Homeಅಂಕಣಗಳುಮುರುಘಾ ಶರಣರ ಮರುಳು ಮಾತು ನಿಜವೆ?

ಮುರುಘಾ ಶರಣರ ಮರುಳು ಮಾತು ನಿಜವೆ?

- Advertisement -
- Advertisement -

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ ಕುಳಿತು ಸಿದ್ದರಾಮೋತ್ಸವ ನೋಡಿ, ಏನೂ ಹೇಳಲಾಗದ ಏನೂ ಮಾಡಲಾಗದ ಅಸಹಾಯಕತೆ ಚಡಪಡಿಕೆ ಪ್ರದರ್ಶಿಸಿದರು. ಕಾರಣ ಅವರೀಗ ಮುಖ್ಯಮಂತ್ರಿಯಲ್ಲಿ. ವಿರೋಧಪಕ್ಷದ ನಾಯಕರೂ ಅಲ್ಲ. ತಮ್ಮ ಅಧಿಕಾರಾವಧಿಯ ಮಧ್ಯದಲ್ಲೇ ಅವರನ್ನು ಕೆಳಗಿಳಿಸಲಾಯ್ತು. ಇಳಿಯುವಾಗಲಾದರೂ ಇಂತಹದೊಂದು ಎಡೂರು ಜಾತ್ರೆ ಮಾಡಿಬಿಡಬಹುದಿತ್ತು. ಆ ಜಾತ್ರೆಗೆ ಸರಕಾರದಿಂದ ಭಿಕ್ಷೆ ಪಡೆದ ಹಲವು ಜಗತ್ತಿನ ಜಗದ್ಗುರುಗಳ ಪರಿಷೆಯೇ ನೆರೆಯುತ್ತಿತ್ತು. ಸಹಜವಾಗಿ ಆ ಮಠಗಳ ಭಕ್ತಾದಿಗಳು, ಸರಕಾರಿ ಮತ್ತು ಖಾಸಗಿಯವರ ಸುವಿಹಾರಿ ಬಸ್ಸಿನಲ್ಲಿ ಬಂದಿಳಿಯುತ್ತಿದ್ದರು. ಅವರಿಗೆಲ್ಲಾ ಹೋಳಿಗೆ ಶೀಖರಣೆ ಊಟ ಹಾಕಿಕಳಿಸಬಹುದಿತ್ತು. ಪೀಠ ಹಿಡಿದು ಕುಳಿತಿರುವ ಸಿರಿವಂತ ಸ್ವಾಮಿಗಳು, ತಮ್ಮ ಎಂದಿನ ನಿಷ್ಠುರ ಮಾತುಗಳನ್ನು ಝಳಪಿಸಿ ಎಡೂರಪ್ಪನವರು ಎಂದಿಗೂ ಸ್ಥಾನ ಬಿಟ್ಟುಕೊಡಬಾರದು, ನನ್ನನ್ನಾದರೂ ನೋಡಿ ಅವರು ಧೈರ್ಯ ತುಂಬಿಕೊಳ್ಳಬೇಕೆಂದು ಅಪ್ಪಣೆ ಕೊಡಿಸಿದರೆ, ಇನ್ನ ಮುರುಘಾ ಮಠದವರು ಎಡೂರಪ್ಪನವರು ಎದೆಗುಂದಬಾರದು, ಸುತ್ತ ಮುತ್ತ ಶತ್ರುಗಳಿರುವಾಗ ಧೈರ್ಯದಿಂದ ರಾಜ್ಯವನ್ನಾಳಬೇಕು ಎಂದು ಹೇಳೇ ಹೇಳುತ್ತಿದ್ದರಂತಲ್ಲಾ, ಥೂತ್ತೆರಿ.

****

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಬಂದಿದ್ದ ರಾಹುಲಗಾಂಧಿಯನ್ನು ಒಂದರ್ಥದಲ್ಲಿ ಹೈಜಾಕ್ ಮಾಡಿದ ಡಿ.ಕೆ. ಶಿವಕುಮಾರ್ ತಾವು ಮುಂದೆ ಮುಖ್ಯಮಂತ್ರಿಯಾಗಲು ಶರಣ ಸಮೂಹದ ಓಟು ಬೇಕಾದ್ದರಿಂದ, ತಂತ್ರಗಾರಿಕೆ ನಡೆಸಿ, ಅದರಂತೆ ಮುರುಘಾ ಶರಣರಿಂದ ರಾಹುಲಗಾಂಧಿಗೆ ಲಿಂಗದೀಕ್ಷೆ ಕೊಡಿಸೇಬಿಟ್ಟರಂತಲ್ಲಾ. ಮುಖ್ಯವಾಗಿ ದಯವೇ ಧರ್ಮದ ಮೂಲವೆಂದು ಒಪ್ಪಿದವರೆಲ್ಲಾ ಬಸವಣ್ಣನ ಅನುಯಾಯಿಗಳಾಗುತ್ತಾರೆ. ಅವರಿಗೆ ಲಿಂಗದೀಕ್ಷೆಯ ಅಗತ್ಯವೇ ಇರುವುದಿಲ್ಲ. ಇಂತಹ ಸೂಕ್ಷ್ಮ ವಿಚಾರ ಮುರುಘಾ ಶರಣರಿಗೆ ಹೊಳೆಯಬೇಕಿತ್ತು. ನಮ್ಮ ಮುರುಘಾ ಶರಣರು ಬೆಂಬಲಿಸಿದ ಎಡೂರಪ್ಪ ಶರಣ. ಬಸವ ತತ್ವಪ್ರತಿಪಾದಕರಾಗಬೇಕಿತ್ತು. ಆದರೇ ಮಾಡಿದ್ದೆಲ್ಲಾ ಪುರೋಹಿತ ಶಾಹಿಗಳು ಹೇಳಿದ ಕೆಲಸವನ್ನು. ಅವರ ನಂತರ ಮುಖ್ಯಮಂತ್ರಿಯಾದ ಸಾದಲಿಂಗಾಯಿತರ ಬಸವರಾಜ ಬೊಮ್ಮಾಯಿ ಮತ್ತೊಬ್ಬ ಶರಣ. ಲಿಂಗಕಟ್ಟಿಗೊಂಡು ಇವರು ಮಾಡಿದ ಆಡಳಿತವೆಲ್ಲಾ ಕೇಶವಕೃಪಾದ ಆಜ್ಞೆಯ ಪರಿಪಾಲನೆ; ಹಿಜಾಬು, ನಮಾಜು, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಇತ್ಯಾದಿ ಕೇಶವ ಕೃಪದ ಮನೆಹಾಳು ಕೃತ್ಯಗಳ ಜಾರಿ ಮತ್ತು ಸಮರ್ಥನೆ; ಇದ ಒಬ್ಬ ಲಿಂಗದೀಕ್ಷೆಯ ಶರಣನ ಆಡಳಿತದಲ್ಲಿ ಜರುಗಿದ ದುಸ್ವಪ್ನ. ಸಿದ್ದರಾಮಯ್ಯ ಹುಟ್ಟಿನಿಂದ ಶರಣನಲ್ಲ. ಆದರೆ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಿದ್ದು ಬಸವ ಜಯಂತಿಯಂದು. ನಂತರ ಮಾಡಿದ್ದು ಶರಣರ ದಾಸೋಹ ಕಲ್ಪನೆಯ ಅನನಭಾಗ್ಯ ಮುಂತಾದ ಕೆಲಸ. ಹಾಗೆ ನೋಡಿದರೆ, ಲಿಂಗದೀಕ್ಷೆಗೂ ಶರಣ ತತ್ವ ಪ್ರತಿಪಾದನೆಗೂ ತಾಳಮೇಳವೇ ಇಲ್ಲವೆಂಬುದು ಮುರುಘಾ ಶರಣರಿಗೆ ಹೊಳೆಯಬೇಕಿತ್ತಂತಲ್ಲಾ, ಥೂತ್ತೆರಿ.

*****

ಚಿತ್ರದುರ್ಗದ ಮಠಕ್ಕೆ ಬಂದ ರಾಹುಲಗಾಂಧಿಯನ್ನ ಹಿಡಿದುಕೊಂಡ ಮುರುಘಾ ಶರಣರು, ಮೋದಿ ಒಬ್ಬ ಸಮರ್ಥನಾಯಕ, ಸದ್ಯ ನಮ್ಮ ಸುತ್ತಲೂ ಶತ್ರು ರಾಷ್ಟ್ರಗಳಿದ್ದು, ಅವುಗಳಿಂದ ದೇಶವನ್ನ ರಕ್ಷಿಸಬೇಕಾದರೆ ಮೋದಿಯಂತಹ ಸಮರ್ಥ ನಾಯಕ ಬೇಕೆಂದು ರಾಹುಲಗಾಂಧಿಗೇ ಹೇಳಿದರಂತಲ್ಲಾ. ಆಗ ಮುಗ್ದ ಬಾಲಕನಂತೆ ಮುರುಘಾ ಶರಣರ ಮುಖ ನೋಡಿದ ರಾಹುಲಗಾಂಧಿ, ಶರಣರ ಜ್ಞಾನಕ್ಕೆ ಮರುಕ ಪಟ್ಟಿರಬಹುದಲ್ಲವೆ. ಮುಖ್ಯವಾಗಿ ಕಾಮನ್ ಸೆನ್ಸ್ ಏಂಬುದೊಂದು ಮನಸ್ಥಿತಿ ಇದ್ದಿದ್ದರೆ, ಮೋದಿಯ ಸಮರ್ಥ ನಾಯಕತ್ವದ ಅರಿವಾಗಬೇಕಿತ್ತು. ಚೀನಾ ಅತಿಕ್ರಮಿಸಿರುವ ವಿಷಯವನ್ನು ದೇಶದ ಮುಂದೆ ಅವರು ಈವರೆಗೂ ಹೇಳಿಲ್ಲ. ಕೃಷಿ ಕಾಯ್ದೆ ಜಾರಿಮಾಡಿದ್ದಕ್ಕಾಗಿ ಒಂದು ವರ್ಷ ನಡೆದ ರೈತರ ಧರಣಿಯಲ್ಲಿ ಏಳುನೂರ ರೈತರು ಹತರಾದರು. ಆ ಬಗ್ಗೆ ಮೋದಿ ಈವರೆಗೂ ಪ್ರತಿಕ್ರಿಯಿಸಿಲ್ಲ. ಹೀಗಿರುವಾಗ, ಮೋದಿ ಒಬ್ಬ ಸಮರ್ಥ ಪ್ರಧಾನಿ ಎಂಬ ಅಭಿಪ್ರಾಯವನ್ನು ಹೊಂದಿರುವ ಮುರುಘಾ ಶರಣರು ಚಿತ್ರದುರ್ಗದಾಚೆಗೆ ದೇಶದ ಆಗುಹೋಗುಗಳನ್ನು ಕಣ್ಣುತೆರೆದು ನೋಡಿದರೆ ನಿಜದ ಅರಿವಾಗಬಹುದು ಎಂಬ ಅಭಿಪ್ರಾಯ ರಾಹುಲಗಾಂಧಿಗೆ ಹೊಳೆದಿರಬಹುದಂತಲ್ಲಾ, ಥೂತ್ತೆರಿ.

****

ಇನ್ನ ನಮ್ಮೂರ ಕೆರೆ ಕೋಡಿಯಲ್ಲಿ ಕುಳಿತಿರುವ ಕಾಲಜ್ಞಾನಿ ಸ್ವಾಮೀಜಿಗಳು ಎಂದಿನಂತೆ ಮತ್ತೆ ಜನಗಳನ್ನು ಹೆದರಿಸಿದ್ದಾರೆ. ದುರ್ದೈವವೆಂದರೆ ಅವರ ಮಾತುಗಳಿಗೆ ಯಾರೂ ಹೆದರಿದಂತೆ ಕಾಣದೇ ಇರುವುದರಿಂದ ಮತ್ತೆ ಗುಡಾಗಿದ್ದಾರಂತಲ್ಲಾ. ಆ ಗುಡುಗಿನ ಶಬ್ದ ಯಾವುದೆಂದರೆ ಕರ್ನಾಟಕ ಅತಿವೃಷ್ಠಿಯಿಂದ ಕಂಗೆಟ್ಟು ಹೋಗಲಿದೆ, ದಟ್ಟೈಸಿದ ಮೋಡದಿಂದ ಧಾರಾಕಾರ ಮಳೆಯಾಗುತ್ತದೆ. ಈ ಮಳೆ ದೆಸೆಯಿಂದ ಕೆರೆಕಟ್ಟಿ ತುಂಬಿ ಹರಿಯುತ್ತವೆ. ಆದಕಾರಣ ಕೆರೆಗೆ ಬಿಟ್ಟು ಸಾಕುತ್ತಿರುವ ಮೀನುಗಳು ಕೊಚ್ಚಿಕೊಂಡು ಹೋಗಿ ಕಂಡವರ ಪಾಲಾಗುತ್ತವೆ. ಕೆರೆ ಏರಿ ಹೊಡೆಯುತ್ತದೆ. ಮನೆಗಳ ಗೋಡೆ ಕುಸಿಯುತ್ತದೆ. ಗೋಡೆ ಕೆಳಗೆ ಸಿಕ್ಕವರು ಸತ್ತುಹೋಗುತ್ತಾರೆ. ಜಾನುವಾರುಗಳು ನೀರಲ್ಲಿ ತೇಲುತ್ತ ಹೋಗುತ್ತವೆ. ರಸ್ತೆಯ ಬದಿಯ ಮರಗಳು ರಸ್ತೆಗೇ ಉರುಳುತ್ತವೆ. ಸಂಚಾರಕ್ಕೆ ಅಡ್ಡಿಯಾಗುತ್ತದೆ. ದೇವಸ್ಥಾನ ಮಠಗಳಿಗೆ ಹೋಗುವ ಜನಗಳಿಗೆ ಅನಾನುಕೂಲವಾಗಿ ಪೂಜೆಪುನಸ್ಕಾರಗಳು ನಿಂತುಹೋಗುತ್ತವೆ. ಮಳೆಯಿಂದ ಬೆಳೆಗೆ ಹಾನಿಯಾಗುತ್ತದೆ. ಬೆಳೆಹಾನಿಯಿಂದ ಮಳೆ ಹೆಚ್ಚಾಗುತ್ತದೆ. ದಿನಕ್ಕೊಂದು ಕೊಲೆಯಾಗುತ್ತದೆ. ಕಳ್ಳತನ ಜಾಸ್ತಿಯಾಗುತ್ತದೆ. ಸರಕಾರದ ತನಿಖೆ ನಾಟಕವಾಗುತ್ತದೆ. ರಾಜ್ಯ ಆಳುವ ನಾಯಕನಿಗೆ ಅಪಾಯವಿದೆ. ಅವರಿಗೆ ಅನಾರೋಗ್ಯವುಂಟಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡು ಏನೇನೂ ಮಾತನಾಡುತ್ತಾರೆ, ಇದಕ್ಕೆ ಪರಿಹಾರವಿದೆ. ಈ ಆಷಾಢ ಮಾಸ ಮುಗಿದ ನಂತರ ಮಠಕ್ಕೆ ಒಂದುನೂರು ದೀಪ ಹಚ್ಚಿ ದಾಸೋಹನಡೆಸಿ ಗುರುವರ್ಯರ ಪಾದ ಹಿಡಿದರೆ ಎಲ್ಲವೂ ಸಾಂಗವಾಗಿ, ಅವರು ನಿರಾತಂಕವಾಗಿ ರಾಜ್ಯದಾಳಬಹುದೆಂಬ ಸಂದೇಶ ಹೊgಟಿದೆಯಂತಲ್ಲಾ, ಥೂಥೂ ಥೂತ್ತೆರಿ.


ಇದನ್ನೂ ಓದಿ: ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...