Homeಅಂಕಣಗಳುಮುರುಘಾ ಶರಣರ ಮರುಳು ಮಾತು ನಿಜವೆ?

ಮುರುಘಾ ಶರಣರ ಮರುಳು ಮಾತು ನಿಜವೆ?

- Advertisement -
- Advertisement -

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ ಕುಳಿತು ಸಿದ್ದರಾಮೋತ್ಸವ ನೋಡಿ, ಏನೂ ಹೇಳಲಾಗದ ಏನೂ ಮಾಡಲಾಗದ ಅಸಹಾಯಕತೆ ಚಡಪಡಿಕೆ ಪ್ರದರ್ಶಿಸಿದರು. ಕಾರಣ ಅವರೀಗ ಮುಖ್ಯಮಂತ್ರಿಯಲ್ಲಿ. ವಿರೋಧಪಕ್ಷದ ನಾಯಕರೂ ಅಲ್ಲ. ತಮ್ಮ ಅಧಿಕಾರಾವಧಿಯ ಮಧ್ಯದಲ್ಲೇ ಅವರನ್ನು ಕೆಳಗಿಳಿಸಲಾಯ್ತು. ಇಳಿಯುವಾಗಲಾದರೂ ಇಂತಹದೊಂದು ಎಡೂರು ಜಾತ್ರೆ ಮಾಡಿಬಿಡಬಹುದಿತ್ತು. ಆ ಜಾತ್ರೆಗೆ ಸರಕಾರದಿಂದ ಭಿಕ್ಷೆ ಪಡೆದ ಹಲವು ಜಗತ್ತಿನ ಜಗದ್ಗುರುಗಳ ಪರಿಷೆಯೇ ನೆರೆಯುತ್ತಿತ್ತು. ಸಹಜವಾಗಿ ಆ ಮಠಗಳ ಭಕ್ತಾದಿಗಳು, ಸರಕಾರಿ ಮತ್ತು ಖಾಸಗಿಯವರ ಸುವಿಹಾರಿ ಬಸ್ಸಿನಲ್ಲಿ ಬಂದಿಳಿಯುತ್ತಿದ್ದರು. ಅವರಿಗೆಲ್ಲಾ ಹೋಳಿಗೆ ಶೀಖರಣೆ ಊಟ ಹಾಕಿಕಳಿಸಬಹುದಿತ್ತು. ಪೀಠ ಹಿಡಿದು ಕುಳಿತಿರುವ ಸಿರಿವಂತ ಸ್ವಾಮಿಗಳು, ತಮ್ಮ ಎಂದಿನ ನಿಷ್ಠುರ ಮಾತುಗಳನ್ನು ಝಳಪಿಸಿ ಎಡೂರಪ್ಪನವರು ಎಂದಿಗೂ ಸ್ಥಾನ ಬಿಟ್ಟುಕೊಡಬಾರದು, ನನ್ನನ್ನಾದರೂ ನೋಡಿ ಅವರು ಧೈರ್ಯ ತುಂಬಿಕೊಳ್ಳಬೇಕೆಂದು ಅಪ್ಪಣೆ ಕೊಡಿಸಿದರೆ, ಇನ್ನ ಮುರುಘಾ ಮಠದವರು ಎಡೂರಪ್ಪನವರು ಎದೆಗುಂದಬಾರದು, ಸುತ್ತ ಮುತ್ತ ಶತ್ರುಗಳಿರುವಾಗ ಧೈರ್ಯದಿಂದ ರಾಜ್ಯವನ್ನಾಳಬೇಕು ಎಂದು ಹೇಳೇ ಹೇಳುತ್ತಿದ್ದರಂತಲ್ಲಾ, ಥೂತ್ತೆರಿ.

****

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಬಂದಿದ್ದ ರಾಹುಲಗಾಂಧಿಯನ್ನು ಒಂದರ್ಥದಲ್ಲಿ ಹೈಜಾಕ್ ಮಾಡಿದ ಡಿ.ಕೆ. ಶಿವಕುಮಾರ್ ತಾವು ಮುಂದೆ ಮುಖ್ಯಮಂತ್ರಿಯಾಗಲು ಶರಣ ಸಮೂಹದ ಓಟು ಬೇಕಾದ್ದರಿಂದ, ತಂತ್ರಗಾರಿಕೆ ನಡೆಸಿ, ಅದರಂತೆ ಮುರುಘಾ ಶರಣರಿಂದ ರಾಹುಲಗಾಂಧಿಗೆ ಲಿಂಗದೀಕ್ಷೆ ಕೊಡಿಸೇಬಿಟ್ಟರಂತಲ್ಲಾ. ಮುಖ್ಯವಾಗಿ ದಯವೇ ಧರ್ಮದ ಮೂಲವೆಂದು ಒಪ್ಪಿದವರೆಲ್ಲಾ ಬಸವಣ್ಣನ ಅನುಯಾಯಿಗಳಾಗುತ್ತಾರೆ. ಅವರಿಗೆ ಲಿಂಗದೀಕ್ಷೆಯ ಅಗತ್ಯವೇ ಇರುವುದಿಲ್ಲ. ಇಂತಹ ಸೂಕ್ಷ್ಮ ವಿಚಾರ ಮುರುಘಾ ಶರಣರಿಗೆ ಹೊಳೆಯಬೇಕಿತ್ತು. ನಮ್ಮ ಮುರುಘಾ ಶರಣರು ಬೆಂಬಲಿಸಿದ ಎಡೂರಪ್ಪ ಶರಣ. ಬಸವ ತತ್ವಪ್ರತಿಪಾದಕರಾಗಬೇಕಿತ್ತು. ಆದರೇ ಮಾಡಿದ್ದೆಲ್ಲಾ ಪುರೋಹಿತ ಶಾಹಿಗಳು ಹೇಳಿದ ಕೆಲಸವನ್ನು. ಅವರ ನಂತರ ಮುಖ್ಯಮಂತ್ರಿಯಾದ ಸಾದಲಿಂಗಾಯಿತರ ಬಸವರಾಜ ಬೊಮ್ಮಾಯಿ ಮತ್ತೊಬ್ಬ ಶರಣ. ಲಿಂಗಕಟ್ಟಿಗೊಂಡು ಇವರು ಮಾಡಿದ ಆಡಳಿತವೆಲ್ಲಾ ಕೇಶವಕೃಪಾದ ಆಜ್ಞೆಯ ಪರಿಪಾಲನೆ; ಹಿಜಾಬು, ನಮಾಜು, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಇತ್ಯಾದಿ ಕೇಶವ ಕೃಪದ ಮನೆಹಾಳು ಕೃತ್ಯಗಳ ಜಾರಿ ಮತ್ತು ಸಮರ್ಥನೆ; ಇದ ಒಬ್ಬ ಲಿಂಗದೀಕ್ಷೆಯ ಶರಣನ ಆಡಳಿತದಲ್ಲಿ ಜರುಗಿದ ದುಸ್ವಪ್ನ. ಸಿದ್ದರಾಮಯ್ಯ ಹುಟ್ಟಿನಿಂದ ಶರಣನಲ್ಲ. ಆದರೆ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಿದ್ದು ಬಸವ ಜಯಂತಿಯಂದು. ನಂತರ ಮಾಡಿದ್ದು ಶರಣರ ದಾಸೋಹ ಕಲ್ಪನೆಯ ಅನನಭಾಗ್ಯ ಮುಂತಾದ ಕೆಲಸ. ಹಾಗೆ ನೋಡಿದರೆ, ಲಿಂಗದೀಕ್ಷೆಗೂ ಶರಣ ತತ್ವ ಪ್ರತಿಪಾದನೆಗೂ ತಾಳಮೇಳವೇ ಇಲ್ಲವೆಂಬುದು ಮುರುಘಾ ಶರಣರಿಗೆ ಹೊಳೆಯಬೇಕಿತ್ತಂತಲ್ಲಾ, ಥೂತ್ತೆರಿ.

*****

ಚಿತ್ರದುರ್ಗದ ಮಠಕ್ಕೆ ಬಂದ ರಾಹುಲಗಾಂಧಿಯನ್ನ ಹಿಡಿದುಕೊಂಡ ಮುರುಘಾ ಶರಣರು, ಮೋದಿ ಒಬ್ಬ ಸಮರ್ಥನಾಯಕ, ಸದ್ಯ ನಮ್ಮ ಸುತ್ತಲೂ ಶತ್ರು ರಾಷ್ಟ್ರಗಳಿದ್ದು, ಅವುಗಳಿಂದ ದೇಶವನ್ನ ರಕ್ಷಿಸಬೇಕಾದರೆ ಮೋದಿಯಂತಹ ಸಮರ್ಥ ನಾಯಕ ಬೇಕೆಂದು ರಾಹುಲಗಾಂಧಿಗೇ ಹೇಳಿದರಂತಲ್ಲಾ. ಆಗ ಮುಗ್ದ ಬಾಲಕನಂತೆ ಮುರುಘಾ ಶರಣರ ಮುಖ ನೋಡಿದ ರಾಹುಲಗಾಂಧಿ, ಶರಣರ ಜ್ಞಾನಕ್ಕೆ ಮರುಕ ಪಟ್ಟಿರಬಹುದಲ್ಲವೆ. ಮುಖ್ಯವಾಗಿ ಕಾಮನ್ ಸೆನ್ಸ್ ಏಂಬುದೊಂದು ಮನಸ್ಥಿತಿ ಇದ್ದಿದ್ದರೆ, ಮೋದಿಯ ಸಮರ್ಥ ನಾಯಕತ್ವದ ಅರಿವಾಗಬೇಕಿತ್ತು. ಚೀನಾ ಅತಿಕ್ರಮಿಸಿರುವ ವಿಷಯವನ್ನು ದೇಶದ ಮುಂದೆ ಅವರು ಈವರೆಗೂ ಹೇಳಿಲ್ಲ. ಕೃಷಿ ಕಾಯ್ದೆ ಜಾರಿಮಾಡಿದ್ದಕ್ಕಾಗಿ ಒಂದು ವರ್ಷ ನಡೆದ ರೈತರ ಧರಣಿಯಲ್ಲಿ ಏಳುನೂರ ರೈತರು ಹತರಾದರು. ಆ ಬಗ್ಗೆ ಮೋದಿ ಈವರೆಗೂ ಪ್ರತಿಕ್ರಿಯಿಸಿಲ್ಲ. ಹೀಗಿರುವಾಗ, ಮೋದಿ ಒಬ್ಬ ಸಮರ್ಥ ಪ್ರಧಾನಿ ಎಂಬ ಅಭಿಪ್ರಾಯವನ್ನು ಹೊಂದಿರುವ ಮುರುಘಾ ಶರಣರು ಚಿತ್ರದುರ್ಗದಾಚೆಗೆ ದೇಶದ ಆಗುಹೋಗುಗಳನ್ನು ಕಣ್ಣುತೆರೆದು ನೋಡಿದರೆ ನಿಜದ ಅರಿವಾಗಬಹುದು ಎಂಬ ಅಭಿಪ್ರಾಯ ರಾಹುಲಗಾಂಧಿಗೆ ಹೊಳೆದಿರಬಹುದಂತಲ್ಲಾ, ಥೂತ್ತೆರಿ.

****

ಇನ್ನ ನಮ್ಮೂರ ಕೆರೆ ಕೋಡಿಯಲ್ಲಿ ಕುಳಿತಿರುವ ಕಾಲಜ್ಞಾನಿ ಸ್ವಾಮೀಜಿಗಳು ಎಂದಿನಂತೆ ಮತ್ತೆ ಜನಗಳನ್ನು ಹೆದರಿಸಿದ್ದಾರೆ. ದುರ್ದೈವವೆಂದರೆ ಅವರ ಮಾತುಗಳಿಗೆ ಯಾರೂ ಹೆದರಿದಂತೆ ಕಾಣದೇ ಇರುವುದರಿಂದ ಮತ್ತೆ ಗುಡಾಗಿದ್ದಾರಂತಲ್ಲಾ. ಆ ಗುಡುಗಿನ ಶಬ್ದ ಯಾವುದೆಂದರೆ ಕರ್ನಾಟಕ ಅತಿವೃಷ್ಠಿಯಿಂದ ಕಂಗೆಟ್ಟು ಹೋಗಲಿದೆ, ದಟ್ಟೈಸಿದ ಮೋಡದಿಂದ ಧಾರಾಕಾರ ಮಳೆಯಾಗುತ್ತದೆ. ಈ ಮಳೆ ದೆಸೆಯಿಂದ ಕೆರೆಕಟ್ಟಿ ತುಂಬಿ ಹರಿಯುತ್ತವೆ. ಆದಕಾರಣ ಕೆರೆಗೆ ಬಿಟ್ಟು ಸಾಕುತ್ತಿರುವ ಮೀನುಗಳು ಕೊಚ್ಚಿಕೊಂಡು ಹೋಗಿ ಕಂಡವರ ಪಾಲಾಗುತ್ತವೆ. ಕೆರೆ ಏರಿ ಹೊಡೆಯುತ್ತದೆ. ಮನೆಗಳ ಗೋಡೆ ಕುಸಿಯುತ್ತದೆ. ಗೋಡೆ ಕೆಳಗೆ ಸಿಕ್ಕವರು ಸತ್ತುಹೋಗುತ್ತಾರೆ. ಜಾನುವಾರುಗಳು ನೀರಲ್ಲಿ ತೇಲುತ್ತ ಹೋಗುತ್ತವೆ. ರಸ್ತೆಯ ಬದಿಯ ಮರಗಳು ರಸ್ತೆಗೇ ಉರುಳುತ್ತವೆ. ಸಂಚಾರಕ್ಕೆ ಅಡ್ಡಿಯಾಗುತ್ತದೆ. ದೇವಸ್ಥಾನ ಮಠಗಳಿಗೆ ಹೋಗುವ ಜನಗಳಿಗೆ ಅನಾನುಕೂಲವಾಗಿ ಪೂಜೆಪುನಸ್ಕಾರಗಳು ನಿಂತುಹೋಗುತ್ತವೆ. ಮಳೆಯಿಂದ ಬೆಳೆಗೆ ಹಾನಿಯಾಗುತ್ತದೆ. ಬೆಳೆಹಾನಿಯಿಂದ ಮಳೆ ಹೆಚ್ಚಾಗುತ್ತದೆ. ದಿನಕ್ಕೊಂದು ಕೊಲೆಯಾಗುತ್ತದೆ. ಕಳ್ಳತನ ಜಾಸ್ತಿಯಾಗುತ್ತದೆ. ಸರಕಾರದ ತನಿಖೆ ನಾಟಕವಾಗುತ್ತದೆ. ರಾಜ್ಯ ಆಳುವ ನಾಯಕನಿಗೆ ಅಪಾಯವಿದೆ. ಅವರಿಗೆ ಅನಾರೋಗ್ಯವುಂಟಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡು ಏನೇನೂ ಮಾತನಾಡುತ್ತಾರೆ, ಇದಕ್ಕೆ ಪರಿಹಾರವಿದೆ. ಈ ಆಷಾಢ ಮಾಸ ಮುಗಿದ ನಂತರ ಮಠಕ್ಕೆ ಒಂದುನೂರು ದೀಪ ಹಚ್ಚಿ ದಾಸೋಹನಡೆಸಿ ಗುರುವರ್ಯರ ಪಾದ ಹಿಡಿದರೆ ಎಲ್ಲವೂ ಸಾಂಗವಾಗಿ, ಅವರು ನಿರಾತಂಕವಾಗಿ ರಾಜ್ಯದಾಳಬಹುದೆಂಬ ಸಂದೇಶ ಹೊgಟಿದೆಯಂತಲ್ಲಾ, ಥೂಥೂ ಥೂತ್ತೆರಿ.


ಇದನ್ನೂ ಓದಿ: ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...