Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

ರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?: HDK ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅವರು ಇಂದು ಟ್ವಿಟ್ಟರ್‌ನಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರನ ವಿರುದ್ಧ ದಾಳಿ ನಡೆಸಿದ್ದು, ಈ ಕುರಿತು ನರೇಂದ್ರ ಮೋದಿಯವರೇಕೆ ಮಾತನಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ?” ಎಂದು ಎಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಸರ್ಕಾರದಲ್ಲೇ ‘ಏಕಗವಾಕ್ಷಿ’ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ ಎಂದು ಅವರು ಕಿಡಿಕಾರಿದ್ದಾರೆ.

ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‌ವೆಲ್ ಕೊರೆಸಬೇಕಿದ್ದರೆ ₹1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‌ಗಳ ದರ ದುಪ್ಪಟ್ಟಾಗಿದೆ, ಮೋಟರ್‌ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್‌ ಸೆಟ್‌ಗಳಿಗೆ ರೈತರಾದವರೇ ಶೇ. 18ರಷ್ಟು ಜಿಎಸ್‌ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದಿದ್ದಾರೆ.

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ನರೇಂದ್ರ ಮೋದಿಯವರು ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...