಾಧ ಬ್ಯೂರೋ ಅಂಕಿಅಂಶಗಳು ಹೇಳುತ್ತಿವೆ. ಪ್ರಯಾಣಿಕರ ರೈಲು ಸೇವೆಗಳು ಗಮನಾರ್ಹವಾಗಿ ಕಡಿಮೆಯಾದಾಗ (ಕೋವಿಡ್ -19 ಸಾಂಕ್ರಾಮಿಕದ ಎರಡು ವರ್ಷಗಳ ಹೊರತುಪಡಿಸಿ) ಕಳೆದ ಐದು ವರ್ಷಗಳಲ್ಲಿ ರೈಲು ಅಪಘಾತಗಳಿಗೆ ಸಂಬಂಧಿಸಿದ ಸಾವುಗಳು ಸ್ವಲ್ಪಮಟ್ಟಿಗೆ ಏರಿದೆ.

ಅನುದಾನ ಕಡಿತದಿಂದ ಸುರಕ್ಷತೆಗೆ ಕುತ್ತು

2017 ಮತ್ತು 2021ರ ನಡುವಿನ ರೈಲು ಅಪಘಾತಗಳು ಹೆಚ್ಚಿನದಾಗಿ ಟ್ರ್ಯಾಕ್ ದೋಷಗಳಂತಹ ಯಾಂತ್ರಿಕ ವೈಫಲ್ಯಗಳಿಂದ ಸಂಭವಿಸಿವೆ. ಆದರೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 2022-23ರ ಬಜೆಟ್‌ನಲ್ಲಿ ಟ್ರ್ಯಾಕ್ ನವೀಕರಣಗಳಿಗಾಗಿ ಬಜೆಟ್ ಹಂಚಿಕೆಯಲ್ಲಿ 3,222.4 ಕೋಟಿ ರೂ.ಗಳಷ್ಟು ಕಡಿತಗೊಳಿಸಲಾಗಿದೆ.

ಭಾರತದ ಮುಖ್ಯ ಲೆಕ್ಕ ಪರಿಶೋಧನಾ ಸಂಸ್ಥೆಯಾದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ತನ್ನ 2022ರ ವರದಿಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ರೈಲುಗಳ ಹಳಿತಪ್ಪುವಿಕೆ ಕುರಿತು ಹೈಲೇಟ್ ಮಾಡಿದೆ. ಕೆಲವು ರೈಲ್ವೆ ವಲಯಗಳು 2017-18 ಮತ್ತು 2019-20 ರ ನಡುವೆ ಈ ಉದ್ದೇಶಕ್ಕಾಗಿ (ಟ್ರ್ಯಾಕ್ ನವೀಕರಣ) ನಿಗದಿಪಡಿಸಿದ ಕೆಲವು ನಿಧಿಯನ್ನೂ ಹಿಂತಿರುಗಿಸಿವೆ.

“ನಿಧಿ ಹಂಚಿಕೆಯಲ್ಲಿನ ಕುಸಿತ ಮತ್ತು ಮಂಜೂರು ಮಾಡಿದ ನಿಧಿಯು ಬಳಕೆಯಾಗದಿರುವುದು ಟ್ರ್ಯಾಕ್ ನವೀಕರಣ ಕಾರ್ಯಗಳು ಸಕಾಲಿಕವಾಗಿ ಪೂರ್ಣಗೊಳ್ಳದಿರುವುದರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಲೆಕ್ಕಪರಿಶೋಧಕರು ಎಚ್ಚರಿಸಿದ್ದಾರೆ.

2017-18ರಿಂದ 2020-21ರವರೆಗಿನ 1,129 ಹಳಿತಪ್ಪಿ ತಪ್ಪಿದ ಪ್ರಕರಣಗಳಲ್ಲಿ ಶೇ. 26%ರಷ್ಟು ಪ್ರಕರಣಗಳು ಟ್ರ್ಯಾಕ್ ನವೀಕರಣ ವಿಷಯಕ್ಕೆ ಸಂಬಂಧಿಸಿವೆ ಎಂದು ಲೆಕ್ಕಪರಿಶೋಧಕರು ಹೇಳಿದ್ದಾರೆ.

ಇದನ್ನೂ ಓದಿರಿ: ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

“ರೈಲ್ವೆ ಆಡಳಿತವು ರೈಲ್ವೆಯ ಸ್ಥಾಯಿ ಸಮಿತಿಯ [2016-’17] ಅವಲೋಕನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ವಿಫಲವಾಗಿದೆ. ಟ್ರ್ಯಾಕ್ ನವೀಕರಣಗಳಿಗೆ ಸಂಬಂಧಿಸಿದಂತೆ ಭೌತಿಕ ಮತ್ತು ಆರ್ಥಿಕ ಗುರಿಗಳನ್ನು ಹೆಚ್ಚಿಸುವ ಅಗತ್ಯವಿದೆ” ಎಂದಿದ್ದಾರೆ ಲೆಕ್ಕಪರಿಶೋಧಕರು.

ಹಣಕಾಸಿನ ಕಡಿತದ ಜೊತೆಗೆ, ನೇಮಕಾತಿಯ ಕೊರತೆಯು ಸುರಕ್ಷತೆಯಲ್ಲಿನ ಲೋಪವನ್ನು ಎತ್ತಿ ಹಿಡಿಯುತ್ತದೆ. ಕೇಂದ್ರ ವಲಯದಲ್ಲಿ ಖಾಲಿ ಇರುವ 28,650 ಹುದ್ದೆಗಳಲ್ಲಿ ಅರ್ಧದಷ್ಟು ಹುದ್ದೆಗಳು ಸುರಕ್ಷತಾ ಕೆಲಸಗಳಿಗೆ ಸಂಬಂಧಿಸಿವೆ. ವಿವಿಧ ರೀತಿಯ ಇನ್ಸ್‌ಪೆಕ್ಟರ್‌ಗಳು, ಚಾಲಕರು, ರೈಲು ಪರೀಕ್ಷಕರು ಸೇರಿದಂತೆ ಮೊದಲಾದ ಸಿಬ್ಬಂದಿ ಸುರಕ್ಷತಾ ವರ್ಗಕ್ಕೆ ಸೇರುತ್ತಾರೆ.

ದರ ಏರಿಕೆ, ಪರಿಸ್ಥಿತಿ ಹದಗೆಡುವುದೇ?

ಇತ್ತೀಚಿನ ತಿಂಗಳುಗಳಲ್ಲಿ 130 ಹೆಚ್ಚು ರೈಲುಗಳಿಗೆ “ಸೂಪರ್‌ಫಾಸ್ಟ್” ಸ್ಥಾನಮಾನ ನೀಡಿ, ಅವುಗಳ ದರವನ್ನು ಹೆಚ್ಚಿಸಲಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. ಹೆಚ್ಚಿನ ದರಗಳ ಹೊರತಾಗಿಯೂ, ಸ್ಲೀಪರ್ ಕೋಚ್‌ಗಳು ಸಹ ಕಿಕ್ಕಿರಿದು ತುಂಬಿರುತ್ತವೆ, ಕಳಪೆ ನಿರ್ವಹಣೆ ಇರುತ್ತದೆ ಎಂದು ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ.

ಶುಕ್ರವಾರ ಅಪಘಾತಕ್ಕೆ ಒಳಗಾದ ರೈಲುಗಳಲ್ಲಿ ಒಂದಾದ ಕೋರಮಂಡಲ್ ಎಕ್ಸ್‌ಪ್ರೆಸ್ ಬಗ್ಗೆಯೇ ಹಲವು ದೂರುಗಳು ಬಂದಿವೆ. ರೈಲು ವಿಳಂಬ ಮತ್ತೊಂದು ಸಮಸ್ಯೆಯಾಗಿದೆ.

ವರದಿ ಕೃಪೆ: ಸ್ಕ್ರಾಲ್.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...