Homeಅಂಕಣಗಳುಮುರುಘಾ ಶರಣರ ಮರುಳು ಮಾತು ನಿಜವೆ?

ಮುರುಘಾ ಶರಣರ ಮರುಳು ಮಾತು ನಿಜವೆ?

- Advertisement -
- Advertisement -

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ ಕುಳಿತು ಸಿದ್ದರಾಮೋತ್ಸವ ನೋಡಿ, ಏನೂ ಹೇಳಲಾಗದ ಏನೂ ಮಾಡಲಾಗದ ಅಸಹಾಯಕತೆ ಚಡಪಡಿಕೆ ಪ್ರದರ್ಶಿಸಿದರು. ಕಾರಣ ಅವರೀಗ ಮುಖ್ಯಮಂತ್ರಿಯಲ್ಲಿ. ವಿರೋಧಪಕ್ಷದ ನಾಯಕರೂ ಅಲ್ಲ. ತಮ್ಮ ಅಧಿಕಾರಾವಧಿಯ ಮಧ್ಯದಲ್ಲೇ ಅವರನ್ನು ಕೆಳಗಿಳಿಸಲಾಯ್ತು. ಇಳಿಯುವಾಗಲಾದರೂ ಇಂತಹದೊಂದು ಎಡೂರು ಜಾತ್ರೆ ಮಾಡಿಬಿಡಬಹುದಿತ್ತು. ಆ ಜಾತ್ರೆಗೆ ಸರಕಾರದಿಂದ ಭಿಕ್ಷೆ ಪಡೆದ ಹಲವು ಜಗತ್ತಿನ ಜಗದ್ಗುರುಗಳ ಪರಿಷೆಯೇ ನೆರೆಯುತ್ತಿತ್ತು. ಸಹಜವಾಗಿ ಆ ಮಠಗಳ ಭಕ್ತಾದಿಗಳು, ಸರಕಾರಿ ಮತ್ತು ಖಾಸಗಿಯವರ ಸುವಿಹಾರಿ ಬಸ್ಸಿನಲ್ಲಿ ಬಂದಿಳಿಯುತ್ತಿದ್ದರು. ಅವರಿಗೆಲ್ಲಾ ಹೋಳಿಗೆ ಶೀಖರಣೆ ಊಟ ಹಾಕಿಕಳಿಸಬಹುದಿತ್ತು. ಪೀಠ ಹಿಡಿದು ಕುಳಿತಿರುವ ಸಿರಿವಂತ ಸ್ವಾಮಿಗಳು, ತಮ್ಮ ಎಂದಿನ ನಿಷ್ಠುರ ಮಾತುಗಳನ್ನು ಝಳಪಿಸಿ ಎಡೂರಪ್ಪನವರು ಎಂದಿಗೂ ಸ್ಥಾನ ಬಿಟ್ಟುಕೊಡಬಾರದು, ನನ್ನನ್ನಾದರೂ ನೋಡಿ ಅವರು ಧೈರ್ಯ ತುಂಬಿಕೊಳ್ಳಬೇಕೆಂದು ಅಪ್ಪಣೆ ಕೊಡಿಸಿದರೆ, ಇನ್ನ ಮುರುಘಾ ಮಠದವರು ಎಡೂರಪ್ಪನವರು ಎದೆಗುಂದಬಾರದು, ಸುತ್ತ ಮುತ್ತ ಶತ್ರುಗಳಿರುವಾಗ ಧೈರ್ಯದಿಂದ ರಾಜ್ಯವನ್ನಾಳಬೇಕು ಎಂದು ಹೇಳೇ ಹೇಳುತ್ತಿದ್ದರಂತಲ್ಲಾ, ಥೂತ್ತೆರಿ.

****

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಬಂದಿದ್ದ ರಾಹುಲಗಾಂಧಿಯನ್ನು ಒಂದರ್ಥದಲ್ಲಿ ಹೈಜಾಕ್ ಮಾಡಿದ ಡಿ.ಕೆ. ಶಿವಕುಮಾರ್ ತಾವು ಮುಂದೆ ಮುಖ್ಯಮಂತ್ರಿಯಾಗಲು ಶರಣ ಸಮೂಹದ ಓಟು ಬೇಕಾದ್ದರಿಂದ, ತಂತ್ರಗಾರಿಕೆ ನಡೆಸಿ, ಅದರಂತೆ ಮುರುಘಾ ಶರಣರಿಂದ ರಾಹುಲಗಾಂಧಿಗೆ ಲಿಂಗದೀಕ್ಷೆ ಕೊಡಿಸೇಬಿಟ್ಟರಂತಲ್ಲಾ. ಮುಖ್ಯವಾಗಿ ದಯವೇ ಧರ್ಮದ ಮೂಲವೆಂದು ಒಪ್ಪಿದವರೆಲ್ಲಾ ಬಸವಣ್ಣನ ಅನುಯಾಯಿಗಳಾಗುತ್ತಾರೆ. ಅವರಿಗೆ ಲಿಂಗದೀಕ್ಷೆಯ ಅಗತ್ಯವೇ ಇರುವುದಿಲ್ಲ. ಇಂತಹ ಸೂಕ್ಷ್ಮ ವಿಚಾರ ಮುರುಘಾ ಶರಣರಿಗೆ ಹೊಳೆಯಬೇಕಿತ್ತು. ನಮ್ಮ ಮುರುಘಾ ಶರಣರು ಬೆಂಬಲಿಸಿದ ಎಡೂರಪ್ಪ ಶರಣ. ಬಸವ ತತ್ವಪ್ರತಿಪಾದಕರಾಗಬೇಕಿತ್ತು. ಆದರೇ ಮಾಡಿದ್ದೆಲ್ಲಾ ಪುರೋಹಿತ ಶಾಹಿಗಳು ಹೇಳಿದ ಕೆಲಸವನ್ನು. ಅವರ ನಂತರ ಮುಖ್ಯಮಂತ್ರಿಯಾದ ಸಾದಲಿಂಗಾಯಿತರ ಬಸವರಾಜ ಬೊಮ್ಮಾಯಿ ಮತ್ತೊಬ್ಬ ಶರಣ. ಲಿಂಗಕಟ್ಟಿಗೊಂಡು ಇವರು ಮಾಡಿದ ಆಡಳಿತವೆಲ್ಲಾ ಕೇಶವಕೃಪಾದ ಆಜ್ಞೆಯ ಪರಿಪಾಲನೆ; ಹಿಜಾಬು, ನಮಾಜು, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧ ಇತ್ಯಾದಿ ಕೇಶವ ಕೃಪದ ಮನೆಹಾಳು ಕೃತ್ಯಗಳ ಜಾರಿ ಮತ್ತು ಸಮರ್ಥನೆ; ಇದ ಒಬ್ಬ ಲಿಂಗದೀಕ್ಷೆಯ ಶರಣನ ಆಡಳಿತದಲ್ಲಿ ಜರುಗಿದ ದುಸ್ವಪ್ನ. ಸಿದ್ದರಾಮಯ್ಯ ಹುಟ್ಟಿನಿಂದ ಶರಣನಲ್ಲ. ಆದರೆ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಿದ್ದು ಬಸವ ಜಯಂತಿಯಂದು. ನಂತರ ಮಾಡಿದ್ದು ಶರಣರ ದಾಸೋಹ ಕಲ್ಪನೆಯ ಅನನಭಾಗ್ಯ ಮುಂತಾದ ಕೆಲಸ. ಹಾಗೆ ನೋಡಿದರೆ, ಲಿಂಗದೀಕ್ಷೆಗೂ ಶರಣ ತತ್ವ ಪ್ರತಿಪಾದನೆಗೂ ತಾಳಮೇಳವೇ ಇಲ್ಲವೆಂಬುದು ಮುರುಘಾ ಶರಣರಿಗೆ ಹೊಳೆಯಬೇಕಿತ್ತಂತಲ್ಲಾ, ಥೂತ್ತೆರಿ.

*****

ಚಿತ್ರದುರ್ಗದ ಮಠಕ್ಕೆ ಬಂದ ರಾಹುಲಗಾಂಧಿಯನ್ನ ಹಿಡಿದುಕೊಂಡ ಮುರುಘಾ ಶರಣರು, ಮೋದಿ ಒಬ್ಬ ಸಮರ್ಥನಾಯಕ, ಸದ್ಯ ನಮ್ಮ ಸುತ್ತಲೂ ಶತ್ರು ರಾಷ್ಟ್ರಗಳಿದ್ದು, ಅವುಗಳಿಂದ ದೇಶವನ್ನ ರಕ್ಷಿಸಬೇಕಾದರೆ ಮೋದಿಯಂತಹ ಸಮರ್ಥ ನಾಯಕ ಬೇಕೆಂದು ರಾಹುಲಗಾಂಧಿಗೇ ಹೇಳಿದರಂತಲ್ಲಾ. ಆಗ ಮುಗ್ದ ಬಾಲಕನಂತೆ ಮುರುಘಾ ಶರಣರ ಮುಖ ನೋಡಿದ ರಾಹುಲಗಾಂಧಿ, ಶರಣರ ಜ್ಞಾನಕ್ಕೆ ಮರುಕ ಪಟ್ಟಿರಬಹುದಲ್ಲವೆ. ಮುಖ್ಯವಾಗಿ ಕಾಮನ್ ಸೆನ್ಸ್ ಏಂಬುದೊಂದು ಮನಸ್ಥಿತಿ ಇದ್ದಿದ್ದರೆ, ಮೋದಿಯ ಸಮರ್ಥ ನಾಯಕತ್ವದ ಅರಿವಾಗಬೇಕಿತ್ತು. ಚೀನಾ ಅತಿಕ್ರಮಿಸಿರುವ ವಿಷಯವನ್ನು ದೇಶದ ಮುಂದೆ ಅವರು ಈವರೆಗೂ ಹೇಳಿಲ್ಲ. ಕೃಷಿ ಕಾಯ್ದೆ ಜಾರಿಮಾಡಿದ್ದಕ್ಕಾಗಿ ಒಂದು ವರ್ಷ ನಡೆದ ರೈತರ ಧರಣಿಯಲ್ಲಿ ಏಳುನೂರ ರೈತರು ಹತರಾದರು. ಆ ಬಗ್ಗೆ ಮೋದಿ ಈವರೆಗೂ ಪ್ರತಿಕ್ರಿಯಿಸಿಲ್ಲ. ಹೀಗಿರುವಾಗ, ಮೋದಿ ಒಬ್ಬ ಸಮರ್ಥ ಪ್ರಧಾನಿ ಎಂಬ ಅಭಿಪ್ರಾಯವನ್ನು ಹೊಂದಿರುವ ಮುರುಘಾ ಶರಣರು ಚಿತ್ರದುರ್ಗದಾಚೆಗೆ ದೇಶದ ಆಗುಹೋಗುಗಳನ್ನು ಕಣ್ಣುತೆರೆದು ನೋಡಿದರೆ ನಿಜದ ಅರಿವಾಗಬಹುದು ಎಂಬ ಅಭಿಪ್ರಾಯ ರಾಹುಲಗಾಂಧಿಗೆ ಹೊಳೆದಿರಬಹುದಂತಲ್ಲಾ, ಥೂತ್ತೆರಿ.

****

ಇನ್ನ ನಮ್ಮೂರ ಕೆರೆ ಕೋಡಿಯಲ್ಲಿ ಕುಳಿತಿರುವ ಕಾಲಜ್ಞಾನಿ ಸ್ವಾಮೀಜಿಗಳು ಎಂದಿನಂತೆ ಮತ್ತೆ ಜನಗಳನ್ನು ಹೆದರಿಸಿದ್ದಾರೆ. ದುರ್ದೈವವೆಂದರೆ ಅವರ ಮಾತುಗಳಿಗೆ ಯಾರೂ ಹೆದರಿದಂತೆ ಕಾಣದೇ ಇರುವುದರಿಂದ ಮತ್ತೆ ಗುಡಾಗಿದ್ದಾರಂತಲ್ಲಾ. ಆ ಗುಡುಗಿನ ಶಬ್ದ ಯಾವುದೆಂದರೆ ಕರ್ನಾಟಕ ಅತಿವೃಷ್ಠಿಯಿಂದ ಕಂಗೆಟ್ಟು ಹೋಗಲಿದೆ, ದಟ್ಟೈಸಿದ ಮೋಡದಿಂದ ಧಾರಾಕಾರ ಮಳೆಯಾಗುತ್ತದೆ. ಈ ಮಳೆ ದೆಸೆಯಿಂದ ಕೆರೆಕಟ್ಟಿ ತುಂಬಿ ಹರಿಯುತ್ತವೆ. ಆದಕಾರಣ ಕೆರೆಗೆ ಬಿಟ್ಟು ಸಾಕುತ್ತಿರುವ ಮೀನುಗಳು ಕೊಚ್ಚಿಕೊಂಡು ಹೋಗಿ ಕಂಡವರ ಪಾಲಾಗುತ್ತವೆ. ಕೆರೆ ಏರಿ ಹೊಡೆಯುತ್ತದೆ. ಮನೆಗಳ ಗೋಡೆ ಕುಸಿಯುತ್ತದೆ. ಗೋಡೆ ಕೆಳಗೆ ಸಿಕ್ಕವರು ಸತ್ತುಹೋಗುತ್ತಾರೆ. ಜಾನುವಾರುಗಳು ನೀರಲ್ಲಿ ತೇಲುತ್ತ ಹೋಗುತ್ತವೆ. ರಸ್ತೆಯ ಬದಿಯ ಮರಗಳು ರಸ್ತೆಗೇ ಉರುಳುತ್ತವೆ. ಸಂಚಾರಕ್ಕೆ ಅಡ್ಡಿಯಾಗುತ್ತದೆ. ದೇವಸ್ಥಾನ ಮಠಗಳಿಗೆ ಹೋಗುವ ಜನಗಳಿಗೆ ಅನಾನುಕೂಲವಾಗಿ ಪೂಜೆಪುನಸ್ಕಾರಗಳು ನಿಂತುಹೋಗುತ್ತವೆ. ಮಳೆಯಿಂದ ಬೆಳೆಗೆ ಹಾನಿಯಾಗುತ್ತದೆ. ಬೆಳೆಹಾನಿಯಿಂದ ಮಳೆ ಹೆಚ್ಚಾಗುತ್ತದೆ. ದಿನಕ್ಕೊಂದು ಕೊಲೆಯಾಗುತ್ತದೆ. ಕಳ್ಳತನ ಜಾಸ್ತಿಯಾಗುತ್ತದೆ. ಸರಕಾರದ ತನಿಖೆ ನಾಟಕವಾಗುತ್ತದೆ. ರಾಜ್ಯ ಆಳುವ ನಾಯಕನಿಗೆ ಅಪಾಯವಿದೆ. ಅವರಿಗೆ ಅನಾರೋಗ್ಯವುಂಟಾಗಿ ಮಾನಸಿಕ ನೆಮ್ಮದಿ ಕಳೆದುಕೊಂಡು ಏನೇನೂ ಮಾತನಾಡುತ್ತಾರೆ, ಇದಕ್ಕೆ ಪರಿಹಾರವಿದೆ. ಈ ಆಷಾಢ ಮಾಸ ಮುಗಿದ ನಂತರ ಮಠಕ್ಕೆ ಒಂದುನೂರು ದೀಪ ಹಚ್ಚಿ ದಾಸೋಹನಡೆಸಿ ಗುರುವರ್ಯರ ಪಾದ ಹಿಡಿದರೆ ಎಲ್ಲವೂ ಸಾಂಗವಾಗಿ, ಅವರು ನಿರಾತಂಕವಾಗಿ ರಾಜ್ಯದಾಳಬಹುದೆಂಬ ಸಂದೇಶ ಹೊgಟಿದೆಯಂತಲ್ಲಾ, ಥೂಥೂ ಥೂತ್ತೆರಿ.


ಇದನ್ನೂ ಓದಿ: ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...