Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

ರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅವರು ಇಂದು ಟ್ವಿಟ್ಟರ್‌ನಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರನ ವಿರುದ್ಧ ದಾಳಿ ನಡೆಸಿದ್ದು, ಈ ಕುರಿತು ನರೇಂದ್ರ ಮೋದಿಯವರೇಕೆ ಮಾತನಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?” ಎಂದು ಎಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ ಎಂದು ಅವರು ಕಿಡಿಕಾರಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದಿದ್ದಾರೆ.

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ನರೇಂದ್ರ ಮೋದಿಯವರು ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...